12:00 AM Friday21 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ

ಇತ್ತೀಚಿನ ಸುದ್ದಿ

ನಂಜನಗೂಡು: ಐತಿಹಾಸಿಕ ಸುತ್ತೂರು ಜಾತ್ರಾ ಮಹೋತ್ಸವಕ್ಕೆ ದಿನಗಣನೆ ಆರಂಭ

23/01/2025, 22:50

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಹತ್ತೂರ ಜಾತ್ರೆಗೆ ಸುತ್ತೂರು ಜಾತ್ರೆ ಸಮ ಎಂಬ ನಾಣ್ಣುಡಿಯಂತೆ ಸುತ್ತೂರು ಜಾತ್ರೆ ಜನಜಾಗೃತಿ ಯಾತ್ರೆ ಎಂದೆ ಪ್ರಸಿದ್ಧಿ ಪಡೆದಿರುವ ಸುತ್ತೂರು ಶ್ರೀ ಕ್ಷೇತ್ರದಲ್ಲಿ ಜ‌.26 ರಿಂದ 31ರವರೆಗೆ 10 ಹಲವು ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜಗದ್ಗುರು ಶ್ರೀ ಶಿವರಾತ್ರಿ ದೇಶಿ ಕೇಂದ್ರ ಮಹಾಸ್ವಾಮಿಗಳವರ ದಿವ್ಯ ಸ್ವಾನಿದ್ಯದಲ್ಲಿ ವಿಜ್ರಂಭಣೆಯಿಂದ ನಡೆಯಲಿದೆ ಎಂದು ಜೆಎಸ್ಎಸ್ ಮಹಾ ವಿದ್ಯಾಪೀಠದ ಕಾರ್ಯದರ್ಶಿ ಮಂಜುನಾಥ್, ಸಹ ಕಾರ್ಯದರ್ಶಿ ಶಿವಕುಮಾರ್ ಹಾಗೂ ಮಹಾದಾಸೋಹದ ಮುಖ್ಯಸ್ಥರಾದ ಬೊಕ್ಕಳ್ಳಿ ಸುಬ್ಬಪ್ಪ ತಿಳಿಸಿದ್ದಾರೆ.
ಇಂದು ಸುತ್ತೂರು ಶ್ರೀ ಕ್ಷೇತ್ರದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.
ಜ.26ರಂದು ವಸ್ತು ಪ್ರದರ್ಶನ, ಕೃಷಿ ಮೇಳ, ಸಾಂಸ್ಕೃತಿಕ ಮೇಳ ವಿವಿಧ ಕಾರ್ಯಕ್ರಮಗಳ ಉದ್ಘಾಟನೆಯಾಗಲಿದ್ದು
ಆದಿ ಚುಂಚನಗಿರಿ ಶ್ರಿ ನಿರ್ಮಲಾನಂದನಾಥ ಶ್ರೀಗಳು, ಸುತ್ತೂರು ಮಠದ ಶ್ರೀ ದೇಶೀಕೇಂದ್ರ ಶ್ರೀಗಳ ದಿವ್ಯ ಸಾನಿದ್ಯದೊಂದಿಗೆ ಹಲವು ಜನ ಪ್ರತಿನಿಧಿಗಳ ಸಮ್ಮುಖದಲ್ಲಿ ಜಾತ್ರ ಮಹೋತ್ಸಕ್ಕೆ ಚಾಲನೆ ನೀಡಲಾಗುತ್ತದೆ ಎಂದರು.


ಜ.27 ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ.
155 ಜೋಡಿಗಳಿಗೆ ಸಾಮೂಹಿಕ ವಿವಾಹ ನಡೆಯಲಿದೆ
ಇದು ವರೆಗೆ ಶ್ರೀಕ್ಷೇತ್ರದಲ್ಲಿ 3700 ಜೋಡಿಗಳಿಗೆ ವಿವಾಹವಾಗಿವೆ.
ಜ.28 ರಂದು ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳವರ ರಥೋತ್ಸವ, ವೀರಭದ್ರೇಶ್ವರ ಕೊಂಡೋತ್ಸವ.
29 ರಂದು ಶ್ರೀ ಮಹದೇಶ್ವರ ಕೊಂಡೋತ್ಸವ, ಹಾಗೂ ಲಕ್ಷ ದೀಪೋತ್ಸವ,30ರಂದು ತಪ್ಪೋತ್ಸವ,31 ರಂದು ಅನ್ನ ಬ್ರಹ್ಮೋತ್ಸವದ ಮೂಲಕ ಸಂಪನ್ನ. ಆರು ದಿನಗಳ ಕಾಲ ನಡೆಯುವ ಜಾತ್ರಾ ಮಹೋತ್ಸದಲ್ಲಿ ಭಜನಾ ಮೇಳ, ಧನಗಳ ಜಾತ್ರೆ, ವಸ್ತು ಪ್ರದರ್ಶನ, ಕೃಷಿಮೇಳ, ಚಿತ್ರಸಂತೆ, ಕುಸ್ತಿ ಪಂದ್ಯಾವಳಿ, ಗ್ರಾಮೀಣ ಜನತೆಗಾಗಿ ದೇಶಿ ಆಟಗಳು, ನಾಟಕ ಪ್ರದರ್ಶನ, ಕಲಾತಂಡಗಳ ಪ್ರದರ್ಶನ, ರಸಪ್ರಶ್ನೆ ಸ್ಪರ್ಧೆ, ಛಾಯಾಚಿತ್ರ ಸ್ಪರ್ಧೆ ಸೇರಿದಂತೆ ವಿವಿಧ ಧಾರ್ಮಿಕ ಹಾಗೂ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ, ಕ್ರೀಡೆಗಳು. ಜರುಗಲಿವೆ ಎಂದರು
ಒಂದು ವಾರಗಳ ಕಾಲ ನಡೆವ ಜಾತ್ರ ಮಹೋತ್ಸವಕ್ಕೆ 15ರಿಂದ 20 ಲಕ್ಷ ಜನ ಆಗಮಿಸುವ ನಿರೀಕ್ಷೆಯಿದೆ.
ಆರು ದಿನಗಳ ತ್ರಿಕಾಲ ಮಹಾ ದಾಸೋಹಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅದಕ್ಕಾಗಿ ಉಗ್ರಾಣದಲ್ಲಿ ಈಗಾಗಲೇ
1 ಸಾವಿರ ಕ್ವಿಂಟಾಲ್ ಅಕ್ಕಿ,250 ಕ್ವಿಂಟಾಲ್ ಬೇಳೆ,200 ಕ್ವಿಂಟಾಲ್ ಸಕ್ಕರೆ, 1500 ಸಾವಿರ ಟಿನ್ ಅಡುಗೆ ಎಣ್ಣೆ 10 ಸಾವಿರ ಕೆ.ಜಿ ತುಪ್ಪ ಸೇರಿಸಿ ಎಲ್ಲಾ ಅಡುಗೆ ದಾಸ್ತಾನು ಸಂಗ್ರಹ ಮಾಡಲಾಗಿದೆ
ಸುದ್ದಿ ಗೋಷ್ಠಿ ಮೂಲಕ ಜಾತ್ರಾ ಮಹೋತ್ಸದ ಸಂಪೂರ್ಣ ಮಾಹಿತಿ ನೀಡಿದರು.
ಗೋಷ್ಠಿಯಲ್ಲಿ ಮತ್ತೊಬ್ಬ ಕಾರ್ಯದರ್ಶಿ ಉದಯಕುಮಾರ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು