3:31 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ನಂಜನಗೂಡು: ಮೌನ ಕ್ರಾಂತಿಯ ಹರಿಕಾರರಾದ ನಾರಾಯಣಗುರು ಹಾಗೂ ದೇವರಾಜ ಅರಸು ಜಯಂತಿ ಆಚರಣೆ

21/08/2024, 20:02

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಹಿಂದುಳಿದ ವರ್ಗಗಳ ನೇತಾರರೂ, ಮೌನ ಕ್ರಾಂತಿಯ ಹರಿಕಾರರು ಆದ ನಾರಾಯಣ ಗುರು ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ಅವರ ಜಯಂತಿ ಆಚರಿಸಲಾಯಿತು.
ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ದರ್ಶನ್ ಧ್ರುವನಾರಾಯಣ್ ಹಾಗೂ ಮತ್ತಿತರ ಗಣ್ಯರು ದೀಪ ಬೆಳಗಿಸಿ ಇಬ್ಬರ ಭಾವಚಿತ್ರಕ್ಕೂ ಪುಷ್ಪಾರ್ಚನೆ ಮಾಡುವ ಮೂಲಕ ನೆರವೇರಿಸಿದರು.
ಕಾರ್ಯಕ್ರಮ ಉದ್ಘಾಟಿಸಿ ಶಾಸಕ ದರ್ಶನ್ ದ್ರುವ ನಾರಾಯಣ್ ಮಾತನಾಡಿ, ಬುದ್ಧ, ಬಸವ, ಅಂಬೇಡ್ಕರ್, ಅವರಂತೆ ಈ ಇಬ್ಬರು ಮಹಾನ್ ಚೇತನಗಳ ಗುರಿಯು ಒಂದೇ ಆಗಿದ್ದು ಸಮ ಸಮಾಜದ ನಿರ್ಮಾಣ ಹಾಗೂ ದೀನ ದಲಿತರ ಮತ್ತು ಹಿಂದುಳಿದ ವರ್ಗಗಳ ಆಶಾಕಿರಣಗಳಾಗಿ ಸಮಾಜಕ್ಕೆ ಹಲವಾರು ಕೊಡುಗೆಗಳನ್ನು ನೀಡಿದ್ದಾರೆ. ಹಾಗಾಗಿ ಇಂದಿನ ಯುವ ಪೀಳಿಗೆ ಇವರ ಮಾರ್ಗದರ್ಶನ ಹಾಗೂ ತತ್ವ ಆದರ್ಶನಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಮುಖ್ಯ ಭಾಷಣಕಾರರಾಗಿ ವಿದ್ಯಾಸಾಗರ್ ಕದಂಬ ಹಾಗೂ ಪೃಥ್ವಿರಾಜ್ ಅವರು ಶ್ರೀ ನಾರಾಯಣ ಗುರು ಹಾಗೂ ದೇವರಾಜ್ ಅರಸು ಅವರ ಜೀವನ ಚರಿತ್ರೆ ಹಾಗೂ ತತ್ವ ಆದರ್ಶಗಳ ಬಗ್ಗೆ ವಿವರಿಸಿದರು.


ಇದೇ ಸಂದರ್ಭ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಅಲ್ಲದೆ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಸತಿ ಶಾಲಾ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿವಿಧ ಆಟೋಟ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಣೆಯನ್ನು ಸಹ ಮಾಡಲಾಯಿತು. ವಿವಿಧ ವಸತಿ ಶಾಲಾ ಮಕ್ಕಳು ನಡೆಸಿಕೊಟ್ಟ ಭರತನಾಟ್ಯ ಹಾಗೂ ಯೋಗ ಕಾರ್ಯಕ್ರಮಗಳು ನೋಡುಗರ ಮನಸೂರೆಗೊಂಡವು.
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಶಿವಕುಮಾರ್ ಕಾಸನೂರು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಜೇಶ್ ಜೆರಾಲ್ಡ್, ಪೌರಾ ಯುಕ್ತ ನಂಜುಂಡಸ್ವಾಮಿ, ಡಿ ವೈ ಎಸ್ ಪಿ ರಘು, ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿ ಸ್ವರ್ಣ ಲತಾ, ಮುಖಂಡರಾದ ಕುರಟ್ಟಿ ಮಹೇಶ್, ಗಿರೀಶ್, ಪ್ರಕಾಶ್ ರಾಜೇ ಅರಸ್ ಸೇರಿದಂತೆ ನಗರಸಭಾ ಸದಸ್ಯರುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು