10:03 AM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ನಂಜನಗೂಡು: 23 ಡೆಂಗ್ಯೂ, 9 ಚಿಕನ್ ಗುನ್ಯಾ ಪ್ರಕರಣ ಪತ್ತೆ: ಎಚ್ಚೆತ್ತ ತಾಲೂಕು ಆಡಳಿತ; ಶಾಸಕ ದರ್ಶನ್ ಧೃವನಾರಾಯಣ್ ನೇತೃತ್ವದಲ್ಲಿ ಸಭೆ

07/07/2024, 17:59

ಮೋಹನ್ ನಂಜನಗೂಡು ಮೈಸೂರು
info.reporterkarnataka@gmail.com
ನಂಜನಗೂಡು ತಾಲೂಕಿನಲ್ಲಿ ಡೆಂಗ್ಯೂ ಅಬ್ಬರ ಹೆಚ್ಚುತ್ತಿದೆ. ತಾಲೂಕಿನಾದ್ಯಂತ ಈಗಾಗಲೇ 23 ಡೆಂಗ್ಯೂ ಹಾಗೂ 9 ಚಿಕನ್ ಗುನ್ಯಾ ಪ್ರಕರಣಗಳು ಬೆಳಕಿಗೆ ಬಂದಿದೆ. ಎಚ್ಚೆತ್ತ ತಾಲೂಕು ಆಡಳಿತ ಮುನ್ನೆಚ್ಚರಿಕೆ ಕ್ರಮಕ್ಕೆ ಮುಂದಾಗಿದೆ. ಪಟ್ಟಣದ ತಾಲೂಕು ಆರೋಗ್ಯ ವೈದ್ಯಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಇಂದು ಶಾಸಕ ದರ್ಶನ್ ಧೃವನಾರಾಯಣ್ ಹಾಗೂ ತಹಸೀಲ್ದಾರ್ ಶಿವಕುಮಾರ್ ಕಾಸ್ನೂರ್ , ಇ ಓ ಜೆರಾಲ್ಡ್ ರಾಜೇಶ್ ತಾಲೂಕು ಆರೋಗ್ಯ ವೈದ್ಯಾಧಿಕಾರಿ ಡಾ. ಈಶ್ವರ್ ನೇತೃತ್ವದಲ್ಲಿ ಸಭೆ ನಡೆದಿದೆ.


ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಜಾಗೃತಿಯಿಂದ ಕೆಲಸ ಮಾಡಬೇಕು, ಜನರಲ್ಲಿ ಜಾಗೃತಿಯನ್ನು ಮೂಡಿಸಬೇಕು, ಸೊಳ್ಳೆ ಪ್ರಮಾಣ ಹೆಚ್ಚಾಗದಂತೆ ನಿಗವಹಿಸಬೇಕು.
ಮುಖ್ಯಮಂತ್ರಿಗಳ ತವರು ಕ್ಷೇತ್ರವಾಗಿರುವ ಕಾರಣ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನ ಹೆಚ್ಚಿಸಿ ಕಟ್ಟುನಿಟ್ಟಾಗಿ ಕಾರ್ಯ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಯಾವ ಗ್ರಾಮ ಪಂಚಾಯಿತಿಯಲ್ಲಿ ಮತ್ತು ನಗರಸಭೆ ಯಾವ ವಾರ್ಡ್ ಗಳಲ್ಲಿ ಅತಿ ಹೆಚ್ಚು ಪ್ರಕರಣ ಕಂಡುಬರುತ್ತದೆ. ಅದಕ್ಕೆ ಅಧಿಕಾರಿಗಳೇ ಹೊಣೆಗಾರರಾಗುತ್ತೀರಿ. ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗ ಬೇಕಾಗುತ್ತದೆ ಎಂದು ಶಾಸಕ ದರ್ಶನ್ ಎಚ್ಚರಿಕೆ ನೀಡಿದರು.
ಇದೇ ವೇಳೆ ಜಾಗೃತಿ ಮೂಡಿಸುವ ಬಿತ್ತಿ ಪತ್ರಗಳನ್ನು
ಬಿಡುಗಡೆಗೊಳಿಸಿದರು.
ಸಭೆಯಲ್ಲಿ ನಗರಸಭೆಯ ಆಯುಕ್ತ ನಂಜುಂಡಸ್ವಾಮಿ ಸಿ ಡಿಪಿಓ ಭವ್ಯಶ್ರೀ, ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯಿತಿ ಪಿಡಿಒಗಳು ಸಭೆಯಲ್ಲಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು