10:00 PM Sunday8 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ನಂಜನಗೂಡು: ಭಕ್ತ ಸಾಗರದಲ್ಲಿ ಮಿಂದೆದ್ದ ಶ್ರೀ ನಂಜುಂಡನ ತೆಪ್ಪೋತ್ಸವ

25/03/2024, 15:16

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಶುಕ್ರವಾರ ನಡೆದ ಐತಿಹಾಸಿಕ ಗೌತಮ ಪಂಚಮಹಾ ರಥೋತ್ಸವದ ದೊಡ್ಡ ಜಾತ್ರಾ ಮಹೋತ್ಸವದ ಅಂಗವಾಗಿ ಭಾನುವಾರ ರಾತ್ರಿ ಕಪಿಲಾ ನದಿಯಲ್ಲಿ ಶ್ರೀ ನಂಜುಂಡೇಶ್ವರನ ತೆಪ್ಪೋತ್ಸವವು ಸಡಗರ ಸಂಭ್ರಮ ಹಾಗೂ ಶ್ರದ್ಧಾಭಕ್ತಿಯಿಂದ ನೆರವೇರಿತು.


ವಜ್ರಾಭರಣ ಹಾಗೂ ಬಣ್ಣ ಬಣ್ಣದ ಹೂಗಳಿಂದ ವಿಶೇಷವಾಗಿ ಅಲಂಕೃತಗೊಂಡ ಶ್ರೀ ಪಾರ್ವತಿ ಸಮೇತ ಶ್ರೀ ಶ್ರೀಕಂಠೇಶ್ವರ ಸ್ವಾಮಿಯ ಉತ್ಸವ ಮೂರ್ತಿಯನ್ನು ದೇವಾಲಯದಿಂದ ತಂದು ಕಪಿಲಾ ನದಿಯ ಸ್ಥಾನಘಟ್ಟದ ಬಳಿ ಇರುವ ಮಂಟಪದಲ್ಲಿರಿಸಿ ಪೂಜೆ ಸಲ್ಲಿಸಲಾಯಿತು. ಬಳಿಕ ಅಲ್ಲಿಂದ ಮಂಗಳ ವಾದ್ಯಗಳೊಂದಿಗೆ ಬಣ್ಣ ಬಣ್ಣದ ಹೂವು ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಲಾದ ತೇಲುವ ದೇವಾಲಯದ ಮಾದರಿಯಲ್ಲಿರುವ ಯಾಂತ್ರಿಕ ದೋಣಿಯಲ್ಲಿ ಕೂರಿಸಿ ಅದ್ದೂರಿ ತೆಪ್ಪೋತ್ಸವ ನಡೆಸಲಾಯಿತು.
ಸಾವಿರಾರು ಭಕ್ತರ ಹರ್ಷೋದ್ಗಾರದೊಂದಿಗೆ ಶ್ರೀ ನಂಜುಂಡೇಶ್ವರನ ತೆಪ್ಪೋತ್ಸವವು ಕಪಿಲಾ ನದಿಯಲ್ಲಿ ಪೂರ್ವ ಪಶ್ಚಿಮಾಭಿಮುಖವಾಗಿ ಮೂರು ಬಾರಿ ಪ್ರದಕ್ಷಿಣೆ ಹಾಕಿತು. ಈ ಮನಮೋಹಕ ದೃಶ್ಯವನ್ನು ಕಣ್ತುಂಬಿಕೊಳ್ಳುವ ಮೂಲಕ ಭಕ್ತರು ತಮ್ಮ ಭಕ್ತಿ ಭಾವ ಮೆರೆದರು.
ಇದೇ ಸಂದರ್ಭ ನದಿಯ ಮತ್ತೊಂದು ದಡದಲ್ಲೂ ಕೂಡ ಹೆಜ್ಜಿಗೆ ಹಾಗೂ ಸುತ್ತಮುತ್ತಲ ಗ್ರಾಮದ ಸಾವಿರಾರು ಭಕ್ತರು ಪಾಲ್ಗೊಂಡು ವಿವಿಧ ಬಗೆಯ ಬಾಣ ಬಿರುಸು ಪಟಾಕಿಗಳನ್ನು ಹೊಡೆಯುವ ಮೂಲಕ ಸಂಭ್ರಮಿಸಿದರು. ನಂತರ ತೆಪ್ಪೋತ್ಸವದಿಂದ ಹೊರ ತಂದ ಉತ್ಸವ ಮೂರ್ತಿಗಳನ್ನು ಪಟ್ಟಣದ ರಥ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು ಮೆರವಣಿಗೆ ಉದ್ದಕ್ಕೂ ಭಕ್ತರು ಪೂಜಾ ಸಾಮಗ್ರಿಗಳೊಂದಿಗೆ ಪೂಜೆ ಸಲ್ಲಿಸುವ ಮೂಲಕ ತಮ್ಮ ಭಕ್ತಿ ನಮನ ಸಲ್ಲಿಸಿದರು.
ಕಪಿಲಾ ನದಿಯು ಸೇರಿದಂತೆ ದೇವಾಲಯದ ಸುತ್ತಮುತ್ತ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಶ್ರೀ ನಂಜುಂಡೇಶ್ವರನ ತೆಪ್ಪೋತ್ಸವವನ್ನು ಕಣ್ತುಂಬಿಕೊಳ್ಳಲು ನಂಜನಗೂಡು ಸೇರಿದಂತೆ ವಿವಿಧೆಡೆಯಿಂದ ಭಕ್ತರ ಮಹಾಪೂರವೇ ಹರಿದು ಬಂದಿತ್ತು. ಅಲ್ಲಲ್ಲಿ ವಿವಿಧ ಸಂಘ-ಸಂಸ್ಥೆಗಳು ಬಂದ ಭಕ್ತರಿಗೆ ಪ್ರಸಾದದ ವ್ಯವಸ್ಥೆಯನ್ನು ಕಲ್ಪಿಸಿದ್ದರು.
ದೇವಾಲಯದ ಪ್ರಧಾನ ಅರ್ಚಕರಾದ ನಾಗಚಂದ್ರ ದೀಕ್ಷಿತ್ ಮಾತನಾಡಿ ತೆಪ್ಪೋತ್ಸವದ ಬಗ್ಗೆ ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು