2:27 AM Wednesday29 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ನಂದಳಿಕೆ: ‘ಸತ್ಯಮಾಲೋಕಂದ ಸಿರಿ’ ತುಳು ಕೃತಿ ಲೋಕಾರ್ಪಣೆ

03/07/2023, 11:31

ನಂದಳಿಕೆ(reporterkarnataka.com): ಕೃತಿ ಬರೆಯಲು ಇಚ್ಚಾಶಕ್ತಿ, ಶ್ರದ್ಧೆ ಪ್ರಮುಖ ಪಾತ್ರವಹಿಸುತ್ತದೆ ಎಂದು ತುಳುಕೂಟ ಉಡುಪಿ ಇದರ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ ಹೇಳಿದರು ಅವರು ನಂದಳಿಕೆ ಮಹಾಲಿಂಗೇಶ್ವರ ದೇವಾಲಯದ ಸಭಾಂಗಣದಲ್ಲಿ ಚಾವಡಿ ಅರಮನೆಯ ಸರಳಾ ಎಸ್. ಎಸ್. ಹೆಗ್ಡೆ ಬರೆದ “ಸತ್ಯಮಾಲೋಕಂದ ಸಿರಿ” ಕೃತಿ ಲೋಕಾರ್ಪಣೆ ಗೊಳಿಸಿ ಮಾತನಾಡಿದರು.
ತುಳುನಾಡು ದೈವಗಳನಾಡಗಿದೆ. ಇಲ್ಲಿನ ಸಿರಿಗಳ ಕಾರ್ಣಿಕ ಮೂಲಕ ಸಂಸ್ಕೃತಿಯ ಶ್ರೀಮಂತಿಕೆ ತೋರಿಸುತ್ತದೆ. ಸಿರಿಗಳ ಜನಪದವನ್ನು ಕೃತಿಯನ್ನಾಗಿಸಿ ಉಳಿಸುವ ಕಾರ್ಯ ಮಹತ್ವದ್ದಾಗಿದೆ ಎಂದರು.

ವಿಜಯಾ ಬ್ಯಾಂಕ್ ವಿಶ್ರಾಂತ ಪ್ರಬಂಧಕ ಭುವನ ಪ್ರಸಾದ್ ಹೆಗ್ಡೆ ಮಾತನಾಡಿ, ನಂದಳಿಕೆ ಸಿರಿ ಜಾತ್ರೆಗೆ ಪ್ರಸಿದ್ಧವಾಗಿದೆ. ಇಲ್ಲಿಯ ಸಿರಿಗಳ ಕಥೆಗಳನ್ನು ಪುಸ್ತಕ ರೂಪದಲ್ಲಿ ಬರೆದಿರುವುದು ಅಭಿನಂದನಾರ್ಹವಾಗಿದೆ. ಮುಂದಿನ ಜನಾಂಗಕ್ಕೆ ಸ್ಥಳದ ಮಹತ್ವದ ಹಾಗೂ ಇತಿಹಾಸ ಗುರುತಿಸಲು ಸಾಧ್ಯವಾಗುತ್ತದೆ. ಕವಿ ಮುದ್ದಣ ಸೇರಿದಂತೆ ಅನೇಕ ಸಾಹಿತಿಗಳ ನಂದಳಿಕೆಯೆ ಮೂಲವಾಗಿದೆ ಎಂದರು.
ಜನಪದ ವಿದ್ವಾಂಸ ಭುವನೇಂದ್ರ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥ ಡಾ. ಅರುಣ ಕುಮಾರ್ ಎಸ್. ಆರ್. ಮಾತನಾಡಿ ಸತ್ಯಮಾಲೋಕಂದ ಸಿರಿ ಈ ಪುಸ್ತಕದಲ್ಲಿ ಶ್ರೀಮಂತ ತುಳುನಾಡ ಸಂಸ್ಕೃತಿಯನ್ನು ತೆರೆದಿಡಲಾಗಿದೆ. ಕುಂದಾಪುರದಿಂದ ಹಿಡಿದು ಉಜಿರೆ ವರೆಗಿನ ಶ್ರೀಮಂತ ತುಳುನಾಡು ಸಿರಿಗಳ ಆರಾಧನೆಯ ಕಥೆಗಳು ಯುವಜನಾಂಗಕ್ಕೆ ತಿಳಿಸಿಕೊಡುವ ಪ್ರಯತ್ನ ಮಾಡಲಾಗಿದೆ. ಪುಸ್ತಕ ಅನಾವರಣ ಮಾಡುವ ಮೂಲಕ ತುಳುನಾಡಿನ ಇತಿಹಾಸವನ್ನು ಮರುಕಳಿಸುವ ಪ್ರಯತ್ನ ಮಾಡಲಾಗಿದೆ ಎಂದರು.
ಲೇಖಕಿ ಸರಳಾ ಎಸ್. ಹೆಗ್ಡೆ, ಮಾತನಾಡಿ ಪಾರ್ದನಗಳು ಒಬ್ಬರಿಂದ ಇನ್ನೊಬ್ಬರಿಗೆ ಭಿನ್ನವಾಗಿರುತ್ತದೆ. ಅದನ್ನು ಕ್ರೋಢೀಕರಿಸಿ ಪುಸ್ತಕ ಬರೆಯಲಾಗಿದೆ ಎಂದರು.
ಕವತ್ತಾರು ವಿಷ್ಣುರಾಜ ಭಟ್, ದೇವಸ್ಥಾನದ ತಂತ್ರಿ ಹರೀಶ್ ತಂತ್ರಿ ಮಾತನಾಡಿ ಶುಭಹಾರೈಸಿದರು.
ಸಭೆಯಲ್ಲಿ ನಂದಳಿಕೆ ಮಹಾಲಿಂಗೇಶ್ವರ ದೇವಸ್ಥಾನದ ಅನುವಂಶಿಕ ಮೊಕ್ತೆಸರ ಚಾವಡಿ ಅರಮನೆಯ ಸುಂದರರಾಮ ಹೆಗ್ಡೆ ಉಪಸ್ಥಿತರಿದ್ದರು, ಜಯಂತಿ ಶೆಟ್ಟಿ ಪ್ರಾರ್ಥಿಸಿದರು. ನಂದಳಿಕೆ ಸುಹಾಸ್ ಹೆಗ್ಡೆ ಸ್ವಾಗತಿಸಿದರು. ಸೀತಾರಾಂ ಭಟ್ ಕಾರ್ಯಕ್ರಮ ನಿರೂಪಿಸಿದರು. ಸುಧಾಕರ್ ಧನ್ಯವಾದವಿತ್ತರು.

ಇತ್ತೀಚಿನ ಸುದ್ದಿ

ಜಾಹೀರಾತು