2:39 PM Friday4 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ನಂಜನಗೂಡಿನ ಪರಶುರಾಮ ದೇವಾಲಯದಲ್ಲಿ ಮೊದಲ ಶ್ರಾವಣ ಪೂಜೆ: ಚೂರ್ಣಾವತಿ ನದಿಯ ದಡದಲ್ಲಿ ಹಲವು ಸೇವೆ

10/08/2024, 20:27

ಮೋಹನ್ ನಂಜನಗೂಡು ಮೈಸೂರು

info.reporterkarnataka.com

ದಕ್ಷಿಣ ಕಾಶಿ ನಂಜನಗೂಡಿನ ಪುರಾಣ ಪ್ರಸಿದ್ಧ ಶ್ರೀ ಪರಶುರಾಮ ದೇವಾಲಯದಲ್ಲಿ ಶ್ರಾವಣ ಮಾಸದ ಮೊದಲನೇ ಶನಿವಾರದ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶ್ರಾವಣ ಮಾಸದ ಅಂಗವಾಗಿ ಶ್ರೀ ಪರಶುರಾಮರ ಮೂರ್ತಿಯನ್ನು ವಿಶೇಷವಾಗಿ ಬಣ್ಣ,ಬಣ್ಣದ ಹೂಗಳಿಂದ ಅಲಂಕರಿಸಿ ಪೂಜಾ ಕಾರ್ಯಗಳನ್ನು ನಡೆಸಲಾಯಿತು.
ಚೂರ್ಣಾವತಿ ನದಿಯ ದಡದಲ್ಲಿರುವ ಶ್ರೀ ಪರಶುರಾಮರ ದೇವಾಲಯಕ್ಕೆ ವಿವಿಧೆಡೆಯಿಂದ ಭಕ್ತರು ಆಗಮಿಸಿ ಹಲವು ಸೇವೆಗಳನ್ನು ಸಲ್ಲಿಸುವ ಮೂಲಕ ತಮ್ಮ ಭಕ್ತಿ ಭಾವ ಮೆರೆದರು. ತಮ್ಮ ಕಷ್ಟ ಕಾರ್ಪಣ್ಯಗಳನ್ನು ಪರಿಹರಿಸುವಂತೆ ಶ್ರೀ ಪರಶುರಾಮನಲ್ಲಿ ಬೇಡಿಕೊಂಡು ಹರಕೆ ಹೊತ್ತ ಭಕ್ತರು ದೇವಾಲಯಕ್ಕೆ ಬಂದು ಪೂಜೆ ಸಲ್ಲಿಸಿ ಬೆಲ್ಲ ಮತ್ತು ಉಪ್ಪನ್ನು ಚೂರ್ಣಾವತಿ ನದಿಗೆ ಅರ್ಪಿಸುವ ಮೂಲಕ ತಮ್ಮ ಹರಕೆ ತೀರಿಸುತ್ತಾರೆ.


ಮೊದಲನೇ ಶನಿವಾರದ ಕಾರಣ ಭಕ್ತರು ಅಷ್ಟೇನು ಹೆಚ್ಚಿನ ಸಂಖ್ಯೆಯಲ್ಲಿ ಸೇರಿರಲಿಲ್ಲ. ಆದರೂ ಹಣ್ಣು ಕಾಯಿ ಸೇರಿದಂತೆ ಪೂಜಾ ಸಾಮಗ್ರಿಗಳು ಹಾಗೂ ಬೆಲ್ಲ ಮತ್ತು ಉಪ್ಪಿನ ಮಾರಾಟ ಜೋರಾಗಿಯೇ ನಡೆಯಿತು.
ಕೆಲವು ದಾನಿಗಳು ಬಂದ ಎಲ್ಲಾ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಿದರು. ದೇವಾಲಯದ ಅರ್ಚಕರಾದ ಕೃಷ್ಣ ಅಯ್ಯಂಗಾರ್ ಮಾತನಾಡಿ, ಶ್ರಾವಣ ಮಾಸದ ವಿಶೇಷದ ಬಗ್ಗೆ ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು