6:48 AM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ನಂಜನಗೂಡಿನಲ್ಲಿ ನರಭಕ್ಷಕ ವ್ಯಾಘ್ರನ ಆರ್ಭಟಕ್ಕೆ ಮತ್ತೊಬ್ಬ ದನಗಾಹಿ ಮಹಿಳೆ ಬಲಿ: ಕಾಡಿಗೆ ಎಳೆದೊಯ್ದ ಹುಲಿ; ಅರಣ್ಯ ಇಲಾಖೆ ವಿರುದ್ಧ ಭಾರೀ ಆಕ್ರೋಶ

25/11/2023, 13:01

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಹಾಡಹಗಲೇ ನರಭಕ್ಷಕ ಹುಲಿಯೊಂದು ಕುರಿಗಾಹಿ ಮಹಿಳೆ ಮೇಲೆ ದಾಳಿ ನಡೆಸಿ ಕೊಂದು ಹಾಕಿದರ ಘಟನೆ ನಂಜನಗೂಡಿನಲ್ಲಿ ನಡೆದಿದೆ.
ರತ್ನಮ್ಮ(50) ಎಂಬುವರೇ ನರಭಕ್ಷಕ ಹುಲಿಗೆ ಬಲಿಯಾದ ಮೃತ ಮಹಿಳೆ.


ನಂಜನಗೂಡು ತಾಲೂಕಿನ ಬಳ್ಳೂರು ಹುಂಡಿ ಗ್ರಾಮದ ವೆಂಕಟಯ್ಯ ಎಂಬುವರ ಪತ್ನಿ ಈ ಮೃತ ಮಹಿಳೆ.
ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಹೆಡಿಯಾಲ ಸಮೀಪವಿರುವ ಮಹದೇವ ನಗರ ಗ್ರಾಮದ ನರ್ಸರಿ ಸಮೀಪದ ಬಳಿ ತಮ್ಮ ಜಮೀನಿನಲ್ಲಿ ಜಾನುವಾರು ಮೇಯಿಸುತ್ತಿದ್ದ ವೇಳೆ ಮಹಿಳೆಯ ಮೇಲೆ ವ್ಯಾಘ್ರ ದಾಳಿ ನಡೆಸಿದೆ. ಹುಲಿಯು
ರತ್ನಮ್ಮ ಅವರನ್ನು ಜಮೀನಿನಿಂದ ಕಾಡಿನೊಳಗೆ ಎಳೆದೊಯ್ದಿದೆ.
ನರಭಕ್ಷಕ ಹುಲಿಗೆ ಬಲಿಯಾದ ರತ್ನಮ್ಮಳ ಮೃತದೇಹವನ್ನು ಕಾಡಿನಿಂದ ಹುಡುಕಿ ಗ್ರಾಮಸ್ಥರು ತಂದಿದ್ದಾರೆ.
ಸುಮಾರು ಒಂದು ತಿಂಗಳ ಹಿಂದೆ ಇದೇ ಸ್ಥಳದಲ್ಲಿ ವೀರಭದ್ರ ಭೋವಿ ಎಂಬ ದನ ಗಾಹಿ ಮೇಲೆ ನರಭಕ್ಷಕ ಹುಲಿ ದಾಳಿ ಮಾಡಿತ್ತು. ನರಭಕ್ಷಕ ಹುಲಿಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಮುಂದಾಗದ ಕಾರಣ ಈಗ ಮತ್ತೆ ದನಗಾಯಿ ಮಹಿಮೆ ಬಲಿಯಾಗಿದ್ದಾರೆ. ಹೆಡಿಯಾಲ ಬಳ್ಳೂರು ಹುಂಡಿ ಮಹದೇವ ನಗರ ಗ್ರಾಮದ ಸುತ್ತಮುತ್ತಲ ವಾಸಿಗಳು ಈಗ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ.
ಹೆಡಿಯಾಲ ಅರಣ್ಯ ಇಲಾಖೆಯ ಆರ್‌ಎಫ್‌ಒ ನಾರಾಯಣ ಎಸಿಎಫ್ ಪರಮೇಶ್ ನೇತೃತ್ವದಲ್ಲಿ ಮೃತ ಮಹಿಳೆ ರತ್ನಮಳ ಮೃತ ದೇಹವನ್ನು ಹುಡುಕಿ ಗ್ರಾಮಕ್ಕೆ ತರಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು