7:12 AM Saturday16 - August 2025
ಬ್ರೇಕಿಂಗ್ ನ್ಯೂಸ್
‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.… ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ: ವಿಧಾನ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಇತ್ತೀಚಿನ ಸುದ್ದಿ

ನಂಜನಗೂಡು: ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ರವರ 67ನೇ ಪರಿನಿಬ್ಬಣ ಕಾರ್ಯಕ್ರಮ; ಪ್ರತಿಮೆಗೆ ಮಾಲಾರ್ಪಣೆ

06/12/2023, 23:43

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡಿನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ರವರ 67ನೇ ಪರಿನಿಬ್ಬಣ ಕಾರ್ಯಕ್ರಮ ನಡೆಯಿತು.
ನಂಜನಗೂಡು ಪಟ್ಟಣದ ಬೈಪಾಸ್ ರಸ್ತೆಯಲ್ಲಿರುವ ಅಂಬೇಡ್ಕರ್ ಪ್ರತಿಮೆ ಬಳಿ ಕಾರ್ಯಕ್ರಮ ಆಯೋಜನೆ ಮಾಡಲಾಯಿತು.
ತಾಲೂಕು ಆಡಳಿತದ ವತಿಯಿಂದ ನಡೆದ 67ನೆಯ ಪರಿನಿಬ್ಬಣ ಕಾರ್ಯಕ್ರಮದಲ್ಲಿ
ನಂಜನಗೂಡಿನ ತಹಶೀಲ್ದಾರ್ ಶಿವಕುಮಾರ್ ಕಾಸ್ನೂರ್ ಅಧ್ಯಕ್ಷತೆ ವಹಿಸಿದ್ದರು. ವರುಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಆಶ್ರಯ ಸಮಿತಿಯ ಅಧ್ಯಕ್ಷ ಡಾ. ಯತೀಂದ್ರ ಸಿದ್ದರಾಮಯ್ಯ, ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ದಸಂಸ ಸಂಘಟನೆಯ ಹಲವಾರು ಮುಖಂಡರು ಸೇರಿದಂತೆ ಪುರಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಲಾರ್ಪಣೆ ಹಾಗೂ ಪುಷ್ಪಾರ್ಚನೆ ಮಾಡಿ ಮಾತನಾಡಿದ ಡಾ. ಯತೀಂದ್ರ ಸಿದ್ದರಾಮಯ್ಯ, ದೇಶಾದ್ಯಂತ ಇಂದು ಅಂಬೇಡ್ಕರ್ ಅವರ ಪರಿ ನಿಬ್ಬಣ ಕಾರ್ಯಕ್ರಮಗಳು ನಡೆಯುತ್ತಿವೆ. ಅಂಬೇಡ್ಕರ್ ಅವರ ತತ್ವ ಆದರ್ಶಗಳನ್ನು ಪಾಲನೆ ಮಾಡಿ ಮುಂದಿನ ಪೀಳಿಗೆಗೆ ಮಾದರಿ ಆಗುವಂತೆ ನಡೆದುಕೊಳ್ಳಬೇಕು. ದೇಶದಲ್ಲಿ ಸಂವಿಧಾನ ಬದ್ಧವಾಗಿ ಪ್ರತಿಯೊಂದು ಕೆಲಸ ಕಾರ್ಯಗಳು ನಡೆಯುತ್ತಿವೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹಾದಿಯಲ್ಲಿ ಸಾಗಿದರೆ ದೇಶ ಪ್ರಬುದ್ಧತೆಯಲ್ಲಿ ಉತ್ತಮ ಸ್ಥಾನಮಾನದಲ್ಲಿರುತ್ತದೆ ಎಂದರು.
ಈ ದೇಶವು ಕೋಮುವಾದಿ ಶಕ್ತಿಯಿಂದ ನಲುಗಿ ಹೋಗುತ್ತಿದೆ ಇನ್ನು ಮುಂದಾದರು ಶಾಂತಿ ನೆಲೆಸುವಂತಾಗಲಿ ಎಂದು ದಸಂಸ ಮುಖಂಡ ಶಂಕರಪುರ ಸುರೇಷ್ ಹಾಗು ಮಲ್ಲಳ್ಳಿ ನಾರಾಯಣ್ ಮಾತನಾಡಿದರು.


ಇದೇ ಸಂದರ್ಭ ಡಾ ಬಿ. ಆರ್. ಅಂಬೇಡ್ಕರ್ ಅವರಿಗೆ ಜಯಕಾರದ ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯ ವಾಲ್ಮೀಕಿ ನಿಗಮದ ಮಾಜಿ ಅಧ್ಯಕ್ಷ ಎಸ್. ಸಿ. ಬಸವರಾಜು , ಮುಖಂಡರಾದ ಮಲ್ಲಹಳ್ಳಿ ನಾರಾಯಣ್, ಬೊಕ್ಕಹಳ್ಳಿಲಿಂಗಯ್ಯ,ತಾಲೂಕು ದಂಡಾಧಿಕಾರಿ ಶಿವಕುಮಾರ್ ಕಾಸ್ನೋರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜೆರಾಲ್ಡ್ ರಾಜೇಶ್ ಹಾಗೂ ತಾಲೂಕು ಮಟ್ಟದ ವಿವಿದ ಇಲಾಖೆಯ ಅಧಿಕಾರಿಗಳು ದಸಂಸ ಸಂಘಟಕರು ,ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು