3:00 AM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ನಂಜನಗೂಡು: ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ರವರ 67ನೇ ಪರಿನಿಬ್ಬಣ ಕಾರ್ಯಕ್ರಮ; ಪ್ರತಿಮೆಗೆ ಮಾಲಾರ್ಪಣೆ

06/12/2023, 23:43

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡಿನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ರವರ 67ನೇ ಪರಿನಿಬ್ಬಣ ಕಾರ್ಯಕ್ರಮ ನಡೆಯಿತು.
ನಂಜನಗೂಡು ಪಟ್ಟಣದ ಬೈಪಾಸ್ ರಸ್ತೆಯಲ್ಲಿರುವ ಅಂಬೇಡ್ಕರ್ ಪ್ರತಿಮೆ ಬಳಿ ಕಾರ್ಯಕ್ರಮ ಆಯೋಜನೆ ಮಾಡಲಾಯಿತು.
ತಾಲೂಕು ಆಡಳಿತದ ವತಿಯಿಂದ ನಡೆದ 67ನೆಯ ಪರಿನಿಬ್ಬಣ ಕಾರ್ಯಕ್ರಮದಲ್ಲಿ
ನಂಜನಗೂಡಿನ ತಹಶೀಲ್ದಾರ್ ಶಿವಕುಮಾರ್ ಕಾಸ್ನೂರ್ ಅಧ್ಯಕ್ಷತೆ ವಹಿಸಿದ್ದರು. ವರುಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಆಶ್ರಯ ಸಮಿತಿಯ ಅಧ್ಯಕ್ಷ ಡಾ. ಯತೀಂದ್ರ ಸಿದ್ದರಾಮಯ್ಯ, ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ದಸಂಸ ಸಂಘಟನೆಯ ಹಲವಾರು ಮುಖಂಡರು ಸೇರಿದಂತೆ ಪುರಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಲಾರ್ಪಣೆ ಹಾಗೂ ಪುಷ್ಪಾರ್ಚನೆ ಮಾಡಿ ಮಾತನಾಡಿದ ಡಾ. ಯತೀಂದ್ರ ಸಿದ್ದರಾಮಯ್ಯ, ದೇಶಾದ್ಯಂತ ಇಂದು ಅಂಬೇಡ್ಕರ್ ಅವರ ಪರಿ ನಿಬ್ಬಣ ಕಾರ್ಯಕ್ರಮಗಳು ನಡೆಯುತ್ತಿವೆ. ಅಂಬೇಡ್ಕರ್ ಅವರ ತತ್ವ ಆದರ್ಶಗಳನ್ನು ಪಾಲನೆ ಮಾಡಿ ಮುಂದಿನ ಪೀಳಿಗೆಗೆ ಮಾದರಿ ಆಗುವಂತೆ ನಡೆದುಕೊಳ್ಳಬೇಕು. ದೇಶದಲ್ಲಿ ಸಂವಿಧಾನ ಬದ್ಧವಾಗಿ ಪ್ರತಿಯೊಂದು ಕೆಲಸ ಕಾರ್ಯಗಳು ನಡೆಯುತ್ತಿವೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹಾದಿಯಲ್ಲಿ ಸಾಗಿದರೆ ದೇಶ ಪ್ರಬುದ್ಧತೆಯಲ್ಲಿ ಉತ್ತಮ ಸ್ಥಾನಮಾನದಲ್ಲಿರುತ್ತದೆ ಎಂದರು.
ಈ ದೇಶವು ಕೋಮುವಾದಿ ಶಕ್ತಿಯಿಂದ ನಲುಗಿ ಹೋಗುತ್ತಿದೆ ಇನ್ನು ಮುಂದಾದರು ಶಾಂತಿ ನೆಲೆಸುವಂತಾಗಲಿ ಎಂದು ದಸಂಸ ಮುಖಂಡ ಶಂಕರಪುರ ಸುರೇಷ್ ಹಾಗು ಮಲ್ಲಳ್ಳಿ ನಾರಾಯಣ್ ಮಾತನಾಡಿದರು.


ಇದೇ ಸಂದರ್ಭ ಡಾ ಬಿ. ಆರ್. ಅಂಬೇಡ್ಕರ್ ಅವರಿಗೆ ಜಯಕಾರದ ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯ ವಾಲ್ಮೀಕಿ ನಿಗಮದ ಮಾಜಿ ಅಧ್ಯಕ್ಷ ಎಸ್. ಸಿ. ಬಸವರಾಜು , ಮುಖಂಡರಾದ ಮಲ್ಲಹಳ್ಳಿ ನಾರಾಯಣ್, ಬೊಕ್ಕಹಳ್ಳಿಲಿಂಗಯ್ಯ,ತಾಲೂಕು ದಂಡಾಧಿಕಾರಿ ಶಿವಕುಮಾರ್ ಕಾಸ್ನೋರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜೆರಾಲ್ಡ್ ರಾಜೇಶ್ ಹಾಗೂ ತಾಲೂಕು ಮಟ್ಟದ ವಿವಿದ ಇಲಾಖೆಯ ಅಧಿಕಾರಿಗಳು ದಸಂಸ ಸಂಘಟಕರು ,ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು