3:44 AM Thursday23 - July 2026
ಬ್ರೇಕಿಂಗ್ ನ್ಯೂಸ್
ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:…

ಇತ್ತೀಚಿನ ಸುದ್ದಿ

ನಂದಳಿಕೆ: ‘ಸತ್ಯಮಾಲೋಕಂದ ಸಿರಿ’ ತುಳು ಕೃತಿ ಲೋಕಾರ್ಪಣೆ

03/07/2023, 11:31

ನಂದಳಿಕೆ(reporterkarnataka.com): ಕೃತಿ ಬರೆಯಲು ಇಚ್ಚಾಶಕ್ತಿ, ಶ್ರದ್ಧೆ ಪ್ರಮುಖ ಪಾತ್ರವಹಿಸುತ್ತದೆ ಎಂದು ತುಳುಕೂಟ ಉಡುಪಿ ಇದರ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ ಹೇಳಿದರು ಅವರು ನಂದಳಿಕೆ ಮಹಾಲಿಂಗೇಶ್ವರ ದೇವಾಲಯದ ಸಭಾಂಗಣದಲ್ಲಿ ಚಾವಡಿ ಅರಮನೆಯ ಸರಳಾ ಎಸ್. ಎಸ್. ಹೆಗ್ಡೆ ಬರೆದ “ಸತ್ಯಮಾಲೋಕಂದ ಸಿರಿ” ಕೃತಿ ಲೋಕಾರ್ಪಣೆ ಗೊಳಿಸಿ ಮಾತನಾಡಿದರು.
ತುಳುನಾಡು ದೈವಗಳನಾಡಗಿದೆ. ಇಲ್ಲಿನ ಸಿರಿಗಳ ಕಾರ್ಣಿಕ ಮೂಲಕ ಸಂಸ್ಕೃತಿಯ ಶ್ರೀಮಂತಿಕೆ ತೋರಿಸುತ್ತದೆ. ಸಿರಿಗಳ ಜನಪದವನ್ನು ಕೃತಿಯನ್ನಾಗಿಸಿ ಉಳಿಸುವ ಕಾರ್ಯ ಮಹತ್ವದ್ದಾಗಿದೆ ಎಂದರು.

ವಿಜಯಾ ಬ್ಯಾಂಕ್ ವಿಶ್ರಾಂತ ಪ್ರಬಂಧಕ ಭುವನ ಪ್ರಸಾದ್ ಹೆಗ್ಡೆ ಮಾತನಾಡಿ, ನಂದಳಿಕೆ ಸಿರಿ ಜಾತ್ರೆಗೆ ಪ್ರಸಿದ್ಧವಾಗಿದೆ. ಇಲ್ಲಿಯ ಸಿರಿಗಳ ಕಥೆಗಳನ್ನು ಪುಸ್ತಕ ರೂಪದಲ್ಲಿ ಬರೆದಿರುವುದು ಅಭಿನಂದನಾರ್ಹವಾಗಿದೆ. ಮುಂದಿನ ಜನಾಂಗಕ್ಕೆ ಸ್ಥಳದ ಮಹತ್ವದ ಹಾಗೂ ಇತಿಹಾಸ ಗುರುತಿಸಲು ಸಾಧ್ಯವಾಗುತ್ತದೆ. ಕವಿ ಮುದ್ದಣ ಸೇರಿದಂತೆ ಅನೇಕ ಸಾಹಿತಿಗಳ ನಂದಳಿಕೆಯೆ ಮೂಲವಾಗಿದೆ ಎಂದರು.
ಜನಪದ ವಿದ್ವಾಂಸ ಭುವನೇಂದ್ರ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥ ಡಾ. ಅರುಣ ಕುಮಾರ್ ಎಸ್. ಆರ್. ಮಾತನಾಡಿ ಸತ್ಯಮಾಲೋಕಂದ ಸಿರಿ ಈ ಪುಸ್ತಕದಲ್ಲಿ ಶ್ರೀಮಂತ ತುಳುನಾಡ ಸಂಸ್ಕೃತಿಯನ್ನು ತೆರೆದಿಡಲಾಗಿದೆ. ಕುಂದಾಪುರದಿಂದ ಹಿಡಿದು ಉಜಿರೆ ವರೆಗಿನ ಶ್ರೀಮಂತ ತುಳುನಾಡು ಸಿರಿಗಳ ಆರಾಧನೆಯ ಕಥೆಗಳು ಯುವಜನಾಂಗಕ್ಕೆ ತಿಳಿಸಿಕೊಡುವ ಪ್ರಯತ್ನ ಮಾಡಲಾಗಿದೆ. ಪುಸ್ತಕ ಅನಾವರಣ ಮಾಡುವ ಮೂಲಕ ತುಳುನಾಡಿನ ಇತಿಹಾಸವನ್ನು ಮರುಕಳಿಸುವ ಪ್ರಯತ್ನ ಮಾಡಲಾಗಿದೆ ಎಂದರು.
ಲೇಖಕಿ ಸರಳಾ ಎಸ್. ಹೆಗ್ಡೆ, ಮಾತನಾಡಿ ಪಾರ್ದನಗಳು ಒಬ್ಬರಿಂದ ಇನ್ನೊಬ್ಬರಿಗೆ ಭಿನ್ನವಾಗಿರುತ್ತದೆ. ಅದನ್ನು ಕ್ರೋಢೀಕರಿಸಿ ಪುಸ್ತಕ ಬರೆಯಲಾಗಿದೆ ಎಂದರು.
ಕವತ್ತಾರು ವಿಷ್ಣುರಾಜ ಭಟ್, ದೇವಸ್ಥಾನದ ತಂತ್ರಿ ಹರೀಶ್ ತಂತ್ರಿ ಮಾತನಾಡಿ ಶುಭಹಾರೈಸಿದರು.
ಸಭೆಯಲ್ಲಿ ನಂದಳಿಕೆ ಮಹಾಲಿಂಗೇಶ್ವರ ದೇವಸ್ಥಾನದ ಅನುವಂಶಿಕ ಮೊಕ್ತೆಸರ ಚಾವಡಿ ಅರಮನೆಯ ಸುಂದರರಾಮ ಹೆಗ್ಡೆ ಉಪಸ್ಥಿತರಿದ್ದರು, ಜಯಂತಿ ಶೆಟ್ಟಿ ಪ್ರಾರ್ಥಿಸಿದರು. ನಂದಳಿಕೆ ಸುಹಾಸ್ ಹೆಗ್ಡೆ ಸ್ವಾಗತಿಸಿದರು. ಸೀತಾರಾಂ ಭಟ್ ಕಾರ್ಯಕ್ರಮ ನಿರೂಪಿಸಿದರು. ಸುಧಾಕರ್ ಧನ್ಯವಾದವಿತ್ತರು.

ಇತ್ತೀಚಿನ ಸುದ್ದಿ

ಜಾಹೀರಾತು