10:18 AM Tuesday9 - June 2026
ಬ್ರೇಕಿಂಗ್ ನ್ಯೂಸ್
ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು… ತೀರ್ಥಹಳ್ಳಿ ತಾಲೂಕಿನ ಫಾರಂ ಹೌಸ್ ನಲ್ಲಿ ಕಳ್ಳತನ: 1 ಲಕ್ಷಕ್ಕೂ ಹೆಚ್ಚು ಮೌಲ್ಯದ… Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ…

ಇತ್ತೀಚಿನ ಸುದ್ದಿ

ನಂಜನಗೂಡು: ಕಳಲೆ ಶ್ರೀ ಸೋಮೇಶ್ವರ ಸ್ವಾಮಿ ದೇವಾಲಯದಲ್ಲಿ ದೀಪೋತ್ಸವ

26/11/2024, 14:17

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ದಕ್ಷಿಣ ಕಾಶಿ ನಂಜನಗೂಡಿನ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ ದೇವಾಲಯದ ಹಳೆಯದಾದ ಹಾಗೂ ಪುರಾಣ ಪ್ರಸಿದ್ಧ ಶ್ರೀ ಸೋಮೇಶ್ವರ ಸ್ವಾಮಿ ದೇವಾಲಯದಲ್ಲಿ ಕಡೆ ಕಾರ್ತಿಕ ಮಾಸದ ಅಂಗವಾಗಿ ದೀಪೋತ್ಸವ ಹಾಗೂ ನೂತನ ಕೊಳಗ ದಾರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.


ಕಾರ್ಯಕ್ರಮದ ಅಂಗವಾಗಿ ದೇವಾಲಯವನ್ನು ಬಣ್ಣ ಬಣ್ಣದ ಹೂ ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಇದೇ ಸಂದರ್ಭ ನಂಜನಗೂಡಿನ ವೈದ್ಯ ದಂಪತಿಗಳಾದ ಡಾ. ಗೀತಾ ಹಾಗೂ ಡಾ. ರವಿ ಅವರು ನೂತನವಾಗಿ ಮಾಡಿಸಿಕೊಟ್ಟ ಹಿತ್ತಾಳೆ ಕವಚದ ಮೂರ್ತಿಯನ್ನು ಧಾರಣೆ ಮಾಡಿ ಬಣ್ಣದ ಹೂಗಳಿಂದ ಅಲಂಕರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಪೂಜಾ ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಪಾಲ್ಗೊಂಡು ದೀಪ ಹಚ್ಚುವ ಮೂಲಕ ದೇವರ ದರ್ಶನ ಪಡೆದು ತಮ್ಮ ಭಕ್ತಿ ನಮನ ಸಲ್ಲಿಸಿದರು. ಗ್ರಾಮದ ಯುವಕರ ನೇತೃತ್ವದಲ್ಲಿ ಬಂದ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು. ದೇವಾಲಯದ ಪಾರುಪತ್ತೆಗಾರ ಜಯರಾಮ್ ಮಾತನಾಡಿ ಕಾರ್ಯಕ್ರಮದ ಬಗ್ಗೆ ತಿಳಿಸಿ ಶಿಥಿಲ ಗೊಳ್ಳುತ್ತಿರುವ ಆನಾದಿಕಾಲದ ಇಂತಹ ಪುರಾತನ ಪರಂಪರೆ ಉಳ್ಳ ದೇವಾಲಯಗಳ ರಕ್ಷಣೆಗೆ ತಾಲೂಕು ಮತ್ತು ಜಿಲ್ಲಾಡಳಿತ ಹಾಗೂ ಸಾರ್ವಜನಿಕರು ಮುಂದಾಗಬೇಕು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು