3:53 AM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ನಂಜನಗೂಡಿನ ಪರಶುರಾಮ ದೇವಾಲಯದಲ್ಲಿ ಮೊದಲ ಶ್ರಾವಣ ಪೂಜೆ: ಚೂರ್ಣಾವತಿ ನದಿಯ ದಡದಲ್ಲಿ ಹಲವು ಸೇವೆ

10/08/2024, 20:27

ಮೋಹನ್ ನಂಜನಗೂಡು ಮೈಸೂರು

info.reporterkarnataka.com

ದಕ್ಷಿಣ ಕಾಶಿ ನಂಜನಗೂಡಿನ ಪುರಾಣ ಪ್ರಸಿದ್ಧ ಶ್ರೀ ಪರಶುರಾಮ ದೇವಾಲಯದಲ್ಲಿ ಶ್ರಾವಣ ಮಾಸದ ಮೊದಲನೇ ಶನಿವಾರದ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶ್ರಾವಣ ಮಾಸದ ಅಂಗವಾಗಿ ಶ್ರೀ ಪರಶುರಾಮರ ಮೂರ್ತಿಯನ್ನು ವಿಶೇಷವಾಗಿ ಬಣ್ಣ,ಬಣ್ಣದ ಹೂಗಳಿಂದ ಅಲಂಕರಿಸಿ ಪೂಜಾ ಕಾರ್ಯಗಳನ್ನು ನಡೆಸಲಾಯಿತು.
ಚೂರ್ಣಾವತಿ ನದಿಯ ದಡದಲ್ಲಿರುವ ಶ್ರೀ ಪರಶುರಾಮರ ದೇವಾಲಯಕ್ಕೆ ವಿವಿಧೆಡೆಯಿಂದ ಭಕ್ತರು ಆಗಮಿಸಿ ಹಲವು ಸೇವೆಗಳನ್ನು ಸಲ್ಲಿಸುವ ಮೂಲಕ ತಮ್ಮ ಭಕ್ತಿ ಭಾವ ಮೆರೆದರು. ತಮ್ಮ ಕಷ್ಟ ಕಾರ್ಪಣ್ಯಗಳನ್ನು ಪರಿಹರಿಸುವಂತೆ ಶ್ರೀ ಪರಶುರಾಮನಲ್ಲಿ ಬೇಡಿಕೊಂಡು ಹರಕೆ ಹೊತ್ತ ಭಕ್ತರು ದೇವಾಲಯಕ್ಕೆ ಬಂದು ಪೂಜೆ ಸಲ್ಲಿಸಿ ಬೆಲ್ಲ ಮತ್ತು ಉಪ್ಪನ್ನು ಚೂರ್ಣಾವತಿ ನದಿಗೆ ಅರ್ಪಿಸುವ ಮೂಲಕ ತಮ್ಮ ಹರಕೆ ತೀರಿಸುತ್ತಾರೆ.


ಮೊದಲನೇ ಶನಿವಾರದ ಕಾರಣ ಭಕ್ತರು ಅಷ್ಟೇನು ಹೆಚ್ಚಿನ ಸಂಖ್ಯೆಯಲ್ಲಿ ಸೇರಿರಲಿಲ್ಲ. ಆದರೂ ಹಣ್ಣು ಕಾಯಿ ಸೇರಿದಂತೆ ಪೂಜಾ ಸಾಮಗ್ರಿಗಳು ಹಾಗೂ ಬೆಲ್ಲ ಮತ್ತು ಉಪ್ಪಿನ ಮಾರಾಟ ಜೋರಾಗಿಯೇ ನಡೆಯಿತು.
ಕೆಲವು ದಾನಿಗಳು ಬಂದ ಎಲ್ಲಾ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಿದರು. ದೇವಾಲಯದ ಅರ್ಚಕರಾದ ಕೃಷ್ಣ ಅಯ್ಯಂಗಾರ್ ಮಾತನಾಡಿ, ಶ್ರಾವಣ ಮಾಸದ ವಿಶೇಷದ ಬಗ್ಗೆ ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು