2:26 AM Tuesday21 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ನಂದಿನಿ ಗ್ರಾಹಕರಿಗೆ ಉಚಿತ ಹೆಚ್ಚುವರಿ ಹಾಲು: ಇಂದಿನಿಂದ ತಿಂಗಳಾಂತ್ಯ ವರೆಗೆ ಸಿಗಲಿದೆ ಸೌಲಭ್ಯ 

01/06/2021, 06:59

ಮಂಗಳೂರು(reporterkarnataka news): ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಲ್ಲಿ ಇದೀಗ ಹಾಲು ಉತ್ಪಾದನೆ ಅಧಿಕವಾಗಿರುವುದರಿಂದ ವಿಶ್ವ ಹಾಲು ದಿನಾಚರಣೆಯ ಅಂಗವಾಗಿ ನಂದಿನಿಯು ಜೂ.1ರಿಂದ 30ರವರೆಗೆ ತನ್ನ ಗ್ರಾಹಕರಿಗೆ ಹೆಚ್ಚುವರಿ ಹಾಲು ಉಚಿತವಾಗಿ ನೀಡಲಿದೆ.

ಎಲ್ಲ ಮಾದರಿಯ ನಂದಿನಿ 500 ಮಿ.ಲೀ. ಮೇಲೆ ತಲಾ 20 ಮಿ.ಲೀ. ಹಾಗೂ 1 ಲೀಟರ್ ಹಾಲಿನ ಪೊಟ್ಟಣಗಳ ಮೇಲೆ ತಲಾ 

40ಮಿ.ಲೀ. ಹಾಲನ್ನು ಗ್ರಾಹಕರಿಗೆ ಉಚಿತವಾಗಿ ನೀಡಲಿದೆ.  ಒಕ್ಕೂಟದ ಅಧ್ಯಕ್ಷ ಕೊಡವೂರು ರವಿರಾಜ ಹೆಗ್ಡೆ ಈ ವಿಷಯವನ್ನು

ತಿಳಿಸಿದ್ದಾರೆ.

ಲಾಕ್‌ಡೌನ್ ಪರಿಣಾಮ ಶುಭ ಸಮಾರಂಭ, ದೇವಸ್ಥಾನ, ವಿದ್ಯಾಸಂಸ್ಥೆಗಳ ಹಾಸ್ಟೆಲ್, ಹೊಟೇಲ್‌ಗಳಿಗೆ ಬಂದ್ ಆಗಿರುವುದರಿಂದ  ಹಾಲು ಮತ್ತು ಮೊಸರುಗಳ ಮಾರಾಟದಲ್ಲಿ ನಿರೀಕ್ಷಿತ ಮಟ್ಟದ ಅಭಿವೃದ್ಧಿ ಸಾಧ್ಯವಾಗುತ್ತಿಲ್ಲ. ರಾಜ್ಯಾದ್ಯಂತ ಕೊರೊನಾ ಸೋಂಕಿನ ಎರಡನೇ ಅಲೆಯು ತೀವ್ರವಾಗಿದ್ದು, ಇದರಿಂದ ಕಳೆದ ಎ.28ರಿಂದ ರಾಜ್ಯಾದ್ಯಂತ ಲಾಕ್‌ಡೌನ್ ಇರುವ ಹಿನ್ನೆಲೆಯಲ್ಲಿ ಹಾಲಿನ ಮಾರಾಟದಲ್ಲಿ ಹೆಚ್ಚಳ ಸಾಧ್ಯವಾಗುತ್ತಿಲ್ಲ ಎಂದವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು