2:02 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ನಂದಿನಿ ಗ್ರಾಹಕರಿಗೆ ಉಚಿತ ಹೆಚ್ಚುವರಿ ಹಾಲು: ಇಂದಿನಿಂದ ತಿಂಗಳಾಂತ್ಯ ವರೆಗೆ ಸಿಗಲಿದೆ ಸೌಲಭ್ಯ 

01/06/2021, 06:59

ಮಂಗಳೂರು(reporterkarnataka news): ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಲ್ಲಿ ಇದೀಗ ಹಾಲು ಉತ್ಪಾದನೆ ಅಧಿಕವಾಗಿರುವುದರಿಂದ ವಿಶ್ವ ಹಾಲು ದಿನಾಚರಣೆಯ ಅಂಗವಾಗಿ ನಂದಿನಿಯು ಜೂ.1ರಿಂದ 30ರವರೆಗೆ ತನ್ನ ಗ್ರಾಹಕರಿಗೆ ಹೆಚ್ಚುವರಿ ಹಾಲು ಉಚಿತವಾಗಿ ನೀಡಲಿದೆ.

ಎಲ್ಲ ಮಾದರಿಯ ನಂದಿನಿ 500 ಮಿ.ಲೀ. ಮೇಲೆ ತಲಾ 20 ಮಿ.ಲೀ. ಹಾಗೂ 1 ಲೀಟರ್ ಹಾಲಿನ ಪೊಟ್ಟಣಗಳ ಮೇಲೆ ತಲಾ 

40ಮಿ.ಲೀ. ಹಾಲನ್ನು ಗ್ರಾಹಕರಿಗೆ ಉಚಿತವಾಗಿ ನೀಡಲಿದೆ.  ಒಕ್ಕೂಟದ ಅಧ್ಯಕ್ಷ ಕೊಡವೂರು ರವಿರಾಜ ಹೆಗ್ಡೆ ಈ ವಿಷಯವನ್ನು

ತಿಳಿಸಿದ್ದಾರೆ.

ಲಾಕ್‌ಡೌನ್ ಪರಿಣಾಮ ಶುಭ ಸಮಾರಂಭ, ದೇವಸ್ಥಾನ, ವಿದ್ಯಾಸಂಸ್ಥೆಗಳ ಹಾಸ್ಟೆಲ್, ಹೊಟೇಲ್‌ಗಳಿಗೆ ಬಂದ್ ಆಗಿರುವುದರಿಂದ  ಹಾಲು ಮತ್ತು ಮೊಸರುಗಳ ಮಾರಾಟದಲ್ಲಿ ನಿರೀಕ್ಷಿತ ಮಟ್ಟದ ಅಭಿವೃದ್ಧಿ ಸಾಧ್ಯವಾಗುತ್ತಿಲ್ಲ. ರಾಜ್ಯಾದ್ಯಂತ ಕೊರೊನಾ ಸೋಂಕಿನ ಎರಡನೇ ಅಲೆಯು ತೀವ್ರವಾಗಿದ್ದು, ಇದರಿಂದ ಕಳೆದ ಎ.28ರಿಂದ ರಾಜ್ಯಾದ್ಯಂತ ಲಾಕ್‌ಡೌನ್ ಇರುವ ಹಿನ್ನೆಲೆಯಲ್ಲಿ ಹಾಲಿನ ಮಾರಾಟದಲ್ಲಿ ಹೆಚ್ಚಳ ಸಾಧ್ಯವಾಗುತ್ತಿಲ್ಲ ಎಂದವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು