8:33 PM Saturday20 - June 2026
ಬ್ರೇಕಿಂಗ್ ನ್ಯೂಸ್
Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ…

ಇತ್ತೀಚಿನ ಸುದ್ದಿ

ನಂಜನಗೂಡು: ಗಾರ್ಮೆಂಟ್ ಫ್ಯಾಕ್ಟರಿ ಲೋಕಾರ್ಪಣೆ; ಉಸ್ತುವಾರಿ ಸಚಿವ ಮಹದೇವಪ್ಪ ಚಾಲನೆ

01/12/2023, 23:54

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಉದ್ಯಮಿ ಇಂದನ್ ಬಾಬು ಒಡೆತನಕ್ಕೆ ಸೇರಿದ ಚಾಮುಂಡೇಶ್ವರಿ ಎಂಟರ್ಪ್ರೈಸಸ್ ಎಂಬ ಬೃಹತ್ ಕಾರ್ಖಾನೆಯನ್ನು ಉದ್ಘಾಟನೆ ಮಾಡಿ ಸಚಿವ ಮಹದೇವಪ್ಪ ಲೋಕಾರ್ಪಣೆಗೊಳಿಸಿದರು.
ಪಶು ಸಂಗೋಪನೆ ಇಲಾಖೆ ಸಚಿವ ಕೆ. ವೆಂಕಟೇಶ್ ಇದಕ್ಕೆ ಸಾಥ್ ನೀಡಿದರು.


ಕಡಕೋಳ ಕೈಗಾರಿಕಾ ಪ್ರದೇಶದ ಎರಡನೇ ಹಂತದಲ್ಲಿರುವ ಸುಮಾರು ಎರಡು ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಿರುವ ಬೃಹತ್ ಕಾರ್ಖಾನೆ ಕಟ್ಟಡಗಳು ಇದಾಗಿದೆ. ನೂತನ ಕಟ್ಟಡಗಳ ಉದ್ಘಾಟನೆ ಹಾಗೂ ಪೂಜಾ ಕಾರ್ಯದಲ್ಲಿ ಭಾಗಿಯಾದ ಸಚಿವದ್ವಯರು ಉದ್ಘಾಟನೆ ನೆರವೇರಿಸಿ ಶುಭ ಹಾರೈಸಿದರು.
ನಂತರ ಸಚಿವರುಗಳಾದ ಮಹದೇವಪ್ಪ ಹಾಗೂ ಕೆ. ವೆಂಕಟೇಶ್ ಮಾತನಾಡಿ, ಕೆಐ ಎಡಿಬಿ ವತಿಯಿಂದ ಸರ್ಕಾರ ನೀಡಿರುವ ಸಬ್ಸಿಡಿಯಿಂದ 2 ಎಕರೆ ಜಮೀನು ಪಡೆದು ಕೆ ಎಸ್ ಎಫ್ ಸಿ ಹಣಕಾಸು ಸಂಸ್ಥೆ ವತಿಯಿಂದ ಯೋಜನೆಗೆ ಅನುಗುಣವಾಗಿ ಸಾಲ ಪಡೆದು ಇಲ್ಲಿ ಇಂದನ್ ಬಾಬು ಉದ್ಯಮ ಸ್ಥಾಪನೆ ಮಾಡಿದ್ದಾರೆ. ಅವರಿಗೆ ಶುಭವಾಗಲಿ ಎಂದರು ಯುವಕರು ಹಾಗು ಉದ್ಯಮಿ ಗಳು ಸರ್ಕಾರದ ಇಂತಹ ಯೋಜನೆಗಳ ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ ಮುಂದೆ ಬರಬೇಕು ಎಂದು ನುಡಿದರು.
ಇದೇ ಸಂದರ್ಭ ಕಾರ್ಯ ಕ್ರಮಕ್ಕೆ ಬಂದ ಸಚಿವರು ಹಾಗೂ ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು.
ಮಾಜಿ ಶಾಸಕರುಗಳಾದ ಡಾ. ಯತೀಂದ್ರ ಸಿದ್ದರಾಮಯ್ಯ, ಕಳಲೆ ಕೇಶವಮೂರ್ತಿ, ರಾಜ್ಯ ವಾಲ್ಮೀಕಿ ನಿಗಮದ ಮಾಜಿ ಅಧ್ಯಕ್ಷ ಎಸ್ ಸಿ ಬಸವರಾಜು, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ ಎಂ ರಾಮು, ಉದ್ಯಮಿ ಕೃಷ್ಣಪ್ಪ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಹಾರೈಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು