4:58 AM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ನಂಜನಗೂಡು: ಭಕ್ತ ಸಾಗರದಲ್ಲಿ ಮಿಂದೆದ್ದ ಶ್ರೀ ನಂಜುಂಡನ ತೆಪ್ಪೋತ್ಸವ

25/03/2024, 15:16

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಶುಕ್ರವಾರ ನಡೆದ ಐತಿಹಾಸಿಕ ಗೌತಮ ಪಂಚಮಹಾ ರಥೋತ್ಸವದ ದೊಡ್ಡ ಜಾತ್ರಾ ಮಹೋತ್ಸವದ ಅಂಗವಾಗಿ ಭಾನುವಾರ ರಾತ್ರಿ ಕಪಿಲಾ ನದಿಯಲ್ಲಿ ಶ್ರೀ ನಂಜುಂಡೇಶ್ವರನ ತೆಪ್ಪೋತ್ಸವವು ಸಡಗರ ಸಂಭ್ರಮ ಹಾಗೂ ಶ್ರದ್ಧಾಭಕ್ತಿಯಿಂದ ನೆರವೇರಿತು.


ವಜ್ರಾಭರಣ ಹಾಗೂ ಬಣ್ಣ ಬಣ್ಣದ ಹೂಗಳಿಂದ ವಿಶೇಷವಾಗಿ ಅಲಂಕೃತಗೊಂಡ ಶ್ರೀ ಪಾರ್ವತಿ ಸಮೇತ ಶ್ರೀ ಶ್ರೀಕಂಠೇಶ್ವರ ಸ್ವಾಮಿಯ ಉತ್ಸವ ಮೂರ್ತಿಯನ್ನು ದೇವಾಲಯದಿಂದ ತಂದು ಕಪಿಲಾ ನದಿಯ ಸ್ಥಾನಘಟ್ಟದ ಬಳಿ ಇರುವ ಮಂಟಪದಲ್ಲಿರಿಸಿ ಪೂಜೆ ಸಲ್ಲಿಸಲಾಯಿತು. ಬಳಿಕ ಅಲ್ಲಿಂದ ಮಂಗಳ ವಾದ್ಯಗಳೊಂದಿಗೆ ಬಣ್ಣ ಬಣ್ಣದ ಹೂವು ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಲಾದ ತೇಲುವ ದೇವಾಲಯದ ಮಾದರಿಯಲ್ಲಿರುವ ಯಾಂತ್ರಿಕ ದೋಣಿಯಲ್ಲಿ ಕೂರಿಸಿ ಅದ್ದೂರಿ ತೆಪ್ಪೋತ್ಸವ ನಡೆಸಲಾಯಿತು.
ಸಾವಿರಾರು ಭಕ್ತರ ಹರ್ಷೋದ್ಗಾರದೊಂದಿಗೆ ಶ್ರೀ ನಂಜುಂಡೇಶ್ವರನ ತೆಪ್ಪೋತ್ಸವವು ಕಪಿಲಾ ನದಿಯಲ್ಲಿ ಪೂರ್ವ ಪಶ್ಚಿಮಾಭಿಮುಖವಾಗಿ ಮೂರು ಬಾರಿ ಪ್ರದಕ್ಷಿಣೆ ಹಾಕಿತು. ಈ ಮನಮೋಹಕ ದೃಶ್ಯವನ್ನು ಕಣ್ತುಂಬಿಕೊಳ್ಳುವ ಮೂಲಕ ಭಕ್ತರು ತಮ್ಮ ಭಕ್ತಿ ಭಾವ ಮೆರೆದರು.
ಇದೇ ಸಂದರ್ಭ ನದಿಯ ಮತ್ತೊಂದು ದಡದಲ್ಲೂ ಕೂಡ ಹೆಜ್ಜಿಗೆ ಹಾಗೂ ಸುತ್ತಮುತ್ತಲ ಗ್ರಾಮದ ಸಾವಿರಾರು ಭಕ್ತರು ಪಾಲ್ಗೊಂಡು ವಿವಿಧ ಬಗೆಯ ಬಾಣ ಬಿರುಸು ಪಟಾಕಿಗಳನ್ನು ಹೊಡೆಯುವ ಮೂಲಕ ಸಂಭ್ರಮಿಸಿದರು. ನಂತರ ತೆಪ್ಪೋತ್ಸವದಿಂದ ಹೊರ ತಂದ ಉತ್ಸವ ಮೂರ್ತಿಗಳನ್ನು ಪಟ್ಟಣದ ರಥ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು ಮೆರವಣಿಗೆ ಉದ್ದಕ್ಕೂ ಭಕ್ತರು ಪೂಜಾ ಸಾಮಗ್ರಿಗಳೊಂದಿಗೆ ಪೂಜೆ ಸಲ್ಲಿಸುವ ಮೂಲಕ ತಮ್ಮ ಭಕ್ತಿ ನಮನ ಸಲ್ಲಿಸಿದರು.
ಕಪಿಲಾ ನದಿಯು ಸೇರಿದಂತೆ ದೇವಾಲಯದ ಸುತ್ತಮುತ್ತ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಶ್ರೀ ನಂಜುಂಡೇಶ್ವರನ ತೆಪ್ಪೋತ್ಸವವನ್ನು ಕಣ್ತುಂಬಿಕೊಳ್ಳಲು ನಂಜನಗೂಡು ಸೇರಿದಂತೆ ವಿವಿಧೆಡೆಯಿಂದ ಭಕ್ತರ ಮಹಾಪೂರವೇ ಹರಿದು ಬಂದಿತ್ತು. ಅಲ್ಲಲ್ಲಿ ವಿವಿಧ ಸಂಘ-ಸಂಸ್ಥೆಗಳು ಬಂದ ಭಕ್ತರಿಗೆ ಪ್ರಸಾದದ ವ್ಯವಸ್ಥೆಯನ್ನು ಕಲ್ಪಿಸಿದ್ದರು.
ದೇವಾಲಯದ ಪ್ರಧಾನ ಅರ್ಚಕರಾದ ನಾಗಚಂದ್ರ ದೀಕ್ಷಿತ್ ಮಾತನಾಡಿ ತೆಪ್ಪೋತ್ಸವದ ಬಗ್ಗೆ ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು