7:26 PM Tuesday31 - March 2026
ಬ್ರೇಕಿಂಗ್ ನ್ಯೂಸ್
ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.…

ಇತ್ತೀಚಿನ ಸುದ್ದಿ

ನಂದಳಿಕೆ: ‘ಸತ್ಯಮಾಲೋಕಂದ ಸಿರಿ’ ತುಳು ಕೃತಿ ಲೋಕಾರ್ಪಣೆ

03/07/2023, 11:31

ನಂದಳಿಕೆ(reporterkarnataka.com): ಕೃತಿ ಬರೆಯಲು ಇಚ್ಚಾಶಕ್ತಿ, ಶ್ರದ್ಧೆ ಪ್ರಮುಖ ಪಾತ್ರವಹಿಸುತ್ತದೆ ಎಂದು ತುಳುಕೂಟ ಉಡುಪಿ ಇದರ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ ಹೇಳಿದರು ಅವರು ನಂದಳಿಕೆ ಮಹಾಲಿಂಗೇಶ್ವರ ದೇವಾಲಯದ ಸಭಾಂಗಣದಲ್ಲಿ ಚಾವಡಿ ಅರಮನೆಯ ಸರಳಾ ಎಸ್. ಎಸ್. ಹೆಗ್ಡೆ ಬರೆದ “ಸತ್ಯಮಾಲೋಕಂದ ಸಿರಿ” ಕೃತಿ ಲೋಕಾರ್ಪಣೆ ಗೊಳಿಸಿ ಮಾತನಾಡಿದರು.
ತುಳುನಾಡು ದೈವಗಳನಾಡಗಿದೆ. ಇಲ್ಲಿನ ಸಿರಿಗಳ ಕಾರ್ಣಿಕ ಮೂಲಕ ಸಂಸ್ಕೃತಿಯ ಶ್ರೀಮಂತಿಕೆ ತೋರಿಸುತ್ತದೆ. ಸಿರಿಗಳ ಜನಪದವನ್ನು ಕೃತಿಯನ್ನಾಗಿಸಿ ಉಳಿಸುವ ಕಾರ್ಯ ಮಹತ್ವದ್ದಾಗಿದೆ ಎಂದರು.

ವಿಜಯಾ ಬ್ಯಾಂಕ್ ವಿಶ್ರಾಂತ ಪ್ರಬಂಧಕ ಭುವನ ಪ್ರಸಾದ್ ಹೆಗ್ಡೆ ಮಾತನಾಡಿ, ನಂದಳಿಕೆ ಸಿರಿ ಜಾತ್ರೆಗೆ ಪ್ರಸಿದ್ಧವಾಗಿದೆ. ಇಲ್ಲಿಯ ಸಿರಿಗಳ ಕಥೆಗಳನ್ನು ಪುಸ್ತಕ ರೂಪದಲ್ಲಿ ಬರೆದಿರುವುದು ಅಭಿನಂದನಾರ್ಹವಾಗಿದೆ. ಮುಂದಿನ ಜನಾಂಗಕ್ಕೆ ಸ್ಥಳದ ಮಹತ್ವದ ಹಾಗೂ ಇತಿಹಾಸ ಗುರುತಿಸಲು ಸಾಧ್ಯವಾಗುತ್ತದೆ. ಕವಿ ಮುದ್ದಣ ಸೇರಿದಂತೆ ಅನೇಕ ಸಾಹಿತಿಗಳ ನಂದಳಿಕೆಯೆ ಮೂಲವಾಗಿದೆ ಎಂದರು.
ಜನಪದ ವಿದ್ವಾಂಸ ಭುವನೇಂದ್ರ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥ ಡಾ. ಅರುಣ ಕುಮಾರ್ ಎಸ್. ಆರ್. ಮಾತನಾಡಿ ಸತ್ಯಮಾಲೋಕಂದ ಸಿರಿ ಈ ಪುಸ್ತಕದಲ್ಲಿ ಶ್ರೀಮಂತ ತುಳುನಾಡ ಸಂಸ್ಕೃತಿಯನ್ನು ತೆರೆದಿಡಲಾಗಿದೆ. ಕುಂದಾಪುರದಿಂದ ಹಿಡಿದು ಉಜಿರೆ ವರೆಗಿನ ಶ್ರೀಮಂತ ತುಳುನಾಡು ಸಿರಿಗಳ ಆರಾಧನೆಯ ಕಥೆಗಳು ಯುವಜನಾಂಗಕ್ಕೆ ತಿಳಿಸಿಕೊಡುವ ಪ್ರಯತ್ನ ಮಾಡಲಾಗಿದೆ. ಪುಸ್ತಕ ಅನಾವರಣ ಮಾಡುವ ಮೂಲಕ ತುಳುನಾಡಿನ ಇತಿಹಾಸವನ್ನು ಮರುಕಳಿಸುವ ಪ್ರಯತ್ನ ಮಾಡಲಾಗಿದೆ ಎಂದರು.
ಲೇಖಕಿ ಸರಳಾ ಎಸ್. ಹೆಗ್ಡೆ, ಮಾತನಾಡಿ ಪಾರ್ದನಗಳು ಒಬ್ಬರಿಂದ ಇನ್ನೊಬ್ಬರಿಗೆ ಭಿನ್ನವಾಗಿರುತ್ತದೆ. ಅದನ್ನು ಕ್ರೋಢೀಕರಿಸಿ ಪುಸ್ತಕ ಬರೆಯಲಾಗಿದೆ ಎಂದರು.
ಕವತ್ತಾರು ವಿಷ್ಣುರಾಜ ಭಟ್, ದೇವಸ್ಥಾನದ ತಂತ್ರಿ ಹರೀಶ್ ತಂತ್ರಿ ಮಾತನಾಡಿ ಶುಭಹಾರೈಸಿದರು.
ಸಭೆಯಲ್ಲಿ ನಂದಳಿಕೆ ಮಹಾಲಿಂಗೇಶ್ವರ ದೇವಸ್ಥಾನದ ಅನುವಂಶಿಕ ಮೊಕ್ತೆಸರ ಚಾವಡಿ ಅರಮನೆಯ ಸುಂದರರಾಮ ಹೆಗ್ಡೆ ಉಪಸ್ಥಿತರಿದ್ದರು, ಜಯಂತಿ ಶೆಟ್ಟಿ ಪ್ರಾರ್ಥಿಸಿದರು. ನಂದಳಿಕೆ ಸುಹಾಸ್ ಹೆಗ್ಡೆ ಸ್ವಾಗತಿಸಿದರು. ಸೀತಾರಾಂ ಭಟ್ ಕಾರ್ಯಕ್ರಮ ನಿರೂಪಿಸಿದರು. ಸುಧಾಕರ್ ಧನ್ಯವಾದವಿತ್ತರು.

ಇತ್ತೀಚಿನ ಸುದ್ದಿ

ಜಾಹೀರಾತು