5:49 AM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ನಂಜನಗೂಡಿನಲ್ಲಿ ವಕೀಲರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ: ವಕೀಲರ ಹಿತರಕ್ಷಣೆ ಕಾಯ್ದೆಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ಅಕ್ರೋಶ

13/12/2023, 21:13

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ರಾಜ್ಯ ಸರ್ಕಾರ ಬೆಳಗಾವಿಯ ಅಧಿವೇಶನದಲ್ಲಿ ವಕೀಲರ ಹಿತದೃಷ್ಟಿ ಸಂರಕ್ಷಣಾ ಮಸೂದೆಯು ನಾಮಕಾವಸ್ಥೆ ಕಾಯಿದೆಯಾಗಿದೆ.
ಈ ಕಾಯ್ದೆಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ವಕೀಲರು ಆಕ್ರೋಶ ವ್ಯಕ್ತಪಡಿಸಿದ್ದರು.
ಇತ್ತೀಚಿನ ದಿನಗಳಲ್ಲಿ ವಕೀಲರ ಮೇಲೆ ಹಲ್ಲೆಗಳು ಹೆಚ್ಚಾಗುತ್ತಿದೆ. ಮೊನ್ನೆ ಕಲ್ಬುರ್ಗಿಯಲ್ಲಿ ನಡೆದ ವಕೀಲರ ಹತ್ಯೆಯು ಇದಕ್ಕೆ ಸ್ಪಷ್ಟ ಉದಾಹರಣೆಯಾಗಿದೆ.
ರಾಜ್ಯ ಸರ್ಕಾರ ಮಸೂದೆಯಲ್ಲಿ ಜಾರಿಗೆ ತಂದಿರುವುದು ಕಣ್ಣು ಒರೆಸುವ ತಂತ್ರವಾಗಿದೆ ಆರೋಪಿಯು ತಪ್ಪಿಸಿಕೊಳ್ಳುವ ಜಾಮೀನು ಸಹಿತ ಕಾನೂನಾಗಿದೆ. ವಕೀಲರ ಸಂರಕ್ಷಣೆ ಕಾಯಿದೆಯು ಬಲಿಷ್ಠ ಮಸೂದೆಯಾಗಿ ರಾಜ್ಯ ಸರ್ಕಾರವು ಕಾನೂನು ಜಾರಿಗೆ ತರಬೇಕು.ಇಲ್ಲದಿದ್ದರೆ ನಾವು ಬೆಳಗಾವಿ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳುತ್ತವೆ.


ಹಾಗೆಯೇ ನ್ಯಾಯಾಂಗದ ಕಾರ್ಯಕಲಾಪವನ್ನು ಅನಿರ್ದಿಷ್ಟದ ಅವಧಿವರೆಗೂ ಬಹಿಷ್ಕರಿಸಿ ಪ್ರತಿಭಟನೆ ಮಾಡುತ್ತೇವೆ.
ಬಲಿಷ್ಠವಾದ ಕಾಯಿದೆ ಜಾರಿಯಾಗದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ಮಾಡಲಾಗುತ್ತದೆ ಎಂದು ಪ್ರತಿಭಟನಾಕಾರರು ತಿಳಿಸಿದರು.
ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷರಾದ ಸುರೇಶ್ ಹಾಗೂ ಹಿರಿಯ ಮತ್ತು ಕಿರಿಯ ವಕೀಲರು ಅನಿರ್ದಿಷ್ಟ ಅವಧಿ ಪ್ರತಿಭಟನೆಯಲ್ಲಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು