6:55 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ನಂದಿನಿ ಗ್ರಾಹಕರಿಗೆ ಉಚಿತ ಹೆಚ್ಚುವರಿ ಹಾಲು: ಇಂದಿನಿಂದ ತಿಂಗಳಾಂತ್ಯ ವರೆಗೆ ಸಿಗಲಿದೆ ಸೌಲಭ್ಯ 

01/06/2021, 06:59

ಮಂಗಳೂರು(reporterkarnataka news): ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಲ್ಲಿ ಇದೀಗ ಹಾಲು ಉತ್ಪಾದನೆ ಅಧಿಕವಾಗಿರುವುದರಿಂದ ವಿಶ್ವ ಹಾಲು ದಿನಾಚರಣೆಯ ಅಂಗವಾಗಿ ನಂದಿನಿಯು ಜೂ.1ರಿಂದ 30ರವರೆಗೆ ತನ್ನ ಗ್ರಾಹಕರಿಗೆ ಹೆಚ್ಚುವರಿ ಹಾಲು ಉಚಿತವಾಗಿ ನೀಡಲಿದೆ.

ಎಲ್ಲ ಮಾದರಿಯ ನಂದಿನಿ 500 ಮಿ.ಲೀ. ಮೇಲೆ ತಲಾ 20 ಮಿ.ಲೀ. ಹಾಗೂ 1 ಲೀಟರ್ ಹಾಲಿನ ಪೊಟ್ಟಣಗಳ ಮೇಲೆ ತಲಾ 

40ಮಿ.ಲೀ. ಹಾಲನ್ನು ಗ್ರಾಹಕರಿಗೆ ಉಚಿತವಾಗಿ ನೀಡಲಿದೆ.  ಒಕ್ಕೂಟದ ಅಧ್ಯಕ್ಷ ಕೊಡವೂರು ರವಿರಾಜ ಹೆಗ್ಡೆ ಈ ವಿಷಯವನ್ನು

ತಿಳಿಸಿದ್ದಾರೆ.

ಲಾಕ್‌ಡೌನ್ ಪರಿಣಾಮ ಶುಭ ಸಮಾರಂಭ, ದೇವಸ್ಥಾನ, ವಿದ್ಯಾಸಂಸ್ಥೆಗಳ ಹಾಸ್ಟೆಲ್, ಹೊಟೇಲ್‌ಗಳಿಗೆ ಬಂದ್ ಆಗಿರುವುದರಿಂದ  ಹಾಲು ಮತ್ತು ಮೊಸರುಗಳ ಮಾರಾಟದಲ್ಲಿ ನಿರೀಕ್ಷಿತ ಮಟ್ಟದ ಅಭಿವೃದ್ಧಿ ಸಾಧ್ಯವಾಗುತ್ತಿಲ್ಲ. ರಾಜ್ಯಾದ್ಯಂತ ಕೊರೊನಾ ಸೋಂಕಿನ ಎರಡನೇ ಅಲೆಯು ತೀವ್ರವಾಗಿದ್ದು, ಇದರಿಂದ ಕಳೆದ ಎ.28ರಿಂದ ರಾಜ್ಯಾದ್ಯಂತ ಲಾಕ್‌ಡೌನ್ ಇರುವ ಹಿನ್ನೆಲೆಯಲ್ಲಿ ಹಾಲಿನ ಮಾರಾಟದಲ್ಲಿ ಹೆಚ್ಚಳ ಸಾಧ್ಯವಾಗುತ್ತಿಲ್ಲ ಎಂದವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು