3:36 AM Saturday20 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ

24/04/2024, 12:17

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಂಜನಗೂಡು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊರಳವಾಡಿ, ದೇವನೂರು, ಗಟ್ಟವಾಡಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಮಾಜಿ ಶಾಸಕ ಹರ್ಷವರ್ಧನ್ ಅವರು ಬಿಜೆಪಿ ಅಭ್ಯರ್ಥಿ ಬಾಲರಾಜು ಪರ ಮತಯಾಚನೆ ಮಾಡಿದರು.


ಗ್ರಾಮ, ಗ್ರಾಮಗಳಿಗೆ ತೆರಳಿ ಮತದಾರರನ್ನು ಭೇಟಿ ಮಾಡಿ ಕರಪತ್ರ ನೀಡುವ ಮೂಲಕ ಅಭ್ಯರ್ಥಿ ಬಾಲರಾಜ್ ಅವರಿಗೆ ಮತ ನೀಡುವಂತೆ ಮನವಿ ಮಾಡಿಕೊಂಡರು.
ಬಳಿಕ ಅವರು ಮಾತನಾಡಿ ಕಳೆದ ಹತ್ತು ತಿಂಗಳ ಹಿಂದೆ ಮಾಡಿದ ತಪ್ಪನ್ನು ಈಗ ಮಾಡಬೇಡಿ ಕ್ಷೇತ್ರಕ್ಕೆ ನಾವು ಮಾಡಿದ ಅಭಿವೃದ್ಧಿಯನ್ನು ಮರೆತು ಬಿಜೆಪಿಯನ್ನು ಸೋಲಿಸಿ ಈಗ 10 ತಿಂಗಳಿಂದ ಯಾವುದೇ ಅಭಿವೃದ್ಧಿ ಕಾಣದೆ ತಾವೇ ವ್ಯಥೆ ಪಡುವಂತಾಗಿದೆ. ಈ ಚುನಾವಣೆಯಲ್ಲಿ ಅಂತಹ ತಪ್ಪು ಮಾಡದೆ ಬಿಜೆಪಿ ಅಭ್ಯರ್ಥಿ ಬಾಲರಾಜ್ ಅವರನ್ನು ಗೆಲ್ಲಿಸುವ ಮೂಲಕ ಬಿಜೆಪಿ ಹಾಗೂ ಮೋದಿಯವರ ಕೈ ಬಲಪಡಿಸಬೇಕು. ದೇಶ ಮತ್ತು ರಾಜ್ಯ ಅಭಿವೃದ್ಧಿ ಆಗ ಬೇಕಾದರೆ ಮೋದಿಯವರನ್ನು ಮತ್ತೊಮ್ಮೆ ಪ್ರಧಾನ ಮಂತ್ರಿಯನ್ನಾಗಿ ಮಾಡಬೇಕು ಎಂದು ಕಾರ್ಯಕರ್ತ ಮುಖಂಡರಲ್ಲಿ ಮನವಿ ಮಾಡಿಕೊಂಡರು.
ನಿಕಟಪೂರ್ವ ಮಂಡಲ ಅಧ್ಯಕ್ಷ ವಕೀಲ ಮಹೇಶ್ ಮಾತನಾಡಿ ಮಾಜಿ ಶಾಸಕರು ನಮ್ಮ ಕ್ಷೇತ್ರಕ್ಕೆ ಹಾಗೂ ನಮ್ಮ ಗ್ರಾಮಗಳಿಗೆ ಕೋಟ್ಯಾಂತರ ರೂಪಾಯಿ ಅನುದಾನ ತಂದು ಅಭಿವೃದ್ಧಿಪಡಿಸಿದ್ದರು. ಆದರೆ ಅದನ್ನು ಸ್ಮರಿಸದೆ ಯಾವುದೋ ಕಾರಣಕ್ಕೆ ಅವರನ್ನು ಸೋಲಿಸಿದ್ದು ನಿಜಕ್ಕೂ ವಿಷಾದನೀಯ. ಆದರೆ ಈಗ ಆ ತಪ್ಪು ಮಾಡದೆ ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಾಲರಾಜ್ ಅವರಿಗೆ ಮತ ನೀಡುವಂತೆ ಕೇಳಿಕೊಂಡರು.
ಪ್ರಚಾರಕ್ಕೆ ಬಂದ ಮಾಜಿ ಶಾಸಕರು ಹಾಗೂ ಮುಖಂಡರನ್ನು ಗ್ರಾಮಸ್ಥರು ಶಾಲು ಹೊದಿಸಿ ಮಾಲಾರ್ಪಣೆ ಮಾಡಿ ಗೌರವಿಸಿದರು
ಮಂಡಲ ಅಧ್ಯಕ್ಷ ಕೆಂಡಗಣ್ಣಪ್ಪ, ಮಾಜಿ ಅಧ್ಯಕ್ಷ ಹೊರಳವಾಡಿ ಮಹೇಶ್, ಬದನವಾಳು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಹೇಶ್, ಶಾಮ್ ಪಟೇಲ್, ರಂಗನಾಥ್, ಹೆಮ್ಮರಗಾಲ ಸೋಮಣ್ಣ, ಶಿವಣ್ಣ, ಮುಳ್ಳೂರು ಶೇಖರ್,ಮಸಗೆರಾಜು, ಮಹದೇವಸ್ವಾಮಿ ಸೇರಿದಂತೆ ಹಲವಾರು ಮುಖಂಡರುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು