1:29 PM Monday20 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ…

ಇತ್ತೀಚಿನ ಸುದ್ದಿ

ನಂದಳಿಕೆ: ‘ಸತ್ಯಮಾಲೋಕಂದ ಸಿರಿ’ ತುಳು ಕೃತಿ ಲೋಕಾರ್ಪಣೆ

03/07/2023, 11:31

ನಂದಳಿಕೆ(reporterkarnataka.com): ಕೃತಿ ಬರೆಯಲು ಇಚ್ಚಾಶಕ್ತಿ, ಶ್ರದ್ಧೆ ಪ್ರಮುಖ ಪಾತ್ರವಹಿಸುತ್ತದೆ ಎಂದು ತುಳುಕೂಟ ಉಡುಪಿ ಇದರ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ ಹೇಳಿದರು ಅವರು ನಂದಳಿಕೆ ಮಹಾಲಿಂಗೇಶ್ವರ ದೇವಾಲಯದ ಸಭಾಂಗಣದಲ್ಲಿ ಚಾವಡಿ ಅರಮನೆಯ ಸರಳಾ ಎಸ್. ಎಸ್. ಹೆಗ್ಡೆ ಬರೆದ “ಸತ್ಯಮಾಲೋಕಂದ ಸಿರಿ” ಕೃತಿ ಲೋಕಾರ್ಪಣೆ ಗೊಳಿಸಿ ಮಾತನಾಡಿದರು.
ತುಳುನಾಡು ದೈವಗಳನಾಡಗಿದೆ. ಇಲ್ಲಿನ ಸಿರಿಗಳ ಕಾರ್ಣಿಕ ಮೂಲಕ ಸಂಸ್ಕೃತಿಯ ಶ್ರೀಮಂತಿಕೆ ತೋರಿಸುತ್ತದೆ. ಸಿರಿಗಳ ಜನಪದವನ್ನು ಕೃತಿಯನ್ನಾಗಿಸಿ ಉಳಿಸುವ ಕಾರ್ಯ ಮಹತ್ವದ್ದಾಗಿದೆ ಎಂದರು.

ವಿಜಯಾ ಬ್ಯಾಂಕ್ ವಿಶ್ರಾಂತ ಪ್ರಬಂಧಕ ಭುವನ ಪ್ರಸಾದ್ ಹೆಗ್ಡೆ ಮಾತನಾಡಿ, ನಂದಳಿಕೆ ಸಿರಿ ಜಾತ್ರೆಗೆ ಪ್ರಸಿದ್ಧವಾಗಿದೆ. ಇಲ್ಲಿಯ ಸಿರಿಗಳ ಕಥೆಗಳನ್ನು ಪುಸ್ತಕ ರೂಪದಲ್ಲಿ ಬರೆದಿರುವುದು ಅಭಿನಂದನಾರ್ಹವಾಗಿದೆ. ಮುಂದಿನ ಜನಾಂಗಕ್ಕೆ ಸ್ಥಳದ ಮಹತ್ವದ ಹಾಗೂ ಇತಿಹಾಸ ಗುರುತಿಸಲು ಸಾಧ್ಯವಾಗುತ್ತದೆ. ಕವಿ ಮುದ್ದಣ ಸೇರಿದಂತೆ ಅನೇಕ ಸಾಹಿತಿಗಳ ನಂದಳಿಕೆಯೆ ಮೂಲವಾಗಿದೆ ಎಂದರು.
ಜನಪದ ವಿದ್ವಾಂಸ ಭುವನೇಂದ್ರ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥ ಡಾ. ಅರುಣ ಕುಮಾರ್ ಎಸ್. ಆರ್. ಮಾತನಾಡಿ ಸತ್ಯಮಾಲೋಕಂದ ಸಿರಿ ಈ ಪುಸ್ತಕದಲ್ಲಿ ಶ್ರೀಮಂತ ತುಳುನಾಡ ಸಂಸ್ಕೃತಿಯನ್ನು ತೆರೆದಿಡಲಾಗಿದೆ. ಕುಂದಾಪುರದಿಂದ ಹಿಡಿದು ಉಜಿರೆ ವರೆಗಿನ ಶ್ರೀಮಂತ ತುಳುನಾಡು ಸಿರಿಗಳ ಆರಾಧನೆಯ ಕಥೆಗಳು ಯುವಜನಾಂಗಕ್ಕೆ ತಿಳಿಸಿಕೊಡುವ ಪ್ರಯತ್ನ ಮಾಡಲಾಗಿದೆ. ಪುಸ್ತಕ ಅನಾವರಣ ಮಾಡುವ ಮೂಲಕ ತುಳುನಾಡಿನ ಇತಿಹಾಸವನ್ನು ಮರುಕಳಿಸುವ ಪ್ರಯತ್ನ ಮಾಡಲಾಗಿದೆ ಎಂದರು.
ಲೇಖಕಿ ಸರಳಾ ಎಸ್. ಹೆಗ್ಡೆ, ಮಾತನಾಡಿ ಪಾರ್ದನಗಳು ಒಬ್ಬರಿಂದ ಇನ್ನೊಬ್ಬರಿಗೆ ಭಿನ್ನವಾಗಿರುತ್ತದೆ. ಅದನ್ನು ಕ್ರೋಢೀಕರಿಸಿ ಪುಸ್ತಕ ಬರೆಯಲಾಗಿದೆ ಎಂದರು.
ಕವತ್ತಾರು ವಿಷ್ಣುರಾಜ ಭಟ್, ದೇವಸ್ಥಾನದ ತಂತ್ರಿ ಹರೀಶ್ ತಂತ್ರಿ ಮಾತನಾಡಿ ಶುಭಹಾರೈಸಿದರು.
ಸಭೆಯಲ್ಲಿ ನಂದಳಿಕೆ ಮಹಾಲಿಂಗೇಶ್ವರ ದೇವಸ್ಥಾನದ ಅನುವಂಶಿಕ ಮೊಕ್ತೆಸರ ಚಾವಡಿ ಅರಮನೆಯ ಸುಂದರರಾಮ ಹೆಗ್ಡೆ ಉಪಸ್ಥಿತರಿದ್ದರು, ಜಯಂತಿ ಶೆಟ್ಟಿ ಪ್ರಾರ್ಥಿಸಿದರು. ನಂದಳಿಕೆ ಸುಹಾಸ್ ಹೆಗ್ಡೆ ಸ್ವಾಗತಿಸಿದರು. ಸೀತಾರಾಂ ಭಟ್ ಕಾರ್ಯಕ್ರಮ ನಿರೂಪಿಸಿದರು. ಸುಧಾಕರ್ ಧನ್ಯವಾದವಿತ್ತರು.

ಇತ್ತೀಚಿನ ಸುದ್ದಿ

ಜಾಹೀರಾತು