9:40 AM Saturday21 - February 2026
ಬ್ರೇಕಿಂಗ್ ನ್ಯೂಸ್
ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ

ಇತ್ತೀಚಿನ ಸುದ್ದಿ

ನಂಜನಗೂಡು: ಮೌನ ಕ್ರಾಂತಿಯ ಹರಿಕಾರರಾದ ನಾರಾಯಣಗುರು ಹಾಗೂ ದೇವರಾಜ ಅರಸು ಜಯಂತಿ ಆಚರಣೆ

21/08/2024, 20:02

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಹಿಂದುಳಿದ ವರ್ಗಗಳ ನೇತಾರರೂ, ಮೌನ ಕ್ರಾಂತಿಯ ಹರಿಕಾರರು ಆದ ನಾರಾಯಣ ಗುರು ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ಅವರ ಜಯಂತಿ ಆಚರಿಸಲಾಯಿತು.
ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ದರ್ಶನ್ ಧ್ರುವನಾರಾಯಣ್ ಹಾಗೂ ಮತ್ತಿತರ ಗಣ್ಯರು ದೀಪ ಬೆಳಗಿಸಿ ಇಬ್ಬರ ಭಾವಚಿತ್ರಕ್ಕೂ ಪುಷ್ಪಾರ್ಚನೆ ಮಾಡುವ ಮೂಲಕ ನೆರವೇರಿಸಿದರು.
ಕಾರ್ಯಕ್ರಮ ಉದ್ಘಾಟಿಸಿ ಶಾಸಕ ದರ್ಶನ್ ದ್ರುವ ನಾರಾಯಣ್ ಮಾತನಾಡಿ, ಬುದ್ಧ, ಬಸವ, ಅಂಬೇಡ್ಕರ್, ಅವರಂತೆ ಈ ಇಬ್ಬರು ಮಹಾನ್ ಚೇತನಗಳ ಗುರಿಯು ಒಂದೇ ಆಗಿದ್ದು ಸಮ ಸಮಾಜದ ನಿರ್ಮಾಣ ಹಾಗೂ ದೀನ ದಲಿತರ ಮತ್ತು ಹಿಂದುಳಿದ ವರ್ಗಗಳ ಆಶಾಕಿರಣಗಳಾಗಿ ಸಮಾಜಕ್ಕೆ ಹಲವಾರು ಕೊಡುಗೆಗಳನ್ನು ನೀಡಿದ್ದಾರೆ. ಹಾಗಾಗಿ ಇಂದಿನ ಯುವ ಪೀಳಿಗೆ ಇವರ ಮಾರ್ಗದರ್ಶನ ಹಾಗೂ ತತ್ವ ಆದರ್ಶನಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಮುಖ್ಯ ಭಾಷಣಕಾರರಾಗಿ ವಿದ್ಯಾಸಾಗರ್ ಕದಂಬ ಹಾಗೂ ಪೃಥ್ವಿರಾಜ್ ಅವರು ಶ್ರೀ ನಾರಾಯಣ ಗುರು ಹಾಗೂ ದೇವರಾಜ್ ಅರಸು ಅವರ ಜೀವನ ಚರಿತ್ರೆ ಹಾಗೂ ತತ್ವ ಆದರ್ಶಗಳ ಬಗ್ಗೆ ವಿವರಿಸಿದರು.


ಇದೇ ಸಂದರ್ಭ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಅಲ್ಲದೆ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಸತಿ ಶಾಲಾ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿವಿಧ ಆಟೋಟ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಣೆಯನ್ನು ಸಹ ಮಾಡಲಾಯಿತು. ವಿವಿಧ ವಸತಿ ಶಾಲಾ ಮಕ್ಕಳು ನಡೆಸಿಕೊಟ್ಟ ಭರತನಾಟ್ಯ ಹಾಗೂ ಯೋಗ ಕಾರ್ಯಕ್ರಮಗಳು ನೋಡುಗರ ಮನಸೂರೆಗೊಂಡವು.
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಶಿವಕುಮಾರ್ ಕಾಸನೂರು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಜೇಶ್ ಜೆರಾಲ್ಡ್, ಪೌರಾ ಯುಕ್ತ ನಂಜುಂಡಸ್ವಾಮಿ, ಡಿ ವೈ ಎಸ್ ಪಿ ರಘು, ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿ ಸ್ವರ್ಣ ಲತಾ, ಮುಖಂಡರಾದ ಕುರಟ್ಟಿ ಮಹೇಶ್, ಗಿರೀಶ್, ಪ್ರಕಾಶ್ ರಾಜೇ ಅರಸ್ ಸೇರಿದಂತೆ ನಗರಸಭಾ ಸದಸ್ಯರುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು