11:25 PM Tuesday30 - December 2025
ಬ್ರೇಕಿಂಗ್ ನ್ಯೂಸ್
ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ

ಇತ್ತೀಚಿನ ಸುದ್ದಿ

ನಂದಳಿಕೆ: ‘ಸತ್ಯಮಾಲೋಕಂದ ಸಿರಿ’ ತುಳು ಕೃತಿ ಲೋಕಾರ್ಪಣೆ

03/07/2023, 11:31

ನಂದಳಿಕೆ(reporterkarnataka.com): ಕೃತಿ ಬರೆಯಲು ಇಚ್ಚಾಶಕ್ತಿ, ಶ್ರದ್ಧೆ ಪ್ರಮುಖ ಪಾತ್ರವಹಿಸುತ್ತದೆ ಎಂದು ತುಳುಕೂಟ ಉಡುಪಿ ಇದರ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ ಹೇಳಿದರು ಅವರು ನಂದಳಿಕೆ ಮಹಾಲಿಂಗೇಶ್ವರ ದೇವಾಲಯದ ಸಭಾಂಗಣದಲ್ಲಿ ಚಾವಡಿ ಅರಮನೆಯ ಸರಳಾ ಎಸ್. ಎಸ್. ಹೆಗ್ಡೆ ಬರೆದ “ಸತ್ಯಮಾಲೋಕಂದ ಸಿರಿ” ಕೃತಿ ಲೋಕಾರ್ಪಣೆ ಗೊಳಿಸಿ ಮಾತನಾಡಿದರು.
ತುಳುನಾಡು ದೈವಗಳನಾಡಗಿದೆ. ಇಲ್ಲಿನ ಸಿರಿಗಳ ಕಾರ್ಣಿಕ ಮೂಲಕ ಸಂಸ್ಕೃತಿಯ ಶ್ರೀಮಂತಿಕೆ ತೋರಿಸುತ್ತದೆ. ಸಿರಿಗಳ ಜನಪದವನ್ನು ಕೃತಿಯನ್ನಾಗಿಸಿ ಉಳಿಸುವ ಕಾರ್ಯ ಮಹತ್ವದ್ದಾಗಿದೆ ಎಂದರು.

ವಿಜಯಾ ಬ್ಯಾಂಕ್ ವಿಶ್ರಾಂತ ಪ್ರಬಂಧಕ ಭುವನ ಪ್ರಸಾದ್ ಹೆಗ್ಡೆ ಮಾತನಾಡಿ, ನಂದಳಿಕೆ ಸಿರಿ ಜಾತ್ರೆಗೆ ಪ್ರಸಿದ್ಧವಾಗಿದೆ. ಇಲ್ಲಿಯ ಸಿರಿಗಳ ಕಥೆಗಳನ್ನು ಪುಸ್ತಕ ರೂಪದಲ್ಲಿ ಬರೆದಿರುವುದು ಅಭಿನಂದನಾರ್ಹವಾಗಿದೆ. ಮುಂದಿನ ಜನಾಂಗಕ್ಕೆ ಸ್ಥಳದ ಮಹತ್ವದ ಹಾಗೂ ಇತಿಹಾಸ ಗುರುತಿಸಲು ಸಾಧ್ಯವಾಗುತ್ತದೆ. ಕವಿ ಮುದ್ದಣ ಸೇರಿದಂತೆ ಅನೇಕ ಸಾಹಿತಿಗಳ ನಂದಳಿಕೆಯೆ ಮೂಲವಾಗಿದೆ ಎಂದರು.
ಜನಪದ ವಿದ್ವಾಂಸ ಭುವನೇಂದ್ರ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥ ಡಾ. ಅರುಣ ಕುಮಾರ್ ಎಸ್. ಆರ್. ಮಾತನಾಡಿ ಸತ್ಯಮಾಲೋಕಂದ ಸಿರಿ ಈ ಪುಸ್ತಕದಲ್ಲಿ ಶ್ರೀಮಂತ ತುಳುನಾಡ ಸಂಸ್ಕೃತಿಯನ್ನು ತೆರೆದಿಡಲಾಗಿದೆ. ಕುಂದಾಪುರದಿಂದ ಹಿಡಿದು ಉಜಿರೆ ವರೆಗಿನ ಶ್ರೀಮಂತ ತುಳುನಾಡು ಸಿರಿಗಳ ಆರಾಧನೆಯ ಕಥೆಗಳು ಯುವಜನಾಂಗಕ್ಕೆ ತಿಳಿಸಿಕೊಡುವ ಪ್ರಯತ್ನ ಮಾಡಲಾಗಿದೆ. ಪುಸ್ತಕ ಅನಾವರಣ ಮಾಡುವ ಮೂಲಕ ತುಳುನಾಡಿನ ಇತಿಹಾಸವನ್ನು ಮರುಕಳಿಸುವ ಪ್ರಯತ್ನ ಮಾಡಲಾಗಿದೆ ಎಂದರು.
ಲೇಖಕಿ ಸರಳಾ ಎಸ್. ಹೆಗ್ಡೆ, ಮಾತನಾಡಿ ಪಾರ್ದನಗಳು ಒಬ್ಬರಿಂದ ಇನ್ನೊಬ್ಬರಿಗೆ ಭಿನ್ನವಾಗಿರುತ್ತದೆ. ಅದನ್ನು ಕ್ರೋಢೀಕರಿಸಿ ಪುಸ್ತಕ ಬರೆಯಲಾಗಿದೆ ಎಂದರು.
ಕವತ್ತಾರು ವಿಷ್ಣುರಾಜ ಭಟ್, ದೇವಸ್ಥಾನದ ತಂತ್ರಿ ಹರೀಶ್ ತಂತ್ರಿ ಮಾತನಾಡಿ ಶುಭಹಾರೈಸಿದರು.
ಸಭೆಯಲ್ಲಿ ನಂದಳಿಕೆ ಮಹಾಲಿಂಗೇಶ್ವರ ದೇವಸ್ಥಾನದ ಅನುವಂಶಿಕ ಮೊಕ್ತೆಸರ ಚಾವಡಿ ಅರಮನೆಯ ಸುಂದರರಾಮ ಹೆಗ್ಡೆ ಉಪಸ್ಥಿತರಿದ್ದರು, ಜಯಂತಿ ಶೆಟ್ಟಿ ಪ್ರಾರ್ಥಿಸಿದರು. ನಂದಳಿಕೆ ಸುಹಾಸ್ ಹೆಗ್ಡೆ ಸ್ವಾಗತಿಸಿದರು. ಸೀತಾರಾಂ ಭಟ್ ಕಾರ್ಯಕ್ರಮ ನಿರೂಪಿಸಿದರು. ಸುಧಾಕರ್ ಧನ್ಯವಾದವಿತ್ತರು.

ಇತ್ತೀಚಿನ ಸುದ್ದಿ

ಜಾಹೀರಾತು