5:17 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ನಂಜನಗೂಡು: 23 ಡೆಂಗ್ಯೂ, 9 ಚಿಕನ್ ಗುನ್ಯಾ ಪ್ರಕರಣ ಪತ್ತೆ: ಎಚ್ಚೆತ್ತ ತಾಲೂಕು ಆಡಳಿತ; ಶಾಸಕ ದರ್ಶನ್ ಧೃವನಾರಾಯಣ್ ನೇತೃತ್ವದಲ್ಲಿ ಸಭೆ

07/07/2024, 17:59

ಮೋಹನ್ ನಂಜನಗೂಡು ಮೈಸೂರು
info.reporterkarnataka@gmail.com
ನಂಜನಗೂಡು ತಾಲೂಕಿನಲ್ಲಿ ಡೆಂಗ್ಯೂ ಅಬ್ಬರ ಹೆಚ್ಚುತ್ತಿದೆ. ತಾಲೂಕಿನಾದ್ಯಂತ ಈಗಾಗಲೇ 23 ಡೆಂಗ್ಯೂ ಹಾಗೂ 9 ಚಿಕನ್ ಗುನ್ಯಾ ಪ್ರಕರಣಗಳು ಬೆಳಕಿಗೆ ಬಂದಿದೆ. ಎಚ್ಚೆತ್ತ ತಾಲೂಕು ಆಡಳಿತ ಮುನ್ನೆಚ್ಚರಿಕೆ ಕ್ರಮಕ್ಕೆ ಮುಂದಾಗಿದೆ. ಪಟ್ಟಣದ ತಾಲೂಕು ಆರೋಗ್ಯ ವೈದ್ಯಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಇಂದು ಶಾಸಕ ದರ್ಶನ್ ಧೃವನಾರಾಯಣ್ ಹಾಗೂ ತಹಸೀಲ್ದಾರ್ ಶಿವಕುಮಾರ್ ಕಾಸ್ನೂರ್ , ಇ ಓ ಜೆರಾಲ್ಡ್ ರಾಜೇಶ್ ತಾಲೂಕು ಆರೋಗ್ಯ ವೈದ್ಯಾಧಿಕಾರಿ ಡಾ. ಈಶ್ವರ್ ನೇತೃತ್ವದಲ್ಲಿ ಸಭೆ ನಡೆದಿದೆ.


ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಜಾಗೃತಿಯಿಂದ ಕೆಲಸ ಮಾಡಬೇಕು, ಜನರಲ್ಲಿ ಜಾಗೃತಿಯನ್ನು ಮೂಡಿಸಬೇಕು, ಸೊಳ್ಳೆ ಪ್ರಮಾಣ ಹೆಚ್ಚಾಗದಂತೆ ನಿಗವಹಿಸಬೇಕು.
ಮುಖ್ಯಮಂತ್ರಿಗಳ ತವರು ಕ್ಷೇತ್ರವಾಗಿರುವ ಕಾರಣ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನ ಹೆಚ್ಚಿಸಿ ಕಟ್ಟುನಿಟ್ಟಾಗಿ ಕಾರ್ಯ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಯಾವ ಗ್ರಾಮ ಪಂಚಾಯಿತಿಯಲ್ಲಿ ಮತ್ತು ನಗರಸಭೆ ಯಾವ ವಾರ್ಡ್ ಗಳಲ್ಲಿ ಅತಿ ಹೆಚ್ಚು ಪ್ರಕರಣ ಕಂಡುಬರುತ್ತದೆ. ಅದಕ್ಕೆ ಅಧಿಕಾರಿಗಳೇ ಹೊಣೆಗಾರರಾಗುತ್ತೀರಿ. ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗ ಬೇಕಾಗುತ್ತದೆ ಎಂದು ಶಾಸಕ ದರ್ಶನ್ ಎಚ್ಚರಿಕೆ ನೀಡಿದರು.
ಇದೇ ವೇಳೆ ಜಾಗೃತಿ ಮೂಡಿಸುವ ಬಿತ್ತಿ ಪತ್ರಗಳನ್ನು
ಬಿಡುಗಡೆಗೊಳಿಸಿದರು.
ಸಭೆಯಲ್ಲಿ ನಗರಸಭೆಯ ಆಯುಕ್ತ ನಂಜುಂಡಸ್ವಾಮಿ ಸಿ ಡಿಪಿಓ ಭವ್ಯಶ್ರೀ, ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯಿತಿ ಪಿಡಿಒಗಳು ಸಭೆಯಲ್ಲಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು