12:15 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ನಂಜನಗೂಡಿನ ಪರಶುರಾಮ ದೇವಾಲಯದಲ್ಲಿ ಮೊದಲ ಶ್ರಾವಣ ಪೂಜೆ: ಚೂರ್ಣಾವತಿ ನದಿಯ ದಡದಲ್ಲಿ ಹಲವು ಸೇವೆ

10/08/2024, 20:27

ಮೋಹನ್ ನಂಜನಗೂಡು ಮೈಸೂರು

info.reporterkarnataka.com

ದಕ್ಷಿಣ ಕಾಶಿ ನಂಜನಗೂಡಿನ ಪುರಾಣ ಪ್ರಸಿದ್ಧ ಶ್ರೀ ಪರಶುರಾಮ ದೇವಾಲಯದಲ್ಲಿ ಶ್ರಾವಣ ಮಾಸದ ಮೊದಲನೇ ಶನಿವಾರದ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶ್ರಾವಣ ಮಾಸದ ಅಂಗವಾಗಿ ಶ್ರೀ ಪರಶುರಾಮರ ಮೂರ್ತಿಯನ್ನು ವಿಶೇಷವಾಗಿ ಬಣ್ಣ,ಬಣ್ಣದ ಹೂಗಳಿಂದ ಅಲಂಕರಿಸಿ ಪೂಜಾ ಕಾರ್ಯಗಳನ್ನು ನಡೆಸಲಾಯಿತು.
ಚೂರ್ಣಾವತಿ ನದಿಯ ದಡದಲ್ಲಿರುವ ಶ್ರೀ ಪರಶುರಾಮರ ದೇವಾಲಯಕ್ಕೆ ವಿವಿಧೆಡೆಯಿಂದ ಭಕ್ತರು ಆಗಮಿಸಿ ಹಲವು ಸೇವೆಗಳನ್ನು ಸಲ್ಲಿಸುವ ಮೂಲಕ ತಮ್ಮ ಭಕ್ತಿ ಭಾವ ಮೆರೆದರು. ತಮ್ಮ ಕಷ್ಟ ಕಾರ್ಪಣ್ಯಗಳನ್ನು ಪರಿಹರಿಸುವಂತೆ ಶ್ರೀ ಪರಶುರಾಮನಲ್ಲಿ ಬೇಡಿಕೊಂಡು ಹರಕೆ ಹೊತ್ತ ಭಕ್ತರು ದೇವಾಲಯಕ್ಕೆ ಬಂದು ಪೂಜೆ ಸಲ್ಲಿಸಿ ಬೆಲ್ಲ ಮತ್ತು ಉಪ್ಪನ್ನು ಚೂರ್ಣಾವತಿ ನದಿಗೆ ಅರ್ಪಿಸುವ ಮೂಲಕ ತಮ್ಮ ಹರಕೆ ತೀರಿಸುತ್ತಾರೆ.


ಮೊದಲನೇ ಶನಿವಾರದ ಕಾರಣ ಭಕ್ತರು ಅಷ್ಟೇನು ಹೆಚ್ಚಿನ ಸಂಖ್ಯೆಯಲ್ಲಿ ಸೇರಿರಲಿಲ್ಲ. ಆದರೂ ಹಣ್ಣು ಕಾಯಿ ಸೇರಿದಂತೆ ಪೂಜಾ ಸಾಮಗ್ರಿಗಳು ಹಾಗೂ ಬೆಲ್ಲ ಮತ್ತು ಉಪ್ಪಿನ ಮಾರಾಟ ಜೋರಾಗಿಯೇ ನಡೆಯಿತು.
ಕೆಲವು ದಾನಿಗಳು ಬಂದ ಎಲ್ಲಾ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಿದರು. ದೇವಾಲಯದ ಅರ್ಚಕರಾದ ಕೃಷ್ಣ ಅಯ್ಯಂಗಾರ್ ಮಾತನಾಡಿ, ಶ್ರಾವಣ ಮಾಸದ ವಿಶೇಷದ ಬಗ್ಗೆ ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು