9:52 AM Sunday8 - September 2024
ಬ್ರೇಕಿಂಗ್ ನ್ಯೂಸ್
ಕಲಿಯುವ ಛಲದಿಂದ ಸಂಕಲ್ಪ ಸಾಧಿಸಿದ ತನ್ವಿ!: ಕೆಳ ಮಧ್ಯಮ ಕುಟುಂಬದ ವಿದ್ಯಾರ್ಥಿನಿ ಎಂಬಿಬಿಎಸ್… ಶ್ರೀ ಅಡವಿಸಿದ್ದೇಶ್ವರ ಜಾತ್ರಾ ಮಹೋತ್ಸವ: ಶ್ರೀ ಬಸವ ಬುತ್ತಿ ಕಾರ್ಯಕ್ರಮಕ್ಕೆ ಚಾಲನೆ ಗಣೇಶೋತ್ಸವಕ್ಕೆ ಕಾಂಗ್ರೆಸ್‌ ಸರಕಾರ ಯಾವುದೇ ಅಡ್ಡಿ ಮಾಡಿಲ್ಲ; ಶಾಸಕ ಕಾಮತ್ ಸಂಕುಚಿತ ಭಾವನೆಯಿಂದ… ಓವರ್‌ಟೇಕ್ ವಿವಾದ: ಖಾಸಗಿ ಬಸ್ ಸಿಬ್ಬಂದಿಗಳ ನಡುವೆ ಬೀದಿ ಜಗಳ; ಪ್ರಕರಣ ದಾಖಲು ತೀರ್ಥಹಳ್ಳಿ: ಎದೆ ನೋವು ಚಿಕಿತ್ಸೆಗೆಂದು ಆಸ್ಪತ್ರೆಗೆ ಸ್ಕೂಟಿಯಲ್ಲಿ ತೆರಳುತ್ತಿದ್ದ ಯುವಕ ರಸ್ತೆಗೆ ಬಿದ್ದು… ಭಾರಿ ಮಳೆ: ಆಗುಂಬೆ ಬಳಿಯ ಕಾರ್ ಬೈಲು ಗುಡ್ಡ ಕುಸಿತ ದಿಢೀರ್ ವಾಹನ ಸಂಚಾರ ಬದಲಾವಣೆಯಿಂದ ಸಾರ್ವಜನಿಕರಿಗೆ ತೊಂದರೆ: ಶಾಸಕ ವೇದವ್ಯಾಸ ಕಾಮತ್ ಆಕ್ರೋಶ ಬಳ್ಳಾರಿಯಲ್ಲಿ ಸೆ.6ರಂದು ಗೋ ಬ್ಯಾಕ್ ಗವರ್ನರ್ ಚಳವಳಿ: ಕಪ್ಪುಪಟ್ಟಿ, ಬಾವುಟ ಪ್ರದರ್ಶನ ರಾಜಕೀಯ ರಣತಂತ್ರಕ್ಕೆ ಮುದುಡಿದ ಕಮಲ: ನಂಜನಗೂಡು ನಗರಸಭೆ ನೂತನ ಸಾರಥಿಗಳಾಗಿ ಕಾಂಗ್ರೆಸ್ ನ… ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆ ಮಾಡಿ; ಸಾರ್ವಜನಿಕರಿಗೆ ಮಾರಕವಾಗುವ ಡಿಜೆ ಬೇಡ: ಡಿವೈಎಸ್’ಪಿ…

ಇತ್ತೀಚಿನ ಸುದ್ದಿ

ನಂದಳಿಕೆ: ‘ಸತ್ಯಮಾಲೋಕಂದ ಸಿರಿ’ ತುಳು ಕೃತಿ ಲೋಕಾರ್ಪಣೆ

03/07/2023, 11:31

ನಂದಳಿಕೆ(reporterkarnataka.com): ಕೃತಿ ಬರೆಯಲು ಇಚ್ಚಾಶಕ್ತಿ, ಶ್ರದ್ಧೆ ಪ್ರಮುಖ ಪಾತ್ರವಹಿಸುತ್ತದೆ ಎಂದು ತುಳುಕೂಟ ಉಡುಪಿ ಇದರ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ ಹೇಳಿದರು ಅವರು ನಂದಳಿಕೆ ಮಹಾಲಿಂಗೇಶ್ವರ ದೇವಾಲಯದ ಸಭಾಂಗಣದಲ್ಲಿ ಚಾವಡಿ ಅರಮನೆಯ ಸರಳಾ ಎಸ್. ಎಸ್. ಹೆಗ್ಡೆ ಬರೆದ “ಸತ್ಯಮಾಲೋಕಂದ ಸಿರಿ” ಕೃತಿ ಲೋಕಾರ್ಪಣೆ ಗೊಳಿಸಿ ಮಾತನಾಡಿದರು.
ತುಳುನಾಡು ದೈವಗಳನಾಡಗಿದೆ. ಇಲ್ಲಿನ ಸಿರಿಗಳ ಕಾರ್ಣಿಕ ಮೂಲಕ ಸಂಸ್ಕೃತಿಯ ಶ್ರೀಮಂತಿಕೆ ತೋರಿಸುತ್ತದೆ. ಸಿರಿಗಳ ಜನಪದವನ್ನು ಕೃತಿಯನ್ನಾಗಿಸಿ ಉಳಿಸುವ ಕಾರ್ಯ ಮಹತ್ವದ್ದಾಗಿದೆ ಎಂದರು.

ವಿಜಯಾ ಬ್ಯಾಂಕ್ ವಿಶ್ರಾಂತ ಪ್ರಬಂಧಕ ಭುವನ ಪ್ರಸಾದ್ ಹೆಗ್ಡೆ ಮಾತನಾಡಿ, ನಂದಳಿಕೆ ಸಿರಿ ಜಾತ್ರೆಗೆ ಪ್ರಸಿದ್ಧವಾಗಿದೆ. ಇಲ್ಲಿಯ ಸಿರಿಗಳ ಕಥೆಗಳನ್ನು ಪುಸ್ತಕ ರೂಪದಲ್ಲಿ ಬರೆದಿರುವುದು ಅಭಿನಂದನಾರ್ಹವಾಗಿದೆ. ಮುಂದಿನ ಜನಾಂಗಕ್ಕೆ ಸ್ಥಳದ ಮಹತ್ವದ ಹಾಗೂ ಇತಿಹಾಸ ಗುರುತಿಸಲು ಸಾಧ್ಯವಾಗುತ್ತದೆ. ಕವಿ ಮುದ್ದಣ ಸೇರಿದಂತೆ ಅನೇಕ ಸಾಹಿತಿಗಳ ನಂದಳಿಕೆಯೆ ಮೂಲವಾಗಿದೆ ಎಂದರು.
ಜನಪದ ವಿದ್ವಾಂಸ ಭುವನೇಂದ್ರ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥ ಡಾ. ಅರುಣ ಕುಮಾರ್ ಎಸ್. ಆರ್. ಮಾತನಾಡಿ ಸತ್ಯಮಾಲೋಕಂದ ಸಿರಿ ಈ ಪುಸ್ತಕದಲ್ಲಿ ಶ್ರೀಮಂತ ತುಳುನಾಡ ಸಂಸ್ಕೃತಿಯನ್ನು ತೆರೆದಿಡಲಾಗಿದೆ. ಕುಂದಾಪುರದಿಂದ ಹಿಡಿದು ಉಜಿರೆ ವರೆಗಿನ ಶ್ರೀಮಂತ ತುಳುನಾಡು ಸಿರಿಗಳ ಆರಾಧನೆಯ ಕಥೆಗಳು ಯುವಜನಾಂಗಕ್ಕೆ ತಿಳಿಸಿಕೊಡುವ ಪ್ರಯತ್ನ ಮಾಡಲಾಗಿದೆ. ಪುಸ್ತಕ ಅನಾವರಣ ಮಾಡುವ ಮೂಲಕ ತುಳುನಾಡಿನ ಇತಿಹಾಸವನ್ನು ಮರುಕಳಿಸುವ ಪ್ರಯತ್ನ ಮಾಡಲಾಗಿದೆ ಎಂದರು.
ಲೇಖಕಿ ಸರಳಾ ಎಸ್. ಹೆಗ್ಡೆ, ಮಾತನಾಡಿ ಪಾರ್ದನಗಳು ಒಬ್ಬರಿಂದ ಇನ್ನೊಬ್ಬರಿಗೆ ಭಿನ್ನವಾಗಿರುತ್ತದೆ. ಅದನ್ನು ಕ್ರೋಢೀಕರಿಸಿ ಪುಸ್ತಕ ಬರೆಯಲಾಗಿದೆ ಎಂದರು.
ಕವತ್ತಾರು ವಿಷ್ಣುರಾಜ ಭಟ್, ದೇವಸ್ಥಾನದ ತಂತ್ರಿ ಹರೀಶ್ ತಂತ್ರಿ ಮಾತನಾಡಿ ಶುಭಹಾರೈಸಿದರು.
ಸಭೆಯಲ್ಲಿ ನಂದಳಿಕೆ ಮಹಾಲಿಂಗೇಶ್ವರ ದೇವಸ್ಥಾನದ ಅನುವಂಶಿಕ ಮೊಕ್ತೆಸರ ಚಾವಡಿ ಅರಮನೆಯ ಸುಂದರರಾಮ ಹೆಗ್ಡೆ ಉಪಸ್ಥಿತರಿದ್ದರು, ಜಯಂತಿ ಶೆಟ್ಟಿ ಪ್ರಾರ್ಥಿಸಿದರು. ನಂದಳಿಕೆ ಸುಹಾಸ್ ಹೆಗ್ಡೆ ಸ್ವಾಗತಿಸಿದರು. ಸೀತಾರಾಂ ಭಟ್ ಕಾರ್ಯಕ್ರಮ ನಿರೂಪಿಸಿದರು. ಸುಧಾಕರ್ ಧನ್ಯವಾದವಿತ್ತರು.

ಇತ್ತೀಚಿನ ಸುದ್ದಿ

ಜಾಹೀರಾತು