5:58 PM Thursday23 - April 2026
ಬ್ರೇಕಿಂಗ್ ನ್ಯೂಸ್
ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು…

ಇತ್ತೀಚಿನ ಸುದ್ದಿ

ನಂದಿನಿ ಗ್ರಾಹಕರಿಗೆ ಉಚಿತ ಹೆಚ್ಚುವರಿ ಹಾಲು: ಇಂದಿನಿಂದ ತಿಂಗಳಾಂತ್ಯ ವರೆಗೆ ಸಿಗಲಿದೆ ಸೌಲಭ್ಯ 

01/06/2021, 06:59

ಮಂಗಳೂರು(reporterkarnataka news): ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಲ್ಲಿ ಇದೀಗ ಹಾಲು ಉತ್ಪಾದನೆ ಅಧಿಕವಾಗಿರುವುದರಿಂದ ವಿಶ್ವ ಹಾಲು ದಿನಾಚರಣೆಯ ಅಂಗವಾಗಿ ನಂದಿನಿಯು ಜೂ.1ರಿಂದ 30ರವರೆಗೆ ತನ್ನ ಗ್ರಾಹಕರಿಗೆ ಹೆಚ್ಚುವರಿ ಹಾಲು ಉಚಿತವಾಗಿ ನೀಡಲಿದೆ.

ಎಲ್ಲ ಮಾದರಿಯ ನಂದಿನಿ 500 ಮಿ.ಲೀ. ಮೇಲೆ ತಲಾ 20 ಮಿ.ಲೀ. ಹಾಗೂ 1 ಲೀಟರ್ ಹಾಲಿನ ಪೊಟ್ಟಣಗಳ ಮೇಲೆ ತಲಾ 

40ಮಿ.ಲೀ. ಹಾಲನ್ನು ಗ್ರಾಹಕರಿಗೆ ಉಚಿತವಾಗಿ ನೀಡಲಿದೆ.  ಒಕ್ಕೂಟದ ಅಧ್ಯಕ್ಷ ಕೊಡವೂರು ರವಿರಾಜ ಹೆಗ್ಡೆ ಈ ವಿಷಯವನ್ನು

ತಿಳಿಸಿದ್ದಾರೆ.

ಲಾಕ್‌ಡೌನ್ ಪರಿಣಾಮ ಶುಭ ಸಮಾರಂಭ, ದೇವಸ್ಥಾನ, ವಿದ್ಯಾಸಂಸ್ಥೆಗಳ ಹಾಸ್ಟೆಲ್, ಹೊಟೇಲ್‌ಗಳಿಗೆ ಬಂದ್ ಆಗಿರುವುದರಿಂದ  ಹಾಲು ಮತ್ತು ಮೊಸರುಗಳ ಮಾರಾಟದಲ್ಲಿ ನಿರೀಕ್ಷಿತ ಮಟ್ಟದ ಅಭಿವೃದ್ಧಿ ಸಾಧ್ಯವಾಗುತ್ತಿಲ್ಲ. ರಾಜ್ಯಾದ್ಯಂತ ಕೊರೊನಾ ಸೋಂಕಿನ ಎರಡನೇ ಅಲೆಯು ತೀವ್ರವಾಗಿದ್ದು, ಇದರಿಂದ ಕಳೆದ ಎ.28ರಿಂದ ರಾಜ್ಯಾದ್ಯಂತ ಲಾಕ್‌ಡೌನ್ ಇರುವ ಹಿನ್ನೆಲೆಯಲ್ಲಿ ಹಾಲಿನ ಮಾರಾಟದಲ್ಲಿ ಹೆಚ್ಚಳ ಸಾಧ್ಯವಾಗುತ್ತಿಲ್ಲ ಎಂದವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು