10:34 PM Tuesday2 - June 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡು ಬಿಜೆಪಿ ನಾಯಕ ಅಣ್ಣಾಮಲೈ ರಾಜೀನಾಮೆ: ನೂತನ ಪಕ್ಷ ಸ್ಥಾಪನೆ? ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ನಡೆ; ಬಿಜೆಪಿಗೆ ಶುರುವಾಯ್ತು ಢವ ಢವ ನಾವು ಪಕ್ಷನಿಷ್ಠರು, ಜಮೀರ್‌ ವಿರುದ್ದ ಬೃಹತ್‌ ಷಡ್ಯಂತ್ರ: ವೈರಲ್‌ ಆಡಿಯೋ ಬಗ್ಗೆ ಸಿರಾಜ್‌… ಪಕ್ಷ ವಿರೋಧಿ ಕೃತ್ಯಕ್ಕೆ ಸಿಕ್ತು ಸಾಕ್ಷ್ಯ: ಜಮೀರ್ ಅಹ್ಮದ್ ಸ್ಫೋಟಕ ಆಡಿಯೋ ವೈರಲ್ ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು…

ಇತ್ತೀಚಿನ ಸುದ್ದಿ

ನಂದಳಿಕೆ: ‘ಸತ್ಯಮಾಲೋಕಂದ ಸಿರಿ’ ತುಳು ಕೃತಿ ಲೋಕಾರ್ಪಣೆ

03/07/2023, 11:31

ನಂದಳಿಕೆ(reporterkarnataka.com): ಕೃತಿ ಬರೆಯಲು ಇಚ್ಚಾಶಕ್ತಿ, ಶ್ರದ್ಧೆ ಪ್ರಮುಖ ಪಾತ್ರವಹಿಸುತ್ತದೆ ಎಂದು ತುಳುಕೂಟ ಉಡುಪಿ ಇದರ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ ಹೇಳಿದರು ಅವರು ನಂದಳಿಕೆ ಮಹಾಲಿಂಗೇಶ್ವರ ದೇವಾಲಯದ ಸಭಾಂಗಣದಲ್ಲಿ ಚಾವಡಿ ಅರಮನೆಯ ಸರಳಾ ಎಸ್. ಎಸ್. ಹೆಗ್ಡೆ ಬರೆದ “ಸತ್ಯಮಾಲೋಕಂದ ಸಿರಿ” ಕೃತಿ ಲೋಕಾರ್ಪಣೆ ಗೊಳಿಸಿ ಮಾತನಾಡಿದರು.
ತುಳುನಾಡು ದೈವಗಳನಾಡಗಿದೆ. ಇಲ್ಲಿನ ಸಿರಿಗಳ ಕಾರ್ಣಿಕ ಮೂಲಕ ಸಂಸ್ಕೃತಿಯ ಶ್ರೀಮಂತಿಕೆ ತೋರಿಸುತ್ತದೆ. ಸಿರಿಗಳ ಜನಪದವನ್ನು ಕೃತಿಯನ್ನಾಗಿಸಿ ಉಳಿಸುವ ಕಾರ್ಯ ಮಹತ್ವದ್ದಾಗಿದೆ ಎಂದರು.

ವಿಜಯಾ ಬ್ಯಾಂಕ್ ವಿಶ್ರಾಂತ ಪ್ರಬಂಧಕ ಭುವನ ಪ್ರಸಾದ್ ಹೆಗ್ಡೆ ಮಾತನಾಡಿ, ನಂದಳಿಕೆ ಸಿರಿ ಜಾತ್ರೆಗೆ ಪ್ರಸಿದ್ಧವಾಗಿದೆ. ಇಲ್ಲಿಯ ಸಿರಿಗಳ ಕಥೆಗಳನ್ನು ಪುಸ್ತಕ ರೂಪದಲ್ಲಿ ಬರೆದಿರುವುದು ಅಭಿನಂದನಾರ್ಹವಾಗಿದೆ. ಮುಂದಿನ ಜನಾಂಗಕ್ಕೆ ಸ್ಥಳದ ಮಹತ್ವದ ಹಾಗೂ ಇತಿಹಾಸ ಗುರುತಿಸಲು ಸಾಧ್ಯವಾಗುತ್ತದೆ. ಕವಿ ಮುದ್ದಣ ಸೇರಿದಂತೆ ಅನೇಕ ಸಾಹಿತಿಗಳ ನಂದಳಿಕೆಯೆ ಮೂಲವಾಗಿದೆ ಎಂದರು.
ಜನಪದ ವಿದ್ವಾಂಸ ಭುವನೇಂದ್ರ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥ ಡಾ. ಅರುಣ ಕುಮಾರ್ ಎಸ್. ಆರ್. ಮಾತನಾಡಿ ಸತ್ಯಮಾಲೋಕಂದ ಸಿರಿ ಈ ಪುಸ್ತಕದಲ್ಲಿ ಶ್ರೀಮಂತ ತುಳುನಾಡ ಸಂಸ್ಕೃತಿಯನ್ನು ತೆರೆದಿಡಲಾಗಿದೆ. ಕುಂದಾಪುರದಿಂದ ಹಿಡಿದು ಉಜಿರೆ ವರೆಗಿನ ಶ್ರೀಮಂತ ತುಳುನಾಡು ಸಿರಿಗಳ ಆರಾಧನೆಯ ಕಥೆಗಳು ಯುವಜನಾಂಗಕ್ಕೆ ತಿಳಿಸಿಕೊಡುವ ಪ್ರಯತ್ನ ಮಾಡಲಾಗಿದೆ. ಪುಸ್ತಕ ಅನಾವರಣ ಮಾಡುವ ಮೂಲಕ ತುಳುನಾಡಿನ ಇತಿಹಾಸವನ್ನು ಮರುಕಳಿಸುವ ಪ್ರಯತ್ನ ಮಾಡಲಾಗಿದೆ ಎಂದರು.
ಲೇಖಕಿ ಸರಳಾ ಎಸ್. ಹೆಗ್ಡೆ, ಮಾತನಾಡಿ ಪಾರ್ದನಗಳು ಒಬ್ಬರಿಂದ ಇನ್ನೊಬ್ಬರಿಗೆ ಭಿನ್ನವಾಗಿರುತ್ತದೆ. ಅದನ್ನು ಕ್ರೋಢೀಕರಿಸಿ ಪುಸ್ತಕ ಬರೆಯಲಾಗಿದೆ ಎಂದರು.
ಕವತ್ತಾರು ವಿಷ್ಣುರಾಜ ಭಟ್, ದೇವಸ್ಥಾನದ ತಂತ್ರಿ ಹರೀಶ್ ತಂತ್ರಿ ಮಾತನಾಡಿ ಶುಭಹಾರೈಸಿದರು.
ಸಭೆಯಲ್ಲಿ ನಂದಳಿಕೆ ಮಹಾಲಿಂಗೇಶ್ವರ ದೇವಸ್ಥಾನದ ಅನುವಂಶಿಕ ಮೊಕ್ತೆಸರ ಚಾವಡಿ ಅರಮನೆಯ ಸುಂದರರಾಮ ಹೆಗ್ಡೆ ಉಪಸ್ಥಿತರಿದ್ದರು, ಜಯಂತಿ ಶೆಟ್ಟಿ ಪ್ರಾರ್ಥಿಸಿದರು. ನಂದಳಿಕೆ ಸುಹಾಸ್ ಹೆಗ್ಡೆ ಸ್ವಾಗತಿಸಿದರು. ಸೀತಾರಾಂ ಭಟ್ ಕಾರ್ಯಕ್ರಮ ನಿರೂಪಿಸಿದರು. ಸುಧಾಕರ್ ಧನ್ಯವಾದವಿತ್ತರು.

ಇತ್ತೀಚಿನ ಸುದ್ದಿ

ಜಾಹೀರಾತು