3:09 PM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ನಂದಿನಿ ಗ್ರಾಹಕರಿಗೆ ಉಚಿತ ಹೆಚ್ಚುವರಿ ಹಾಲು: ಇಂದಿನಿಂದ ತಿಂಗಳಾಂತ್ಯ ವರೆಗೆ ಸಿಗಲಿದೆ ಸೌಲಭ್ಯ 

01/06/2021, 06:59

ಮಂಗಳೂರು(reporterkarnataka news): ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಲ್ಲಿ ಇದೀಗ ಹಾಲು ಉತ್ಪಾದನೆ ಅಧಿಕವಾಗಿರುವುದರಿಂದ ವಿಶ್ವ ಹಾಲು ದಿನಾಚರಣೆಯ ಅಂಗವಾಗಿ ನಂದಿನಿಯು ಜೂ.1ರಿಂದ 30ರವರೆಗೆ ತನ್ನ ಗ್ರಾಹಕರಿಗೆ ಹೆಚ್ಚುವರಿ ಹಾಲು ಉಚಿತವಾಗಿ ನೀಡಲಿದೆ.

ಎಲ್ಲ ಮಾದರಿಯ ನಂದಿನಿ 500 ಮಿ.ಲೀ. ಮೇಲೆ ತಲಾ 20 ಮಿ.ಲೀ. ಹಾಗೂ 1 ಲೀಟರ್ ಹಾಲಿನ ಪೊಟ್ಟಣಗಳ ಮೇಲೆ ತಲಾ 

40ಮಿ.ಲೀ. ಹಾಲನ್ನು ಗ್ರಾಹಕರಿಗೆ ಉಚಿತವಾಗಿ ನೀಡಲಿದೆ.  ಒಕ್ಕೂಟದ ಅಧ್ಯಕ್ಷ ಕೊಡವೂರು ರವಿರಾಜ ಹೆಗ್ಡೆ ಈ ವಿಷಯವನ್ನು

ತಿಳಿಸಿದ್ದಾರೆ.

ಲಾಕ್‌ಡೌನ್ ಪರಿಣಾಮ ಶುಭ ಸಮಾರಂಭ, ದೇವಸ್ಥಾನ, ವಿದ್ಯಾಸಂಸ್ಥೆಗಳ ಹಾಸ್ಟೆಲ್, ಹೊಟೇಲ್‌ಗಳಿಗೆ ಬಂದ್ ಆಗಿರುವುದರಿಂದ  ಹಾಲು ಮತ್ತು ಮೊಸರುಗಳ ಮಾರಾಟದಲ್ಲಿ ನಿರೀಕ್ಷಿತ ಮಟ್ಟದ ಅಭಿವೃದ್ಧಿ ಸಾಧ್ಯವಾಗುತ್ತಿಲ್ಲ. ರಾಜ್ಯಾದ್ಯಂತ ಕೊರೊನಾ ಸೋಂಕಿನ ಎರಡನೇ ಅಲೆಯು ತೀವ್ರವಾಗಿದ್ದು, ಇದರಿಂದ ಕಳೆದ ಎ.28ರಿಂದ ರಾಜ್ಯಾದ್ಯಂತ ಲಾಕ್‌ಡೌನ್ ಇರುವ ಹಿನ್ನೆಲೆಯಲ್ಲಿ ಹಾಲಿನ ಮಾರಾಟದಲ್ಲಿ ಹೆಚ್ಚಳ ಸಾಧ್ಯವಾಗುತ್ತಿಲ್ಲ ಎಂದವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು