2:55 PM Tuesday8 - July 2025
ಬ್ರೇಕಿಂಗ್ ನ್ಯೂಸ್
ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ…

ಇತ್ತೀಚಿನ ಸುದ್ದಿ

ನಂದಳಿಕೆ: ‘ಸತ್ಯಮಾಲೋಕಂದ ಸಿರಿ’ ತುಳು ಕೃತಿ ಲೋಕಾರ್ಪಣೆ

03/07/2023, 11:31

ನಂದಳಿಕೆ(reporterkarnataka.com): ಕೃತಿ ಬರೆಯಲು ಇಚ್ಚಾಶಕ್ತಿ, ಶ್ರದ್ಧೆ ಪ್ರಮುಖ ಪಾತ್ರವಹಿಸುತ್ತದೆ ಎಂದು ತುಳುಕೂಟ ಉಡುಪಿ ಇದರ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ ಹೇಳಿದರು ಅವರು ನಂದಳಿಕೆ ಮಹಾಲಿಂಗೇಶ್ವರ ದೇವಾಲಯದ ಸಭಾಂಗಣದಲ್ಲಿ ಚಾವಡಿ ಅರಮನೆಯ ಸರಳಾ ಎಸ್. ಎಸ್. ಹೆಗ್ಡೆ ಬರೆದ “ಸತ್ಯಮಾಲೋಕಂದ ಸಿರಿ” ಕೃತಿ ಲೋಕಾರ್ಪಣೆ ಗೊಳಿಸಿ ಮಾತನಾಡಿದರು.
ತುಳುನಾಡು ದೈವಗಳನಾಡಗಿದೆ. ಇಲ್ಲಿನ ಸಿರಿಗಳ ಕಾರ್ಣಿಕ ಮೂಲಕ ಸಂಸ್ಕೃತಿಯ ಶ್ರೀಮಂತಿಕೆ ತೋರಿಸುತ್ತದೆ. ಸಿರಿಗಳ ಜನಪದವನ್ನು ಕೃತಿಯನ್ನಾಗಿಸಿ ಉಳಿಸುವ ಕಾರ್ಯ ಮಹತ್ವದ್ದಾಗಿದೆ ಎಂದರು.

ವಿಜಯಾ ಬ್ಯಾಂಕ್ ವಿಶ್ರಾಂತ ಪ್ರಬಂಧಕ ಭುವನ ಪ್ರಸಾದ್ ಹೆಗ್ಡೆ ಮಾತನಾಡಿ, ನಂದಳಿಕೆ ಸಿರಿ ಜಾತ್ರೆಗೆ ಪ್ರಸಿದ್ಧವಾಗಿದೆ. ಇಲ್ಲಿಯ ಸಿರಿಗಳ ಕಥೆಗಳನ್ನು ಪುಸ್ತಕ ರೂಪದಲ್ಲಿ ಬರೆದಿರುವುದು ಅಭಿನಂದನಾರ್ಹವಾಗಿದೆ. ಮುಂದಿನ ಜನಾಂಗಕ್ಕೆ ಸ್ಥಳದ ಮಹತ್ವದ ಹಾಗೂ ಇತಿಹಾಸ ಗುರುತಿಸಲು ಸಾಧ್ಯವಾಗುತ್ತದೆ. ಕವಿ ಮುದ್ದಣ ಸೇರಿದಂತೆ ಅನೇಕ ಸಾಹಿತಿಗಳ ನಂದಳಿಕೆಯೆ ಮೂಲವಾಗಿದೆ ಎಂದರು.
ಜನಪದ ವಿದ್ವಾಂಸ ಭುವನೇಂದ್ರ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥ ಡಾ. ಅರುಣ ಕುಮಾರ್ ಎಸ್. ಆರ್. ಮಾತನಾಡಿ ಸತ್ಯಮಾಲೋಕಂದ ಸಿರಿ ಈ ಪುಸ್ತಕದಲ್ಲಿ ಶ್ರೀಮಂತ ತುಳುನಾಡ ಸಂಸ್ಕೃತಿಯನ್ನು ತೆರೆದಿಡಲಾಗಿದೆ. ಕುಂದಾಪುರದಿಂದ ಹಿಡಿದು ಉಜಿರೆ ವರೆಗಿನ ಶ್ರೀಮಂತ ತುಳುನಾಡು ಸಿರಿಗಳ ಆರಾಧನೆಯ ಕಥೆಗಳು ಯುವಜನಾಂಗಕ್ಕೆ ತಿಳಿಸಿಕೊಡುವ ಪ್ರಯತ್ನ ಮಾಡಲಾಗಿದೆ. ಪುಸ್ತಕ ಅನಾವರಣ ಮಾಡುವ ಮೂಲಕ ತುಳುನಾಡಿನ ಇತಿಹಾಸವನ್ನು ಮರುಕಳಿಸುವ ಪ್ರಯತ್ನ ಮಾಡಲಾಗಿದೆ ಎಂದರು.
ಲೇಖಕಿ ಸರಳಾ ಎಸ್. ಹೆಗ್ಡೆ, ಮಾತನಾಡಿ ಪಾರ್ದನಗಳು ಒಬ್ಬರಿಂದ ಇನ್ನೊಬ್ಬರಿಗೆ ಭಿನ್ನವಾಗಿರುತ್ತದೆ. ಅದನ್ನು ಕ್ರೋಢೀಕರಿಸಿ ಪುಸ್ತಕ ಬರೆಯಲಾಗಿದೆ ಎಂದರು.
ಕವತ್ತಾರು ವಿಷ್ಣುರಾಜ ಭಟ್, ದೇವಸ್ಥಾನದ ತಂತ್ರಿ ಹರೀಶ್ ತಂತ್ರಿ ಮಾತನಾಡಿ ಶುಭಹಾರೈಸಿದರು.
ಸಭೆಯಲ್ಲಿ ನಂದಳಿಕೆ ಮಹಾಲಿಂಗೇಶ್ವರ ದೇವಸ್ಥಾನದ ಅನುವಂಶಿಕ ಮೊಕ್ತೆಸರ ಚಾವಡಿ ಅರಮನೆಯ ಸುಂದರರಾಮ ಹೆಗ್ಡೆ ಉಪಸ್ಥಿತರಿದ್ದರು, ಜಯಂತಿ ಶೆಟ್ಟಿ ಪ್ರಾರ್ಥಿಸಿದರು. ನಂದಳಿಕೆ ಸುಹಾಸ್ ಹೆಗ್ಡೆ ಸ್ವಾಗತಿಸಿದರು. ಸೀತಾರಾಂ ಭಟ್ ಕಾರ್ಯಕ್ರಮ ನಿರೂಪಿಸಿದರು. ಸುಧಾಕರ್ ಧನ್ಯವಾದವಿತ್ತರು.

ಇತ್ತೀಚಿನ ಸುದ್ದಿ

ಜಾಹೀರಾತು