2:24 PM Sunday24 - August 2025
ಬ್ರೇಕಿಂಗ್ ನ್ಯೂಸ್
Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಟ್ಟು ಗುಳ್ಳ ನಂಟು ಉಡುಪಿ ಮಠಕ್ಕೂ ಉಂಟು: ವಾದಿರಾಜ ತೀರ್ಥರು ಬದನೆಗೆ ಹೆಸರಿಟ್ಟರಂತೆ!

ಇತ್ತೀಚಿನ ಸುದ್ದಿ

ನಂಜನಗೂಡು: ಮೌನ ಕ್ರಾಂತಿಯ ಹರಿಕಾರರಾದ ನಾರಾಯಣಗುರು ಹಾಗೂ ದೇವರಾಜ ಅರಸು ಜಯಂತಿ ಆಚರಣೆ

21/08/2024, 20:02

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಹಿಂದುಳಿದ ವರ್ಗಗಳ ನೇತಾರರೂ, ಮೌನ ಕ್ರಾಂತಿಯ ಹರಿಕಾರರು ಆದ ನಾರಾಯಣ ಗುರು ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ಅವರ ಜಯಂತಿ ಆಚರಿಸಲಾಯಿತು.
ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ದರ್ಶನ್ ಧ್ರುವನಾರಾಯಣ್ ಹಾಗೂ ಮತ್ತಿತರ ಗಣ್ಯರು ದೀಪ ಬೆಳಗಿಸಿ ಇಬ್ಬರ ಭಾವಚಿತ್ರಕ್ಕೂ ಪುಷ್ಪಾರ್ಚನೆ ಮಾಡುವ ಮೂಲಕ ನೆರವೇರಿಸಿದರು.
ಕಾರ್ಯಕ್ರಮ ಉದ್ಘಾಟಿಸಿ ಶಾಸಕ ದರ್ಶನ್ ದ್ರುವ ನಾರಾಯಣ್ ಮಾತನಾಡಿ, ಬುದ್ಧ, ಬಸವ, ಅಂಬೇಡ್ಕರ್, ಅವರಂತೆ ಈ ಇಬ್ಬರು ಮಹಾನ್ ಚೇತನಗಳ ಗುರಿಯು ಒಂದೇ ಆಗಿದ್ದು ಸಮ ಸಮಾಜದ ನಿರ್ಮಾಣ ಹಾಗೂ ದೀನ ದಲಿತರ ಮತ್ತು ಹಿಂದುಳಿದ ವರ್ಗಗಳ ಆಶಾಕಿರಣಗಳಾಗಿ ಸಮಾಜಕ್ಕೆ ಹಲವಾರು ಕೊಡುಗೆಗಳನ್ನು ನೀಡಿದ್ದಾರೆ. ಹಾಗಾಗಿ ಇಂದಿನ ಯುವ ಪೀಳಿಗೆ ಇವರ ಮಾರ್ಗದರ್ಶನ ಹಾಗೂ ತತ್ವ ಆದರ್ಶನಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಮುಖ್ಯ ಭಾಷಣಕಾರರಾಗಿ ವಿದ್ಯಾಸಾಗರ್ ಕದಂಬ ಹಾಗೂ ಪೃಥ್ವಿರಾಜ್ ಅವರು ಶ್ರೀ ನಾರಾಯಣ ಗುರು ಹಾಗೂ ದೇವರಾಜ್ ಅರಸು ಅವರ ಜೀವನ ಚರಿತ್ರೆ ಹಾಗೂ ತತ್ವ ಆದರ್ಶಗಳ ಬಗ್ಗೆ ವಿವರಿಸಿದರು.


ಇದೇ ಸಂದರ್ಭ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಅಲ್ಲದೆ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಸತಿ ಶಾಲಾ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿವಿಧ ಆಟೋಟ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಣೆಯನ್ನು ಸಹ ಮಾಡಲಾಯಿತು. ವಿವಿಧ ವಸತಿ ಶಾಲಾ ಮಕ್ಕಳು ನಡೆಸಿಕೊಟ್ಟ ಭರತನಾಟ್ಯ ಹಾಗೂ ಯೋಗ ಕಾರ್ಯಕ್ರಮಗಳು ನೋಡುಗರ ಮನಸೂರೆಗೊಂಡವು.
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಶಿವಕುಮಾರ್ ಕಾಸನೂರು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಜೇಶ್ ಜೆರಾಲ್ಡ್, ಪೌರಾ ಯುಕ್ತ ನಂಜುಂಡಸ್ವಾಮಿ, ಡಿ ವೈ ಎಸ್ ಪಿ ರಘು, ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿ ಸ್ವರ್ಣ ಲತಾ, ಮುಖಂಡರಾದ ಕುರಟ್ಟಿ ಮಹೇಶ್, ಗಿರೀಶ್, ಪ್ರಕಾಶ್ ರಾಜೇ ಅರಸ್ ಸೇರಿದಂತೆ ನಗರಸಭಾ ಸದಸ್ಯರುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು