5:26 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ನಂದಳಿಕೆ: ‘ಸತ್ಯಮಾಲೋಕಂದ ಸಿರಿ’ ತುಳು ಕೃತಿ ಲೋಕಾರ್ಪಣೆ

03/07/2023, 11:31

ನಂದಳಿಕೆ(reporterkarnataka.com): ಕೃತಿ ಬರೆಯಲು ಇಚ್ಚಾಶಕ್ತಿ, ಶ್ರದ್ಧೆ ಪ್ರಮುಖ ಪಾತ್ರವಹಿಸುತ್ತದೆ ಎಂದು ತುಳುಕೂಟ ಉಡುಪಿ ಇದರ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ ಹೇಳಿದರು ಅವರು ನಂದಳಿಕೆ ಮಹಾಲಿಂಗೇಶ್ವರ ದೇವಾಲಯದ ಸಭಾಂಗಣದಲ್ಲಿ ಚಾವಡಿ ಅರಮನೆಯ ಸರಳಾ ಎಸ್. ಎಸ್. ಹೆಗ್ಡೆ ಬರೆದ “ಸತ್ಯಮಾಲೋಕಂದ ಸಿರಿ” ಕೃತಿ ಲೋಕಾರ್ಪಣೆ ಗೊಳಿಸಿ ಮಾತನಾಡಿದರು.
ತುಳುನಾಡು ದೈವಗಳನಾಡಗಿದೆ. ಇಲ್ಲಿನ ಸಿರಿಗಳ ಕಾರ್ಣಿಕ ಮೂಲಕ ಸಂಸ್ಕೃತಿಯ ಶ್ರೀಮಂತಿಕೆ ತೋರಿಸುತ್ತದೆ. ಸಿರಿಗಳ ಜನಪದವನ್ನು ಕೃತಿಯನ್ನಾಗಿಸಿ ಉಳಿಸುವ ಕಾರ್ಯ ಮಹತ್ವದ್ದಾಗಿದೆ ಎಂದರು.

ವಿಜಯಾ ಬ್ಯಾಂಕ್ ವಿಶ್ರಾಂತ ಪ್ರಬಂಧಕ ಭುವನ ಪ್ರಸಾದ್ ಹೆಗ್ಡೆ ಮಾತನಾಡಿ, ನಂದಳಿಕೆ ಸಿರಿ ಜಾತ್ರೆಗೆ ಪ್ರಸಿದ್ಧವಾಗಿದೆ. ಇಲ್ಲಿಯ ಸಿರಿಗಳ ಕಥೆಗಳನ್ನು ಪುಸ್ತಕ ರೂಪದಲ್ಲಿ ಬರೆದಿರುವುದು ಅಭಿನಂದನಾರ್ಹವಾಗಿದೆ. ಮುಂದಿನ ಜನಾಂಗಕ್ಕೆ ಸ್ಥಳದ ಮಹತ್ವದ ಹಾಗೂ ಇತಿಹಾಸ ಗುರುತಿಸಲು ಸಾಧ್ಯವಾಗುತ್ತದೆ. ಕವಿ ಮುದ್ದಣ ಸೇರಿದಂತೆ ಅನೇಕ ಸಾಹಿತಿಗಳ ನಂದಳಿಕೆಯೆ ಮೂಲವಾಗಿದೆ ಎಂದರು.
ಜನಪದ ವಿದ್ವಾಂಸ ಭುವನೇಂದ್ರ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥ ಡಾ. ಅರುಣ ಕುಮಾರ್ ಎಸ್. ಆರ್. ಮಾತನಾಡಿ ಸತ್ಯಮಾಲೋಕಂದ ಸಿರಿ ಈ ಪುಸ್ತಕದಲ್ಲಿ ಶ್ರೀಮಂತ ತುಳುನಾಡ ಸಂಸ್ಕೃತಿಯನ್ನು ತೆರೆದಿಡಲಾಗಿದೆ. ಕುಂದಾಪುರದಿಂದ ಹಿಡಿದು ಉಜಿರೆ ವರೆಗಿನ ಶ್ರೀಮಂತ ತುಳುನಾಡು ಸಿರಿಗಳ ಆರಾಧನೆಯ ಕಥೆಗಳು ಯುವಜನಾಂಗಕ್ಕೆ ತಿಳಿಸಿಕೊಡುವ ಪ್ರಯತ್ನ ಮಾಡಲಾಗಿದೆ. ಪುಸ್ತಕ ಅನಾವರಣ ಮಾಡುವ ಮೂಲಕ ತುಳುನಾಡಿನ ಇತಿಹಾಸವನ್ನು ಮರುಕಳಿಸುವ ಪ್ರಯತ್ನ ಮಾಡಲಾಗಿದೆ ಎಂದರು.
ಲೇಖಕಿ ಸರಳಾ ಎಸ್. ಹೆಗ್ಡೆ, ಮಾತನಾಡಿ ಪಾರ್ದನಗಳು ಒಬ್ಬರಿಂದ ಇನ್ನೊಬ್ಬರಿಗೆ ಭಿನ್ನವಾಗಿರುತ್ತದೆ. ಅದನ್ನು ಕ್ರೋಢೀಕರಿಸಿ ಪುಸ್ತಕ ಬರೆಯಲಾಗಿದೆ ಎಂದರು.
ಕವತ್ತಾರು ವಿಷ್ಣುರಾಜ ಭಟ್, ದೇವಸ್ಥಾನದ ತಂತ್ರಿ ಹರೀಶ್ ತಂತ್ರಿ ಮಾತನಾಡಿ ಶುಭಹಾರೈಸಿದರು.
ಸಭೆಯಲ್ಲಿ ನಂದಳಿಕೆ ಮಹಾಲಿಂಗೇಶ್ವರ ದೇವಸ್ಥಾನದ ಅನುವಂಶಿಕ ಮೊಕ್ತೆಸರ ಚಾವಡಿ ಅರಮನೆಯ ಸುಂದರರಾಮ ಹೆಗ್ಡೆ ಉಪಸ್ಥಿತರಿದ್ದರು, ಜಯಂತಿ ಶೆಟ್ಟಿ ಪ್ರಾರ್ಥಿಸಿದರು. ನಂದಳಿಕೆ ಸುಹಾಸ್ ಹೆಗ್ಡೆ ಸ್ವಾಗತಿಸಿದರು. ಸೀತಾರಾಂ ಭಟ್ ಕಾರ್ಯಕ್ರಮ ನಿರೂಪಿಸಿದರು. ಸುಧಾಕರ್ ಧನ್ಯವಾದವಿತ್ತರು.

ಇತ್ತೀಚಿನ ಸುದ್ದಿ

ಜಾಹೀರಾತು