11:08 AM Thursday2 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

ಅಖಿಲ ಭಾರತ ವೀರಶೈವ ಮಹಾಸಭಾ ನಂಜನಗೂಡು ತಾಲೂಕು ಘಟಕಕ್ಕೆ ಜುಲೈ 21ರಂದು ಚುನಾವಣೆ

25/06/2024, 16:01

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಅಖಿಲ ಭಾರತ ವೀರಶೈವ ಮಹಾಸಭಾದ ಆದೇಶದ ಮೇರೆಗೆ ಜುಲೈ 21ರಂದು ನಂಜನಗೂಡು ತಾಲೂಕು ವೀರಶೈವ ಮಹಾಸಭಾ ಘಟಕದ ಚುನಾವಣೆ ನಡೆಸಲಾಗುತ್ತಿದೆ ಎಂದು ತಾಲೂಕು ಸಹಾಯಕ ಚುನಾವಣಾ ಅಧಿಕಾರಿ ಶಿವಲಿಂಗಪ್ಪ ತಿಳಿಸಿದ್ದಾರೆ.

ಇಂದು ತಾಲೂಕು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. ಅಧ್ಯಕ್ಷ ಸ್ಥಾನ ಸೇರಿ 13 ಸಾಮಾನ್ಯ ಹಾಗೂ 7 ಮಹಿಳಾ ಸದಸ್ಯತ್ವ ಸ್ಥಾನ ಸೇರಿ ಒಟ್ಟು 21 ಸದಸ್ಯತ್ವ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಜೂನ್ 27ರಿಂದ ಜುಲೈ 4ರ ವರೆಗೆ ನಾಮಪತ್ರ ಸಲ್ಲಿಸುವುದು ಜುಲೈ ಎಂಟಕ್ಕೆ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ.
ಅಗತ್ಯ ಬಿದ್ದಲ್ಲಿ ಜುಲೈ 21ರಂದು ಭಾನುವಾರ ಬೆಳಿಗ್ಗೆ ಎಂಟರಿಂದ ಸಂಜೆ 5:00 ವರೆಗೆ ಪಟ್ಟಣದ ಶ್ರೀ ಮಲ್ಲನ ಮೂಲೆ ಮಠದಲ್ಲಿ ಚುನಾವಣೆ ನಡೆಯಲಿದೆ. ಮತದಾನದ ನಂತರ ಅಂದೆ ಫಲಿತಾಂಶ ಪ್ರಕಟಿಸಲಾಗುವುದು.
ಜೂನ್ 27ರಿಂದ ಜುಲೈ 4ರ ವರೆಗೆ ಪಟ್ಟಣದ ಕಬ್ಬಳ್ಳಿ ಹಾಸ್ಟೆಲ್ ನಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 3ರವರೆಗೆ ನಾಮಪತ್ರಗಳನ್ನು ವಿತರಿಸಲಾಗುತ್ತದೆ ಎಂದು ಚುನಾವಣಾ ಪ್ರಕ್ರಿಯೆ ಬಗ್ಗೆ ವಿವರಿಸಿದರು.
ಗೋಷ್ಠಿಯಲ್ಲಿ ಚುನಾವಣಾ ಅಧಿಕಾರಿಗಳಾದ ಬಸವರಾಜ್, ಮಾದಪ್ಪ, ತಾಲೂಕು ಮಹಾಸಭಾ ಅಧ್ಯಕ್ಷ ಬುಲೆಟ್ ಮಹದೇವಪ್ಪ, ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಸಹ ಕಾರ್ಯದರ್ಶಿ ಶಿವಬಸಪ್ಪ ಖಜಾಂಚಿ ಮಾಧು, ಮುಳ್ಳೂರು ಶೇಖರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು