4:15 PM Thursday16 - October 2025
ಬ್ರೇಕಿಂಗ್ ನ್ಯೂಸ್
ಹಾಡು ನಿಲ್ಲಿಸಿದ ಯಕ್ಷ ಕೋಗಿಲೆ: ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ Kodagu | ತುಲಾ ಸಂಕ್ರಮಣ: ತಲಕಾವೇರಿಗೆ ಭಾಗಮಂಡಲದ ಭಗಂಡೇಶ್ವರ ದೇವಾಲಯದಿಂದ ಆಭರಣ ಕಾವೇರಿಮನೆ ಚಂದನ್ ಗೆ ಯುಎನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಪ್ರದಾನ ಇಡೀ ರಾಜ್ಯಕ್ಕೆ ಸುಭಿಕ್ಷೆ, ಶಾಂತಿ, ನೆಮ್ಮದಿ, ಮಳೆ- ಬೆಳೆ-ರೈತರ ಸಮೃದ್ಧಿಗಾಗಿ ಹಾಸನಾಂಬೆಗೆ ಪ್ರಾರ್ಥನೆ… ಮೆಡಿಕಲ್‌ ಅಗತ್ಯತೆಗೆ ಪೂರೈಕೆಗೆ ಡ್ರೋನ್‌ ಬಳಕೆಗೆ ಚಾಲನೆ: ಏರ್‌ಬೌಂಡ್‌ ಸಂಸ್ಥೆಯಿಂದ ಡ್ರೋನ್‌ ಮೂಲಕ… Shivamogga | ತೀರ್ಥಹಳ್ಳಿ ಬಾಳೆಬೈಲು ಬಳಿ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು ಮಡಿಕೇರಿಯ ಚೇರಂಬಾಣೆಯಲ್ಲಿ ಅಸ್ಸಾಂ ಕಾರ್ಮಿಕರಿಗೆ ಸ್ಥಳೀಯನಿಂದ ಗೋವು ಮಾಂಸ ಮಾರಾಟ: ಆರೋಪಿ ಅರೆಸ್ಟ್ ವಿಜ್ಞಾನ ಓದಿಯೂ ಮೌಡ್ಯ ನಂಬುತ್ತೀರಿ ಅಂದರೆ ನೀವು ಓದಿದ್ದೇ ದಂಡ: ಸಿಎಂ ಸಿದ್ದರಾಮಯ್ಯ Chikkamagaluru | ಬಿಂಡಿಗ ದೇವೀರಮ್ಮನ ಜಾತ್ರಾ ಮಹೋತ್ಸ: ಬೆಟ್ಟವೇರಲಿರುವ ಭಕ್ತ ಸಾಗರ; ಜಿಲ್ಲಾಡಳಿತದಿಂದ…

ಇತ್ತೀಚಿನ ಸುದ್ದಿ

ನಂಜನಗೂಡಿನ ಪರಶುರಾಮ ದೇವಾಲಯದಲ್ಲಿ ಮೊದಲ ಶ್ರಾವಣ ಪೂಜೆ: ಚೂರ್ಣಾವತಿ ನದಿಯ ದಡದಲ್ಲಿ ಹಲವು ಸೇವೆ

10/08/2024, 20:27

ಮೋಹನ್ ನಂಜನಗೂಡು ಮೈಸೂರು

info.reporterkarnataka.com

ದಕ್ಷಿಣ ಕಾಶಿ ನಂಜನಗೂಡಿನ ಪುರಾಣ ಪ್ರಸಿದ್ಧ ಶ್ರೀ ಪರಶುರಾಮ ದೇವಾಲಯದಲ್ಲಿ ಶ್ರಾವಣ ಮಾಸದ ಮೊದಲನೇ ಶನಿವಾರದ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶ್ರಾವಣ ಮಾಸದ ಅಂಗವಾಗಿ ಶ್ರೀ ಪರಶುರಾಮರ ಮೂರ್ತಿಯನ್ನು ವಿಶೇಷವಾಗಿ ಬಣ್ಣ,ಬಣ್ಣದ ಹೂಗಳಿಂದ ಅಲಂಕರಿಸಿ ಪೂಜಾ ಕಾರ್ಯಗಳನ್ನು ನಡೆಸಲಾಯಿತು.
ಚೂರ್ಣಾವತಿ ನದಿಯ ದಡದಲ್ಲಿರುವ ಶ್ರೀ ಪರಶುರಾಮರ ದೇವಾಲಯಕ್ಕೆ ವಿವಿಧೆಡೆಯಿಂದ ಭಕ್ತರು ಆಗಮಿಸಿ ಹಲವು ಸೇವೆಗಳನ್ನು ಸಲ್ಲಿಸುವ ಮೂಲಕ ತಮ್ಮ ಭಕ್ತಿ ಭಾವ ಮೆರೆದರು. ತಮ್ಮ ಕಷ್ಟ ಕಾರ್ಪಣ್ಯಗಳನ್ನು ಪರಿಹರಿಸುವಂತೆ ಶ್ರೀ ಪರಶುರಾಮನಲ್ಲಿ ಬೇಡಿಕೊಂಡು ಹರಕೆ ಹೊತ್ತ ಭಕ್ತರು ದೇವಾಲಯಕ್ಕೆ ಬಂದು ಪೂಜೆ ಸಲ್ಲಿಸಿ ಬೆಲ್ಲ ಮತ್ತು ಉಪ್ಪನ್ನು ಚೂರ್ಣಾವತಿ ನದಿಗೆ ಅರ್ಪಿಸುವ ಮೂಲಕ ತಮ್ಮ ಹರಕೆ ತೀರಿಸುತ್ತಾರೆ.


ಮೊದಲನೇ ಶನಿವಾರದ ಕಾರಣ ಭಕ್ತರು ಅಷ್ಟೇನು ಹೆಚ್ಚಿನ ಸಂಖ್ಯೆಯಲ್ಲಿ ಸೇರಿರಲಿಲ್ಲ. ಆದರೂ ಹಣ್ಣು ಕಾಯಿ ಸೇರಿದಂತೆ ಪೂಜಾ ಸಾಮಗ್ರಿಗಳು ಹಾಗೂ ಬೆಲ್ಲ ಮತ್ತು ಉಪ್ಪಿನ ಮಾರಾಟ ಜೋರಾಗಿಯೇ ನಡೆಯಿತು.
ಕೆಲವು ದಾನಿಗಳು ಬಂದ ಎಲ್ಲಾ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಿದರು. ದೇವಾಲಯದ ಅರ್ಚಕರಾದ ಕೃಷ್ಣ ಅಯ್ಯಂಗಾರ್ ಮಾತನಾಡಿ, ಶ್ರಾವಣ ಮಾಸದ ವಿಶೇಷದ ಬಗ್ಗೆ ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು