7:46 AM Friday4 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ನಂದಳಿಕೆ: ‘ಸತ್ಯಮಾಲೋಕಂದ ಸಿರಿ’ ತುಳು ಕೃತಿ ಲೋಕಾರ್ಪಣೆ

03/07/2023, 11:31

ನಂದಳಿಕೆ(reporterkarnataka.com): ಕೃತಿ ಬರೆಯಲು ಇಚ್ಚಾಶಕ್ತಿ, ಶ್ರದ್ಧೆ ಪ್ರಮುಖ ಪಾತ್ರವಹಿಸುತ್ತದೆ ಎಂದು ತುಳುಕೂಟ ಉಡುಪಿ ಇದರ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ ಹೇಳಿದರು ಅವರು ನಂದಳಿಕೆ ಮಹಾಲಿಂಗೇಶ್ವರ ದೇವಾಲಯದ ಸಭಾಂಗಣದಲ್ಲಿ ಚಾವಡಿ ಅರಮನೆಯ ಸರಳಾ ಎಸ್. ಎಸ್. ಹೆಗ್ಡೆ ಬರೆದ “ಸತ್ಯಮಾಲೋಕಂದ ಸಿರಿ” ಕೃತಿ ಲೋಕಾರ್ಪಣೆ ಗೊಳಿಸಿ ಮಾತನಾಡಿದರು.
ತುಳುನಾಡು ದೈವಗಳನಾಡಗಿದೆ. ಇಲ್ಲಿನ ಸಿರಿಗಳ ಕಾರ್ಣಿಕ ಮೂಲಕ ಸಂಸ್ಕೃತಿಯ ಶ್ರೀಮಂತಿಕೆ ತೋರಿಸುತ್ತದೆ. ಸಿರಿಗಳ ಜನಪದವನ್ನು ಕೃತಿಯನ್ನಾಗಿಸಿ ಉಳಿಸುವ ಕಾರ್ಯ ಮಹತ್ವದ್ದಾಗಿದೆ ಎಂದರು.

ವಿಜಯಾ ಬ್ಯಾಂಕ್ ವಿಶ್ರಾಂತ ಪ್ರಬಂಧಕ ಭುವನ ಪ್ರಸಾದ್ ಹೆಗ್ಡೆ ಮಾತನಾಡಿ, ನಂದಳಿಕೆ ಸಿರಿ ಜಾತ್ರೆಗೆ ಪ್ರಸಿದ್ಧವಾಗಿದೆ. ಇಲ್ಲಿಯ ಸಿರಿಗಳ ಕಥೆಗಳನ್ನು ಪುಸ್ತಕ ರೂಪದಲ್ಲಿ ಬರೆದಿರುವುದು ಅಭಿನಂದನಾರ್ಹವಾಗಿದೆ. ಮುಂದಿನ ಜನಾಂಗಕ್ಕೆ ಸ್ಥಳದ ಮಹತ್ವದ ಹಾಗೂ ಇತಿಹಾಸ ಗುರುತಿಸಲು ಸಾಧ್ಯವಾಗುತ್ತದೆ. ಕವಿ ಮುದ್ದಣ ಸೇರಿದಂತೆ ಅನೇಕ ಸಾಹಿತಿಗಳ ನಂದಳಿಕೆಯೆ ಮೂಲವಾಗಿದೆ ಎಂದರು.
ಜನಪದ ವಿದ್ವಾಂಸ ಭುವನೇಂದ್ರ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥ ಡಾ. ಅರುಣ ಕುಮಾರ್ ಎಸ್. ಆರ್. ಮಾತನಾಡಿ ಸತ್ಯಮಾಲೋಕಂದ ಸಿರಿ ಈ ಪುಸ್ತಕದಲ್ಲಿ ಶ್ರೀಮಂತ ತುಳುನಾಡ ಸಂಸ್ಕೃತಿಯನ್ನು ತೆರೆದಿಡಲಾಗಿದೆ. ಕುಂದಾಪುರದಿಂದ ಹಿಡಿದು ಉಜಿರೆ ವರೆಗಿನ ಶ್ರೀಮಂತ ತುಳುನಾಡು ಸಿರಿಗಳ ಆರಾಧನೆಯ ಕಥೆಗಳು ಯುವಜನಾಂಗಕ್ಕೆ ತಿಳಿಸಿಕೊಡುವ ಪ್ರಯತ್ನ ಮಾಡಲಾಗಿದೆ. ಪುಸ್ತಕ ಅನಾವರಣ ಮಾಡುವ ಮೂಲಕ ತುಳುನಾಡಿನ ಇತಿಹಾಸವನ್ನು ಮರುಕಳಿಸುವ ಪ್ರಯತ್ನ ಮಾಡಲಾಗಿದೆ ಎಂದರು.
ಲೇಖಕಿ ಸರಳಾ ಎಸ್. ಹೆಗ್ಡೆ, ಮಾತನಾಡಿ ಪಾರ್ದನಗಳು ಒಬ್ಬರಿಂದ ಇನ್ನೊಬ್ಬರಿಗೆ ಭಿನ್ನವಾಗಿರುತ್ತದೆ. ಅದನ್ನು ಕ್ರೋಢೀಕರಿಸಿ ಪುಸ್ತಕ ಬರೆಯಲಾಗಿದೆ ಎಂದರು.
ಕವತ್ತಾರು ವಿಷ್ಣುರಾಜ ಭಟ್, ದೇವಸ್ಥಾನದ ತಂತ್ರಿ ಹರೀಶ್ ತಂತ್ರಿ ಮಾತನಾಡಿ ಶುಭಹಾರೈಸಿದರು.
ಸಭೆಯಲ್ಲಿ ನಂದಳಿಕೆ ಮಹಾಲಿಂಗೇಶ್ವರ ದೇವಸ್ಥಾನದ ಅನುವಂಶಿಕ ಮೊಕ್ತೆಸರ ಚಾವಡಿ ಅರಮನೆಯ ಸುಂದರರಾಮ ಹೆಗ್ಡೆ ಉಪಸ್ಥಿತರಿದ್ದರು, ಜಯಂತಿ ಶೆಟ್ಟಿ ಪ್ರಾರ್ಥಿಸಿದರು. ನಂದಳಿಕೆ ಸುಹಾಸ್ ಹೆಗ್ಡೆ ಸ್ವಾಗತಿಸಿದರು. ಸೀತಾರಾಂ ಭಟ್ ಕಾರ್ಯಕ್ರಮ ನಿರೂಪಿಸಿದರು. ಸುಧಾಕರ್ ಧನ್ಯವಾದವಿತ್ತರು.

ಇತ್ತೀಚಿನ ಸುದ್ದಿ

ಜಾಹೀರಾತು