1:01 PM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ನಂಜನಗೂಡಿನ ಪರಶುರಾಮ ದೇವಾಲಯದಲ್ಲಿ ಮೊದಲ ಶ್ರಾವಣ ಪೂಜೆ: ಚೂರ್ಣಾವತಿ ನದಿಯ ದಡದಲ್ಲಿ ಹಲವು ಸೇವೆ

10/08/2024, 20:27

ಮೋಹನ್ ನಂಜನಗೂಡು ಮೈಸೂರು

info.reporterkarnataka.com

ದಕ್ಷಿಣ ಕಾಶಿ ನಂಜನಗೂಡಿನ ಪುರಾಣ ಪ್ರಸಿದ್ಧ ಶ್ರೀ ಪರಶುರಾಮ ದೇವಾಲಯದಲ್ಲಿ ಶ್ರಾವಣ ಮಾಸದ ಮೊದಲನೇ ಶನಿವಾರದ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶ್ರಾವಣ ಮಾಸದ ಅಂಗವಾಗಿ ಶ್ರೀ ಪರಶುರಾಮರ ಮೂರ್ತಿಯನ್ನು ವಿಶೇಷವಾಗಿ ಬಣ್ಣ,ಬಣ್ಣದ ಹೂಗಳಿಂದ ಅಲಂಕರಿಸಿ ಪೂಜಾ ಕಾರ್ಯಗಳನ್ನು ನಡೆಸಲಾಯಿತು.
ಚೂರ್ಣಾವತಿ ನದಿಯ ದಡದಲ್ಲಿರುವ ಶ್ರೀ ಪರಶುರಾಮರ ದೇವಾಲಯಕ್ಕೆ ವಿವಿಧೆಡೆಯಿಂದ ಭಕ್ತರು ಆಗಮಿಸಿ ಹಲವು ಸೇವೆಗಳನ್ನು ಸಲ್ಲಿಸುವ ಮೂಲಕ ತಮ್ಮ ಭಕ್ತಿ ಭಾವ ಮೆರೆದರು. ತಮ್ಮ ಕಷ್ಟ ಕಾರ್ಪಣ್ಯಗಳನ್ನು ಪರಿಹರಿಸುವಂತೆ ಶ್ರೀ ಪರಶುರಾಮನಲ್ಲಿ ಬೇಡಿಕೊಂಡು ಹರಕೆ ಹೊತ್ತ ಭಕ್ತರು ದೇವಾಲಯಕ್ಕೆ ಬಂದು ಪೂಜೆ ಸಲ್ಲಿಸಿ ಬೆಲ್ಲ ಮತ್ತು ಉಪ್ಪನ್ನು ಚೂರ್ಣಾವತಿ ನದಿಗೆ ಅರ್ಪಿಸುವ ಮೂಲಕ ತಮ್ಮ ಹರಕೆ ತೀರಿಸುತ್ತಾರೆ.


ಮೊದಲನೇ ಶನಿವಾರದ ಕಾರಣ ಭಕ್ತರು ಅಷ್ಟೇನು ಹೆಚ್ಚಿನ ಸಂಖ್ಯೆಯಲ್ಲಿ ಸೇರಿರಲಿಲ್ಲ. ಆದರೂ ಹಣ್ಣು ಕಾಯಿ ಸೇರಿದಂತೆ ಪೂಜಾ ಸಾಮಗ್ರಿಗಳು ಹಾಗೂ ಬೆಲ್ಲ ಮತ್ತು ಉಪ್ಪಿನ ಮಾರಾಟ ಜೋರಾಗಿಯೇ ನಡೆಯಿತು.
ಕೆಲವು ದಾನಿಗಳು ಬಂದ ಎಲ್ಲಾ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಿದರು. ದೇವಾಲಯದ ಅರ್ಚಕರಾದ ಕೃಷ್ಣ ಅಯ್ಯಂಗಾರ್ ಮಾತನಾಡಿ, ಶ್ರಾವಣ ಮಾಸದ ವಿಶೇಷದ ಬಗ್ಗೆ ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು