3:19 AM Saturday10 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ನಂಜನಗೂಡಿನ ಪರಶುರಾಮ ದೇವಾಲಯದಲ್ಲಿ ಮೊದಲ ಶ್ರಾವಣ ಪೂಜೆ: ಚೂರ್ಣಾವತಿ ನದಿಯ ದಡದಲ್ಲಿ ಹಲವು ಸೇವೆ

10/08/2024, 20:27

ಮೋಹನ್ ನಂಜನಗೂಡು ಮೈಸೂರು

info.reporterkarnataka.com

ದಕ್ಷಿಣ ಕಾಶಿ ನಂಜನಗೂಡಿನ ಪುರಾಣ ಪ್ರಸಿದ್ಧ ಶ್ರೀ ಪರಶುರಾಮ ದೇವಾಲಯದಲ್ಲಿ ಶ್ರಾವಣ ಮಾಸದ ಮೊದಲನೇ ಶನಿವಾರದ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶ್ರಾವಣ ಮಾಸದ ಅಂಗವಾಗಿ ಶ್ರೀ ಪರಶುರಾಮರ ಮೂರ್ತಿಯನ್ನು ವಿಶೇಷವಾಗಿ ಬಣ್ಣ,ಬಣ್ಣದ ಹೂಗಳಿಂದ ಅಲಂಕರಿಸಿ ಪೂಜಾ ಕಾರ್ಯಗಳನ್ನು ನಡೆಸಲಾಯಿತು.
ಚೂರ್ಣಾವತಿ ನದಿಯ ದಡದಲ್ಲಿರುವ ಶ್ರೀ ಪರಶುರಾಮರ ದೇವಾಲಯಕ್ಕೆ ವಿವಿಧೆಡೆಯಿಂದ ಭಕ್ತರು ಆಗಮಿಸಿ ಹಲವು ಸೇವೆಗಳನ್ನು ಸಲ್ಲಿಸುವ ಮೂಲಕ ತಮ್ಮ ಭಕ್ತಿ ಭಾವ ಮೆರೆದರು. ತಮ್ಮ ಕಷ್ಟ ಕಾರ್ಪಣ್ಯಗಳನ್ನು ಪರಿಹರಿಸುವಂತೆ ಶ್ರೀ ಪರಶುರಾಮನಲ್ಲಿ ಬೇಡಿಕೊಂಡು ಹರಕೆ ಹೊತ್ತ ಭಕ್ತರು ದೇವಾಲಯಕ್ಕೆ ಬಂದು ಪೂಜೆ ಸಲ್ಲಿಸಿ ಬೆಲ್ಲ ಮತ್ತು ಉಪ್ಪನ್ನು ಚೂರ್ಣಾವತಿ ನದಿಗೆ ಅರ್ಪಿಸುವ ಮೂಲಕ ತಮ್ಮ ಹರಕೆ ತೀರಿಸುತ್ತಾರೆ.


ಮೊದಲನೇ ಶನಿವಾರದ ಕಾರಣ ಭಕ್ತರು ಅಷ್ಟೇನು ಹೆಚ್ಚಿನ ಸಂಖ್ಯೆಯಲ್ಲಿ ಸೇರಿರಲಿಲ್ಲ. ಆದರೂ ಹಣ್ಣು ಕಾಯಿ ಸೇರಿದಂತೆ ಪೂಜಾ ಸಾಮಗ್ರಿಗಳು ಹಾಗೂ ಬೆಲ್ಲ ಮತ್ತು ಉಪ್ಪಿನ ಮಾರಾಟ ಜೋರಾಗಿಯೇ ನಡೆಯಿತು.
ಕೆಲವು ದಾನಿಗಳು ಬಂದ ಎಲ್ಲಾ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಿದರು. ದೇವಾಲಯದ ಅರ್ಚಕರಾದ ಕೃಷ್ಣ ಅಯ್ಯಂಗಾರ್ ಮಾತನಾಡಿ, ಶ್ರಾವಣ ಮಾಸದ ವಿಶೇಷದ ಬಗ್ಗೆ ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು