4:14 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ನಂಜನಗೂಡು: ಗಾರ್ಮೆಂಟ್ ಫ್ಯಾಕ್ಟರಿ ಲೋಕಾರ್ಪಣೆ; ಉಸ್ತುವಾರಿ ಸಚಿವ ಮಹದೇವಪ್ಪ ಚಾಲನೆ

01/12/2023, 23:54

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಉದ್ಯಮಿ ಇಂದನ್ ಬಾಬು ಒಡೆತನಕ್ಕೆ ಸೇರಿದ ಚಾಮುಂಡೇಶ್ವರಿ ಎಂಟರ್ಪ್ರೈಸಸ್ ಎಂಬ ಬೃಹತ್ ಕಾರ್ಖಾನೆಯನ್ನು ಉದ್ಘಾಟನೆ ಮಾಡಿ ಸಚಿವ ಮಹದೇವಪ್ಪ ಲೋಕಾರ್ಪಣೆಗೊಳಿಸಿದರು.
ಪಶು ಸಂಗೋಪನೆ ಇಲಾಖೆ ಸಚಿವ ಕೆ. ವೆಂಕಟೇಶ್ ಇದಕ್ಕೆ ಸಾಥ್ ನೀಡಿದರು.


ಕಡಕೋಳ ಕೈಗಾರಿಕಾ ಪ್ರದೇಶದ ಎರಡನೇ ಹಂತದಲ್ಲಿರುವ ಸುಮಾರು ಎರಡು ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಿರುವ ಬೃಹತ್ ಕಾರ್ಖಾನೆ ಕಟ್ಟಡಗಳು ಇದಾಗಿದೆ. ನೂತನ ಕಟ್ಟಡಗಳ ಉದ್ಘಾಟನೆ ಹಾಗೂ ಪೂಜಾ ಕಾರ್ಯದಲ್ಲಿ ಭಾಗಿಯಾದ ಸಚಿವದ್ವಯರು ಉದ್ಘಾಟನೆ ನೆರವೇರಿಸಿ ಶುಭ ಹಾರೈಸಿದರು.
ನಂತರ ಸಚಿವರುಗಳಾದ ಮಹದೇವಪ್ಪ ಹಾಗೂ ಕೆ. ವೆಂಕಟೇಶ್ ಮಾತನಾಡಿ, ಕೆಐ ಎಡಿಬಿ ವತಿಯಿಂದ ಸರ್ಕಾರ ನೀಡಿರುವ ಸಬ್ಸಿಡಿಯಿಂದ 2 ಎಕರೆ ಜಮೀನು ಪಡೆದು ಕೆ ಎಸ್ ಎಫ್ ಸಿ ಹಣಕಾಸು ಸಂಸ್ಥೆ ವತಿಯಿಂದ ಯೋಜನೆಗೆ ಅನುಗುಣವಾಗಿ ಸಾಲ ಪಡೆದು ಇಲ್ಲಿ ಇಂದನ್ ಬಾಬು ಉದ್ಯಮ ಸ್ಥಾಪನೆ ಮಾಡಿದ್ದಾರೆ. ಅವರಿಗೆ ಶುಭವಾಗಲಿ ಎಂದರು ಯುವಕರು ಹಾಗು ಉದ್ಯಮಿ ಗಳು ಸರ್ಕಾರದ ಇಂತಹ ಯೋಜನೆಗಳ ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ ಮುಂದೆ ಬರಬೇಕು ಎಂದು ನುಡಿದರು.
ಇದೇ ಸಂದರ್ಭ ಕಾರ್ಯ ಕ್ರಮಕ್ಕೆ ಬಂದ ಸಚಿವರು ಹಾಗೂ ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು.
ಮಾಜಿ ಶಾಸಕರುಗಳಾದ ಡಾ. ಯತೀಂದ್ರ ಸಿದ್ದರಾಮಯ್ಯ, ಕಳಲೆ ಕೇಶವಮೂರ್ತಿ, ರಾಜ್ಯ ವಾಲ್ಮೀಕಿ ನಿಗಮದ ಮಾಜಿ ಅಧ್ಯಕ್ಷ ಎಸ್ ಸಿ ಬಸವರಾಜು, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ ಎಂ ರಾಮು, ಉದ್ಯಮಿ ಕೃಷ್ಣಪ್ಪ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಹಾರೈಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು