9:34 PM Wednesday10 - December 2025
ಬ್ರೇಕಿಂಗ್ ನ್ಯೂಸ್
ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ ರಾಜ್ಯದಲ್ಲಿ 37,48,700 ವಸತಿ ರಹಿತರು: ವಿಧಾನ ಪರಿಷತ್ ನಲ್ಲಿ ಸಚಿವ ಜಮೀರ್ ಖಾನ್ ಬೆಂಗಳೂರು ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಧರ್ಮ ಮತ್ತು ಸಂಸ್ಕೃತಿ ಅಧ್ಯಯನ ಕೇಂದ್ರ ಉದ್ಘಾಟನೆ ಬೆಂಗಳೂರು ನಗರದಲ್ಲಿ ಕ್ವಾಂಟಮ್ ಮೆಟೀರಿಯಲ್ಸ್ ನೆಟ್‌ವರ್ಕ್ (Q-MINt) ಸ್ಥಾಪಿಸಲು ಪ್ರಧಾನಿಗೆ ಸಿಎಂ ಪತ್ರ ಮಕ್ಕಳ ರಕ್ಷಣಾ ನಿರ್ದೇಶನಾಲಯದ ಯೋಜನೆಗಳ ಸಮರ್ಪಕ ಜಾರಿಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೆಎಸ್ಸಾರ್ಟಿಸಿ ಬಸ್ ಪಲ್ಟಿ; ಶಾಲಾ ವಿದ್ಯಾರ್ಥಿಗಳು ಸೇರಿದಂತೆ 15 ಜನರಿಗೆ ಗಾಯ; ಕಂಡಕ್ಟರ್… ಸುವರ್ಣಸೌಧ ಮುತ್ತಿಗೆ ಹಾಕಲು ಯತ್ನ; ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿ ಪ್ರತಿಭಟನಾಕಾರರು ಪೊಲೀಸ್… ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ನೂತನ ಪ್ರಭಾರ ಅಧ್ಯಕ್ಷರಾಗಿ ಗೀತಾ ರಮೇಶ್ ಆಯ್ಕೆ ಸಿಎ ಸೈಟ್ ನಲ್ಲಿ ಕಟ್ಟಡ ನಿರ್ಮಾಣಕ್ಕೆ ಕಾಲಮಿತಿ ಷರತ್ತು ಸಡಿಲಿಕೆಗೆ ಕ್ರಮ: ವಿಧಾನ…

ಇತ್ತೀಚಿನ ಸುದ್ದಿ

ನಂಜನಗೂಡಿನ ಪರಶುರಾಮ ದೇವಾಲಯದಲ್ಲಿ ಮೊದಲ ಶ್ರಾವಣ ಪೂಜೆ: ಚೂರ್ಣಾವತಿ ನದಿಯ ದಡದಲ್ಲಿ ಹಲವು ಸೇವೆ

10/08/2024, 20:27

ಮೋಹನ್ ನಂಜನಗೂಡು ಮೈಸೂರು

info.reporterkarnataka.com

ದಕ್ಷಿಣ ಕಾಶಿ ನಂಜನಗೂಡಿನ ಪುರಾಣ ಪ್ರಸಿದ್ಧ ಶ್ರೀ ಪರಶುರಾಮ ದೇವಾಲಯದಲ್ಲಿ ಶ್ರಾವಣ ಮಾಸದ ಮೊದಲನೇ ಶನಿವಾರದ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶ್ರಾವಣ ಮಾಸದ ಅಂಗವಾಗಿ ಶ್ರೀ ಪರಶುರಾಮರ ಮೂರ್ತಿಯನ್ನು ವಿಶೇಷವಾಗಿ ಬಣ್ಣ,ಬಣ್ಣದ ಹೂಗಳಿಂದ ಅಲಂಕರಿಸಿ ಪೂಜಾ ಕಾರ್ಯಗಳನ್ನು ನಡೆಸಲಾಯಿತು.
ಚೂರ್ಣಾವತಿ ನದಿಯ ದಡದಲ್ಲಿರುವ ಶ್ರೀ ಪರಶುರಾಮರ ದೇವಾಲಯಕ್ಕೆ ವಿವಿಧೆಡೆಯಿಂದ ಭಕ್ತರು ಆಗಮಿಸಿ ಹಲವು ಸೇವೆಗಳನ್ನು ಸಲ್ಲಿಸುವ ಮೂಲಕ ತಮ್ಮ ಭಕ್ತಿ ಭಾವ ಮೆರೆದರು. ತಮ್ಮ ಕಷ್ಟ ಕಾರ್ಪಣ್ಯಗಳನ್ನು ಪರಿಹರಿಸುವಂತೆ ಶ್ರೀ ಪರಶುರಾಮನಲ್ಲಿ ಬೇಡಿಕೊಂಡು ಹರಕೆ ಹೊತ್ತ ಭಕ್ತರು ದೇವಾಲಯಕ್ಕೆ ಬಂದು ಪೂಜೆ ಸಲ್ಲಿಸಿ ಬೆಲ್ಲ ಮತ್ತು ಉಪ್ಪನ್ನು ಚೂರ್ಣಾವತಿ ನದಿಗೆ ಅರ್ಪಿಸುವ ಮೂಲಕ ತಮ್ಮ ಹರಕೆ ತೀರಿಸುತ್ತಾರೆ.


ಮೊದಲನೇ ಶನಿವಾರದ ಕಾರಣ ಭಕ್ತರು ಅಷ್ಟೇನು ಹೆಚ್ಚಿನ ಸಂಖ್ಯೆಯಲ್ಲಿ ಸೇರಿರಲಿಲ್ಲ. ಆದರೂ ಹಣ್ಣು ಕಾಯಿ ಸೇರಿದಂತೆ ಪೂಜಾ ಸಾಮಗ್ರಿಗಳು ಹಾಗೂ ಬೆಲ್ಲ ಮತ್ತು ಉಪ್ಪಿನ ಮಾರಾಟ ಜೋರಾಗಿಯೇ ನಡೆಯಿತು.
ಕೆಲವು ದಾನಿಗಳು ಬಂದ ಎಲ್ಲಾ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಿದರು. ದೇವಾಲಯದ ಅರ್ಚಕರಾದ ಕೃಷ್ಣ ಅಯ್ಯಂಗಾರ್ ಮಾತನಾಡಿ, ಶ್ರಾವಣ ಮಾಸದ ವಿಶೇಷದ ಬಗ್ಗೆ ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು