5:18 AM Thursday6 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ನಂದಳಿಕೆ: ‘ಸತ್ಯಮಾಲೋಕಂದ ಸಿರಿ’ ತುಳು ಕೃತಿ ಲೋಕಾರ್ಪಣೆ

03/07/2023, 11:31

ನಂದಳಿಕೆ(reporterkarnataka.com): ಕೃತಿ ಬರೆಯಲು ಇಚ್ಚಾಶಕ್ತಿ, ಶ್ರದ್ಧೆ ಪ್ರಮುಖ ಪಾತ್ರವಹಿಸುತ್ತದೆ ಎಂದು ತುಳುಕೂಟ ಉಡುಪಿ ಇದರ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ ಹೇಳಿದರು ಅವರು ನಂದಳಿಕೆ ಮಹಾಲಿಂಗೇಶ್ವರ ದೇವಾಲಯದ ಸಭಾಂಗಣದಲ್ಲಿ ಚಾವಡಿ ಅರಮನೆಯ ಸರಳಾ ಎಸ್. ಎಸ್. ಹೆಗ್ಡೆ ಬರೆದ “ಸತ್ಯಮಾಲೋಕಂದ ಸಿರಿ” ಕೃತಿ ಲೋಕಾರ್ಪಣೆ ಗೊಳಿಸಿ ಮಾತನಾಡಿದರು.
ತುಳುನಾಡು ದೈವಗಳನಾಡಗಿದೆ. ಇಲ್ಲಿನ ಸಿರಿಗಳ ಕಾರ್ಣಿಕ ಮೂಲಕ ಸಂಸ್ಕೃತಿಯ ಶ್ರೀಮಂತಿಕೆ ತೋರಿಸುತ್ತದೆ. ಸಿರಿಗಳ ಜನಪದವನ್ನು ಕೃತಿಯನ್ನಾಗಿಸಿ ಉಳಿಸುವ ಕಾರ್ಯ ಮಹತ್ವದ್ದಾಗಿದೆ ಎಂದರು.

ವಿಜಯಾ ಬ್ಯಾಂಕ್ ವಿಶ್ರಾಂತ ಪ್ರಬಂಧಕ ಭುವನ ಪ್ರಸಾದ್ ಹೆಗ್ಡೆ ಮಾತನಾಡಿ, ನಂದಳಿಕೆ ಸಿರಿ ಜಾತ್ರೆಗೆ ಪ್ರಸಿದ್ಧವಾಗಿದೆ. ಇಲ್ಲಿಯ ಸಿರಿಗಳ ಕಥೆಗಳನ್ನು ಪುಸ್ತಕ ರೂಪದಲ್ಲಿ ಬರೆದಿರುವುದು ಅಭಿನಂದನಾರ್ಹವಾಗಿದೆ. ಮುಂದಿನ ಜನಾಂಗಕ್ಕೆ ಸ್ಥಳದ ಮಹತ್ವದ ಹಾಗೂ ಇತಿಹಾಸ ಗುರುತಿಸಲು ಸಾಧ್ಯವಾಗುತ್ತದೆ. ಕವಿ ಮುದ್ದಣ ಸೇರಿದಂತೆ ಅನೇಕ ಸಾಹಿತಿಗಳ ನಂದಳಿಕೆಯೆ ಮೂಲವಾಗಿದೆ ಎಂದರು.
ಜನಪದ ವಿದ್ವಾಂಸ ಭುವನೇಂದ್ರ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥ ಡಾ. ಅರುಣ ಕುಮಾರ್ ಎಸ್. ಆರ್. ಮಾತನಾಡಿ ಸತ್ಯಮಾಲೋಕಂದ ಸಿರಿ ಈ ಪುಸ್ತಕದಲ್ಲಿ ಶ್ರೀಮಂತ ತುಳುನಾಡ ಸಂಸ್ಕೃತಿಯನ್ನು ತೆರೆದಿಡಲಾಗಿದೆ. ಕುಂದಾಪುರದಿಂದ ಹಿಡಿದು ಉಜಿರೆ ವರೆಗಿನ ಶ್ರೀಮಂತ ತುಳುನಾಡು ಸಿರಿಗಳ ಆರಾಧನೆಯ ಕಥೆಗಳು ಯುವಜನಾಂಗಕ್ಕೆ ತಿಳಿಸಿಕೊಡುವ ಪ್ರಯತ್ನ ಮಾಡಲಾಗಿದೆ. ಪುಸ್ತಕ ಅನಾವರಣ ಮಾಡುವ ಮೂಲಕ ತುಳುನಾಡಿನ ಇತಿಹಾಸವನ್ನು ಮರುಕಳಿಸುವ ಪ್ರಯತ್ನ ಮಾಡಲಾಗಿದೆ ಎಂದರು.
ಲೇಖಕಿ ಸರಳಾ ಎಸ್. ಹೆಗ್ಡೆ, ಮಾತನಾಡಿ ಪಾರ್ದನಗಳು ಒಬ್ಬರಿಂದ ಇನ್ನೊಬ್ಬರಿಗೆ ಭಿನ್ನವಾಗಿರುತ್ತದೆ. ಅದನ್ನು ಕ್ರೋಢೀಕರಿಸಿ ಪುಸ್ತಕ ಬರೆಯಲಾಗಿದೆ ಎಂದರು.
ಕವತ್ತಾರು ವಿಷ್ಣುರಾಜ ಭಟ್, ದೇವಸ್ಥಾನದ ತಂತ್ರಿ ಹರೀಶ್ ತಂತ್ರಿ ಮಾತನಾಡಿ ಶುಭಹಾರೈಸಿದರು.
ಸಭೆಯಲ್ಲಿ ನಂದಳಿಕೆ ಮಹಾಲಿಂಗೇಶ್ವರ ದೇವಸ್ಥಾನದ ಅನುವಂಶಿಕ ಮೊಕ್ತೆಸರ ಚಾವಡಿ ಅರಮನೆಯ ಸುಂದರರಾಮ ಹೆಗ್ಡೆ ಉಪಸ್ಥಿತರಿದ್ದರು, ಜಯಂತಿ ಶೆಟ್ಟಿ ಪ್ರಾರ್ಥಿಸಿದರು. ನಂದಳಿಕೆ ಸುಹಾಸ್ ಹೆಗ್ಡೆ ಸ್ವಾಗತಿಸಿದರು. ಸೀತಾರಾಂ ಭಟ್ ಕಾರ್ಯಕ್ರಮ ನಿರೂಪಿಸಿದರು. ಸುಧಾಕರ್ ಧನ್ಯವಾದವಿತ್ತರು.

ಇತ್ತೀಚಿನ ಸುದ್ದಿ

ಜಾಹೀರಾತು