7:47 PM Friday18 - September 2026
ಬ್ರೇಕಿಂಗ್ ನ್ಯೂಸ್
ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:…

ಇತ್ತೀಚಿನ ಸುದ್ದಿ

ನಂಜನಗೂಡಿನ ಪರಶುರಾಮ ದೇವಾಲಯದಲ್ಲಿ ಮೊದಲ ಶ್ರಾವಣ ಪೂಜೆ: ಚೂರ್ಣಾವತಿ ನದಿಯ ದಡದಲ್ಲಿ ಹಲವು ಸೇವೆ

10/08/2024, 20:27

ಮೋಹನ್ ನಂಜನಗೂಡು ಮೈಸೂರು

info.reporterkarnataka.com

ದಕ್ಷಿಣ ಕಾಶಿ ನಂಜನಗೂಡಿನ ಪುರಾಣ ಪ್ರಸಿದ್ಧ ಶ್ರೀ ಪರಶುರಾಮ ದೇವಾಲಯದಲ್ಲಿ ಶ್ರಾವಣ ಮಾಸದ ಮೊದಲನೇ ಶನಿವಾರದ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶ್ರಾವಣ ಮಾಸದ ಅಂಗವಾಗಿ ಶ್ರೀ ಪರಶುರಾಮರ ಮೂರ್ತಿಯನ್ನು ವಿಶೇಷವಾಗಿ ಬಣ್ಣ,ಬಣ್ಣದ ಹೂಗಳಿಂದ ಅಲಂಕರಿಸಿ ಪೂಜಾ ಕಾರ್ಯಗಳನ್ನು ನಡೆಸಲಾಯಿತು.
ಚೂರ್ಣಾವತಿ ನದಿಯ ದಡದಲ್ಲಿರುವ ಶ್ರೀ ಪರಶುರಾಮರ ದೇವಾಲಯಕ್ಕೆ ವಿವಿಧೆಡೆಯಿಂದ ಭಕ್ತರು ಆಗಮಿಸಿ ಹಲವು ಸೇವೆಗಳನ್ನು ಸಲ್ಲಿಸುವ ಮೂಲಕ ತಮ್ಮ ಭಕ್ತಿ ಭಾವ ಮೆರೆದರು. ತಮ್ಮ ಕಷ್ಟ ಕಾರ್ಪಣ್ಯಗಳನ್ನು ಪರಿಹರಿಸುವಂತೆ ಶ್ರೀ ಪರಶುರಾಮನಲ್ಲಿ ಬೇಡಿಕೊಂಡು ಹರಕೆ ಹೊತ್ತ ಭಕ್ತರು ದೇವಾಲಯಕ್ಕೆ ಬಂದು ಪೂಜೆ ಸಲ್ಲಿಸಿ ಬೆಲ್ಲ ಮತ್ತು ಉಪ್ಪನ್ನು ಚೂರ್ಣಾವತಿ ನದಿಗೆ ಅರ್ಪಿಸುವ ಮೂಲಕ ತಮ್ಮ ಹರಕೆ ತೀರಿಸುತ್ತಾರೆ.


ಮೊದಲನೇ ಶನಿವಾರದ ಕಾರಣ ಭಕ್ತರು ಅಷ್ಟೇನು ಹೆಚ್ಚಿನ ಸಂಖ್ಯೆಯಲ್ಲಿ ಸೇರಿರಲಿಲ್ಲ. ಆದರೂ ಹಣ್ಣು ಕಾಯಿ ಸೇರಿದಂತೆ ಪೂಜಾ ಸಾಮಗ್ರಿಗಳು ಹಾಗೂ ಬೆಲ್ಲ ಮತ್ತು ಉಪ್ಪಿನ ಮಾರಾಟ ಜೋರಾಗಿಯೇ ನಡೆಯಿತು.
ಕೆಲವು ದಾನಿಗಳು ಬಂದ ಎಲ್ಲಾ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಿದರು. ದೇವಾಲಯದ ಅರ್ಚಕರಾದ ಕೃಷ್ಣ ಅಯ್ಯಂಗಾರ್ ಮಾತನಾಡಿ, ಶ್ರಾವಣ ಮಾಸದ ವಿಶೇಷದ ಬಗ್ಗೆ ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು