2:16 AM Monday22 - September 2025
ಬ್ರೇಕಿಂಗ್ ನ್ಯೂಸ್
ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್…

ಇತ್ತೀಚಿನ ಸುದ್ದಿ

ನಂಜನಗೂಡಿನಲ್ಲಿ ಭೀಕರ ಅಪಘಾತ: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿ; ಸವಾರ ಸ್ಥಳದಲ್ಲಿಯೇ ಸಾವು

07/01/2024, 21:02

ಮೋಹನ್ ನಂಜನಗೂಡು ಮೈಸೂರು

info.reporterkarnataka@gmil.com

ಜಮೀನಿನಲ್ಲಿ ಕೆಲಸ ಮುಗಿಸಿ ಮಧ್ಯಾಹ್ನದ ವೇಳೆಯಲ್ಲಿ ಊಟಕ್ಕೆಂದು ತನ್ನ ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದ ರೈತನ ಮೇಲೆ ಡಸ್ಟ್ ತುಂಬಿದ ಹತ್ತು ಚಕ್ರದ ಟಿಪ್ಪರ್ ಲಾರಿ ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲೂಕಿನ ಕಸುವಿನಹಳ್ಳಿ ಮತ್ತು ಹಲ್ಲರೆ ಮುಖ್ಯರಸ್ತೆಯಲ್ಲಿ ನಡೆದಿದೆ.
ಹಲ್ಲರೆ ಗ್ರಾಮದ ಅಬ್ದುಲ್ ಸಲಾಂ (55) ಮೃತ ರೈತ. ಇವರು ಕಸುವಿನಹಳ್ಳಿ ಸಮೀಪದ ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದು ಮಧ್ಯಾಹ್ನದ ಊಟದ ವೇಳೆಯಲ್ಲಿ ಊಟ ಮಾಡುವ ಸಲುವಾಗಿ ಗ್ರಾಮದತ್ತ ತನ್ನ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವ್ಯಕ್ತಿಯ ಮೇಲೆ ಡಸ್ಟ್ ತುಂಬಿದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿಯ ಚಕ್ರಕ್ಕೆ ಸಿಲುಕಿದ ರೈತನ ಮೇಲೆ ಹರಿದು ಸ್ಥಳದಲ್ಲಿ ಸಾವನಪ್ಪಿರುವ ಅವಘಡ ಸಂಭವಿಸಿದೆ. ಸ್ಥಳದಲ್ಲಿ ಮೃತ ರೈತನ ಕುಟುಂಬಸ್ಥರು ಮತ್ತು ಹಲ್ಲರೆ ಗ್ರಾಮಸ್ಥರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಿನನಿತ್ಯ ಗ್ರಾಮದ ಮುಂಭಾಗದಲ್ಲಿ ಬಾರಿ ಗಾತ್ರದ ಟಿಪ್ಪರ್ ಮತ್ತು ಲಾರಿಗಳು ಡಸ್ಟು ಮತ್ತು ಬಾರಿ ಪ್ರಮಾಣದ ಕೋರೆ ಕಲ್ಲು ಮತ್ತು ಜಲ್ಲಿಯನ್ನು ತುಂಬಿಕೊಂಡು ತುಂಬಾ ವೇಗವಾಗಿ ಸಂಚರಿಸುತ್ತಿವೆ.
ಸಾಕಷ್ಟು ಬಾರಿ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಗೆ ಈ ವಿಚಾರವಾಗಿ ಮೌಖಿಕವಾಗಿ ತಿಳಿಸಲಾಗಿದೆ ಆದರೂ ಕೂಡ ಪೊಲೀಸರು ಉಡಾಫೆ ವರ್ತನೆ ತೋರಿ ಚಾಲನೆ ಮಾಡುವ ಟಿಪ್ಪರ್ ಲಾರಿ ಚಾಲಕರಿಗೆ ಯಾವುದೇ ರೀತಿಯ ನಿತಿ ಪಾಠ ಹೇಳಲು ಮುಂದಾಗಿಲ್ಲ. ಇದರಿಂದ ಇಂತಹ ಅವಘಡಗಳು ಸಂಭವಿಸಿ ಪ್ರಾಣ ಕಳೆದುಕೊಳ್ಳುವ ಸನ್ನಿವೇಶ ಎದುರಾಗಿದೆ. ಕೂಡಲೇ ಬಾರಿ ಪ್ರಮಾಣದ ಟಿಪ್ಪರ್ ಮತ್ತು ಲಾರಿ ಚಾಲಕರಿಗೆ ತಿಳಿಹೇಳಿ ಮುಂದಿನ ದಿನಗಳಲ್ಲಿ ಇಂತಹ ಅವಘಡಗಳು ಸಂಭವಿಸದ ರೀತಿಯಲ್ಲಿ ಪೊಲೀಸರು ಎಚ್ಚರಿಕೆ ವಹಿಸಬೇಕು ಎಂದು ಸ್ಥಳದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಈ ಘಟನೆಯ ವಿಚಾರವಾಗಿ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಘಟನೆಗೆ ಕಾರಣವಾದ ಟಿಪ್ಪರ್ ಮತ್ತು ದ್ವಿಚಕ್ರ ವಾಹನವನ್ನು ನಂಜನಗೂಡು ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದುಕೊಂಡು ಮೃತ ರೈತನ ಶವವನ್ನು ನಂಜನಗೂಡು ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು