10:22 AM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ನಂದಳಿಕೆ: ‘ಸತ್ಯಮಾಲೋಕಂದ ಸಿರಿ’ ತುಳು ಕೃತಿ ಲೋಕಾರ್ಪಣೆ

03/07/2023, 11:31

ನಂದಳಿಕೆ(reporterkarnataka.com): ಕೃತಿ ಬರೆಯಲು ಇಚ್ಚಾಶಕ್ತಿ, ಶ್ರದ್ಧೆ ಪ್ರಮುಖ ಪಾತ್ರವಹಿಸುತ್ತದೆ ಎಂದು ತುಳುಕೂಟ ಉಡುಪಿ ಇದರ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ ಹೇಳಿದರು ಅವರು ನಂದಳಿಕೆ ಮಹಾಲಿಂಗೇಶ್ವರ ದೇವಾಲಯದ ಸಭಾಂಗಣದಲ್ಲಿ ಚಾವಡಿ ಅರಮನೆಯ ಸರಳಾ ಎಸ್. ಎಸ್. ಹೆಗ್ಡೆ ಬರೆದ “ಸತ್ಯಮಾಲೋಕಂದ ಸಿರಿ” ಕೃತಿ ಲೋಕಾರ್ಪಣೆ ಗೊಳಿಸಿ ಮಾತನಾಡಿದರು.
ತುಳುನಾಡು ದೈವಗಳನಾಡಗಿದೆ. ಇಲ್ಲಿನ ಸಿರಿಗಳ ಕಾರ್ಣಿಕ ಮೂಲಕ ಸಂಸ್ಕೃತಿಯ ಶ್ರೀಮಂತಿಕೆ ತೋರಿಸುತ್ತದೆ. ಸಿರಿಗಳ ಜನಪದವನ್ನು ಕೃತಿಯನ್ನಾಗಿಸಿ ಉಳಿಸುವ ಕಾರ್ಯ ಮಹತ್ವದ್ದಾಗಿದೆ ಎಂದರು.

ವಿಜಯಾ ಬ್ಯಾಂಕ್ ವಿಶ್ರಾಂತ ಪ್ರಬಂಧಕ ಭುವನ ಪ್ರಸಾದ್ ಹೆಗ್ಡೆ ಮಾತನಾಡಿ, ನಂದಳಿಕೆ ಸಿರಿ ಜಾತ್ರೆಗೆ ಪ್ರಸಿದ್ಧವಾಗಿದೆ. ಇಲ್ಲಿಯ ಸಿರಿಗಳ ಕಥೆಗಳನ್ನು ಪುಸ್ತಕ ರೂಪದಲ್ಲಿ ಬರೆದಿರುವುದು ಅಭಿನಂದನಾರ್ಹವಾಗಿದೆ. ಮುಂದಿನ ಜನಾಂಗಕ್ಕೆ ಸ್ಥಳದ ಮಹತ್ವದ ಹಾಗೂ ಇತಿಹಾಸ ಗುರುತಿಸಲು ಸಾಧ್ಯವಾಗುತ್ತದೆ. ಕವಿ ಮುದ್ದಣ ಸೇರಿದಂತೆ ಅನೇಕ ಸಾಹಿತಿಗಳ ನಂದಳಿಕೆಯೆ ಮೂಲವಾಗಿದೆ ಎಂದರು.
ಜನಪದ ವಿದ್ವಾಂಸ ಭುವನೇಂದ್ರ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥ ಡಾ. ಅರುಣ ಕುಮಾರ್ ಎಸ್. ಆರ್. ಮಾತನಾಡಿ ಸತ್ಯಮಾಲೋಕಂದ ಸಿರಿ ಈ ಪುಸ್ತಕದಲ್ಲಿ ಶ್ರೀಮಂತ ತುಳುನಾಡ ಸಂಸ್ಕೃತಿಯನ್ನು ತೆರೆದಿಡಲಾಗಿದೆ. ಕುಂದಾಪುರದಿಂದ ಹಿಡಿದು ಉಜಿರೆ ವರೆಗಿನ ಶ್ರೀಮಂತ ತುಳುನಾಡು ಸಿರಿಗಳ ಆರಾಧನೆಯ ಕಥೆಗಳು ಯುವಜನಾಂಗಕ್ಕೆ ತಿಳಿಸಿಕೊಡುವ ಪ್ರಯತ್ನ ಮಾಡಲಾಗಿದೆ. ಪುಸ್ತಕ ಅನಾವರಣ ಮಾಡುವ ಮೂಲಕ ತುಳುನಾಡಿನ ಇತಿಹಾಸವನ್ನು ಮರುಕಳಿಸುವ ಪ್ರಯತ್ನ ಮಾಡಲಾಗಿದೆ ಎಂದರು.
ಲೇಖಕಿ ಸರಳಾ ಎಸ್. ಹೆಗ್ಡೆ, ಮಾತನಾಡಿ ಪಾರ್ದನಗಳು ಒಬ್ಬರಿಂದ ಇನ್ನೊಬ್ಬರಿಗೆ ಭಿನ್ನವಾಗಿರುತ್ತದೆ. ಅದನ್ನು ಕ್ರೋಢೀಕರಿಸಿ ಪುಸ್ತಕ ಬರೆಯಲಾಗಿದೆ ಎಂದರು.
ಕವತ್ತಾರು ವಿಷ್ಣುರಾಜ ಭಟ್, ದೇವಸ್ಥಾನದ ತಂತ್ರಿ ಹರೀಶ್ ತಂತ್ರಿ ಮಾತನಾಡಿ ಶುಭಹಾರೈಸಿದರು.
ಸಭೆಯಲ್ಲಿ ನಂದಳಿಕೆ ಮಹಾಲಿಂಗೇಶ್ವರ ದೇವಸ್ಥಾನದ ಅನುವಂಶಿಕ ಮೊಕ್ತೆಸರ ಚಾವಡಿ ಅರಮನೆಯ ಸುಂದರರಾಮ ಹೆಗ್ಡೆ ಉಪಸ್ಥಿತರಿದ್ದರು, ಜಯಂತಿ ಶೆಟ್ಟಿ ಪ್ರಾರ್ಥಿಸಿದರು. ನಂದಳಿಕೆ ಸುಹಾಸ್ ಹೆಗ್ಡೆ ಸ್ವಾಗತಿಸಿದರು. ಸೀತಾರಾಂ ಭಟ್ ಕಾರ್ಯಕ್ರಮ ನಿರೂಪಿಸಿದರು. ಸುಧಾಕರ್ ಧನ್ಯವಾದವಿತ್ತರು.

ಇತ್ತೀಚಿನ ಸುದ್ದಿ

ಜಾಹೀರಾತು