12:58 PM Thursday1 - January 2026
ಬ್ರೇಕಿಂಗ್ ನ್ಯೂಸ್
6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ನಂಜನಗೂಡಿನ ಪರಶುರಾಮ ದೇವಾಲಯದಲ್ಲಿ ಮೊದಲ ಶ್ರಾವಣ ಪೂಜೆ: ಚೂರ್ಣಾವತಿ ನದಿಯ ದಡದಲ್ಲಿ ಹಲವು ಸೇವೆ

10/08/2024, 20:27

ಮೋಹನ್ ನಂಜನಗೂಡು ಮೈಸೂರು

info.reporterkarnataka.com

ದಕ್ಷಿಣ ಕಾಶಿ ನಂಜನಗೂಡಿನ ಪುರಾಣ ಪ್ರಸಿದ್ಧ ಶ್ರೀ ಪರಶುರಾಮ ದೇವಾಲಯದಲ್ಲಿ ಶ್ರಾವಣ ಮಾಸದ ಮೊದಲನೇ ಶನಿವಾರದ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶ್ರಾವಣ ಮಾಸದ ಅಂಗವಾಗಿ ಶ್ರೀ ಪರಶುರಾಮರ ಮೂರ್ತಿಯನ್ನು ವಿಶೇಷವಾಗಿ ಬಣ್ಣ,ಬಣ್ಣದ ಹೂಗಳಿಂದ ಅಲಂಕರಿಸಿ ಪೂಜಾ ಕಾರ್ಯಗಳನ್ನು ನಡೆಸಲಾಯಿತು.
ಚೂರ್ಣಾವತಿ ನದಿಯ ದಡದಲ್ಲಿರುವ ಶ್ರೀ ಪರಶುರಾಮರ ದೇವಾಲಯಕ್ಕೆ ವಿವಿಧೆಡೆಯಿಂದ ಭಕ್ತರು ಆಗಮಿಸಿ ಹಲವು ಸೇವೆಗಳನ್ನು ಸಲ್ಲಿಸುವ ಮೂಲಕ ತಮ್ಮ ಭಕ್ತಿ ಭಾವ ಮೆರೆದರು. ತಮ್ಮ ಕಷ್ಟ ಕಾರ್ಪಣ್ಯಗಳನ್ನು ಪರಿಹರಿಸುವಂತೆ ಶ್ರೀ ಪರಶುರಾಮನಲ್ಲಿ ಬೇಡಿಕೊಂಡು ಹರಕೆ ಹೊತ್ತ ಭಕ್ತರು ದೇವಾಲಯಕ್ಕೆ ಬಂದು ಪೂಜೆ ಸಲ್ಲಿಸಿ ಬೆಲ್ಲ ಮತ್ತು ಉಪ್ಪನ್ನು ಚೂರ್ಣಾವತಿ ನದಿಗೆ ಅರ್ಪಿಸುವ ಮೂಲಕ ತಮ್ಮ ಹರಕೆ ತೀರಿಸುತ್ತಾರೆ.


ಮೊದಲನೇ ಶನಿವಾರದ ಕಾರಣ ಭಕ್ತರು ಅಷ್ಟೇನು ಹೆಚ್ಚಿನ ಸಂಖ್ಯೆಯಲ್ಲಿ ಸೇರಿರಲಿಲ್ಲ. ಆದರೂ ಹಣ್ಣು ಕಾಯಿ ಸೇರಿದಂತೆ ಪೂಜಾ ಸಾಮಗ್ರಿಗಳು ಹಾಗೂ ಬೆಲ್ಲ ಮತ್ತು ಉಪ್ಪಿನ ಮಾರಾಟ ಜೋರಾಗಿಯೇ ನಡೆಯಿತು.
ಕೆಲವು ದಾನಿಗಳು ಬಂದ ಎಲ್ಲಾ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಿದರು. ದೇವಾಲಯದ ಅರ್ಚಕರಾದ ಕೃಷ್ಣ ಅಯ್ಯಂಗಾರ್ ಮಾತನಾಡಿ, ಶ್ರಾವಣ ಮಾಸದ ವಿಶೇಷದ ಬಗ್ಗೆ ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು