10:00 PM Thursday3 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ನಂಜನಗೂಡಿನ ಪ್ರವಾಹ ಪೀಡಿತ ಪ್ರದೇಶಕ್ಕೆ ಕಂದಾಯ ಸಚಿವ ಭೇಟಿ: ಶಾಶ್ವತ ಪರಿಹಾರಕ್ಕೆ ಶಾಸಕರ ಜೊತೆ ಚರ್ಚಿಸಿದ ಕೃಷ್ಣ ಬೈರೇಗೌಡ

02/08/2024, 19:23

ಮೋಹನ್ ನಂಜನಗೂಡು ಮೈಸೂರು
info.reporterkarnataka@gmail.com

ಕಪಿಲಾ ನದಿಯ ಪ್ರವಾಹಕ್ಕೆ
ನಂಜನಗೂಡಿನ ತಗ್ಗು ಪ್ರದೇಶದ ಜನರು ತತ್ತರಿಸಿ ಹೋಗಿದ್ದು, ಕಂದಾಯ ಸಚಿವ ಕೃಷ್ಣೇ ಭೈರೇಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರತಿ ವರ್ಷದ ಪ್ರವಾಹದ ಸಂದರ್ಭದಲ್ಲಿ ವಾಸದ ಮನೆಗಳನ್ನು ತೊರೆದು ಜನ ಜಾನುವಾರುಗಳ ಜೊತೆ ಕಾಳಜಿ ಕೇಂದ್ರದ ಮೊರೆ ಹೋಗಬೇಕಾಗುತ್ತದೆ. ಇದರ ಶಾಶ್ವತ ಪರಿಹಾರಕ್ಕಾಗಿ ನಂಜನಗೂಡಿನ ನಂಜುಂಡೇಶ್ವರನ ದೇವಾಲಯದ ಹಿಂಬದಿಯ ತಗ್ಗು ಪ್ರದೇಶಗಳಿಗೆ ರಾಜ್ಯದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಶಾಸಕ ದರ್ಶನ್ ಅವರ ಜೊತೆಗೂಡಿ ವೀಕ್ಷಣೆ ಮಾಡಿದರು. ತೋಪಿನ ಬೀದಿ, ಕಪಿಲ ನದಿಯ ಸ್ನಾನಘಟ್ಟಕ್ಕೆ ತೆರಳಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಹಾನಿಗೊಳಗಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಿರಾಶ್ರಿತರಿಗೆ ಈಗಾಗಲೇ ಕಂದಾಯ ಇಲಾಖೆ ಅಧಿಕಾರಿಗಳು ಕಾಳಜಿ ಕೇಂದ್ರಗಳನ್ನು ತೆರೆದು ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಮುಂದೆ ಯಾವುದೇ ಹಾನಿಯಾಗದಂತೆ ಶಾಶ್ವತ ಪರಿಹಾರ ನೀಡಲು ಮುಖ್ಯಮಂತ್ರಿಗಳ ಜೊತೆ ಚರ್ಚಿಸುತ್ತೇನೆ ಎಂದು ತಿಳಿಸಿದರು.
ನಿರಾಶ್ರಿತರ ಸಮಸ್ಯೆಗಳನ್ನು ಆಲಿಸಿದ ಸಚಿವರು ಎಲ್ಲಾ ರೀತಿಯ ಸೌಲಭ್ಯಗಳನ್ನು ತಾಲೂಕು ಮತ್ತು ಜಿಲ್ಲಾ ಆಡಳಿತದಿಂದ ನೀಡಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಸಕ ದರ್ಶನ್ ಧ್ರುವ ನಾರಾಯಣ್, ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಜೆರಾಲ್ಡ್ ರಾಜೇಶ್, ನಗರಸಭಾ ಆಯುಕ್ತ ನಂಜುಂಡಸ್ವಾಮಿ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.
ಈ ಕುರಿತು ಶಾಸಕ ದರ್ಶನ್ ದ್ರುವ ನಾರಾಯಣ್ ಮಾತನಾಡಿ ಮುಂದೆ ಪದೇ ಪದೇ ಈ ರೀತಿ ಆಗದೇ ಇರುವುದಕ್ಕೆ ಏನಾದರೂ ಶಾಶ್ವತ ಪರಿಹಾರಕ್ಕಾಗಿ ಸಿಎಂ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರವಾಹ ಪೀಡಿತ ಪ್ರದೇಶಗಳ ಭೇಟಿಯ ಬಗ್ಗೆ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು