11:22 PM Wednesday11 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಅಖಿಲ ಭಾರತ ವೀರಶೈವ ಮಹಾಸಭಾ ನಂಜನಗೂಡು ತಾಲೂಕು ಘಟಕಕ್ಕೆ ಜುಲೈ 21ರಂದು ಚುನಾವಣೆ

25/06/2024, 16:01

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಅಖಿಲ ಭಾರತ ವೀರಶೈವ ಮಹಾಸಭಾದ ಆದೇಶದ ಮೇರೆಗೆ ಜುಲೈ 21ರಂದು ನಂಜನಗೂಡು ತಾಲೂಕು ವೀರಶೈವ ಮಹಾಸಭಾ ಘಟಕದ ಚುನಾವಣೆ ನಡೆಸಲಾಗುತ್ತಿದೆ ಎಂದು ತಾಲೂಕು ಸಹಾಯಕ ಚುನಾವಣಾ ಅಧಿಕಾರಿ ಶಿವಲಿಂಗಪ್ಪ ತಿಳಿಸಿದ್ದಾರೆ.

ಇಂದು ತಾಲೂಕು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. ಅಧ್ಯಕ್ಷ ಸ್ಥಾನ ಸೇರಿ 13 ಸಾಮಾನ್ಯ ಹಾಗೂ 7 ಮಹಿಳಾ ಸದಸ್ಯತ್ವ ಸ್ಥಾನ ಸೇರಿ ಒಟ್ಟು 21 ಸದಸ್ಯತ್ವ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಜೂನ್ 27ರಿಂದ ಜುಲೈ 4ರ ವರೆಗೆ ನಾಮಪತ್ರ ಸಲ್ಲಿಸುವುದು ಜುಲೈ ಎಂಟಕ್ಕೆ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ.
ಅಗತ್ಯ ಬಿದ್ದಲ್ಲಿ ಜುಲೈ 21ರಂದು ಭಾನುವಾರ ಬೆಳಿಗ್ಗೆ ಎಂಟರಿಂದ ಸಂಜೆ 5:00 ವರೆಗೆ ಪಟ್ಟಣದ ಶ್ರೀ ಮಲ್ಲನ ಮೂಲೆ ಮಠದಲ್ಲಿ ಚುನಾವಣೆ ನಡೆಯಲಿದೆ. ಮತದಾನದ ನಂತರ ಅಂದೆ ಫಲಿತಾಂಶ ಪ್ರಕಟಿಸಲಾಗುವುದು.
ಜೂನ್ 27ರಿಂದ ಜುಲೈ 4ರ ವರೆಗೆ ಪಟ್ಟಣದ ಕಬ್ಬಳ್ಳಿ ಹಾಸ್ಟೆಲ್ ನಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 3ರವರೆಗೆ ನಾಮಪತ್ರಗಳನ್ನು ವಿತರಿಸಲಾಗುತ್ತದೆ ಎಂದು ಚುನಾವಣಾ ಪ್ರಕ್ರಿಯೆ ಬಗ್ಗೆ ವಿವರಿಸಿದರು.
ಗೋಷ್ಠಿಯಲ್ಲಿ ಚುನಾವಣಾ ಅಧಿಕಾರಿಗಳಾದ ಬಸವರಾಜ್, ಮಾದಪ್ಪ, ತಾಲೂಕು ಮಹಾಸಭಾ ಅಧ್ಯಕ್ಷ ಬುಲೆಟ್ ಮಹದೇವಪ್ಪ, ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಸಹ ಕಾರ್ಯದರ್ಶಿ ಶಿವಬಸಪ್ಪ ಖಜಾಂಚಿ ಮಾಧು, ಮುಳ್ಳೂರು ಶೇಖರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು