10:49 PM Thursday19 - June 2025
ಬ್ರೇಕಿಂಗ್ ನ್ಯೂಸ್
Power Minister | ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ; ನೌಕರರ ಬೇಡಿಕೆಗಳಿಗೆ ಸ್ಪಂದನೆ:… ವಿದ್ಯುತ್ ಪ್ರಸರಣ ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ: ಮುಖ್ಯಮಂತ್ರಿ… ಎಂಜಿಎನ್ ವಿವೈ ಕ್ರಿಯಾ ಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ನಗರಾಭಿವೃದ್ಧಿ ಸಚಿವ… Yoga in Karnataka | ವಿಶ್ವ ಯೋಗ ದಿನದಂದು ‘ಯೋಗ ಸಂಗಮ’: ರಾಜ್ಯಾದ್ಯಂತ… Chikkamagaluru | ಕಳಸ: ಮರ ಬಿದ್ದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ ತರೀಕೆರೆ: ಪ್ರವಾಸಿಗರ ಕಾರಿನ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಜಖಂ; ತಪ್ಪಿದ… Bangalore | ಹೆಣಗಳ ಮೇಲಿನ ರಾಜಕೀಯ ಬಿಜೆಪಿಗೆ ಹೊಸದೇನಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ Agriculture | ನೈಸರ್ಗಿಕ ಹಾಗೂ ಸಾವಯವ ಕೃಷಿಗೆ ಸರ್ಕಾರದ ಪ್ರೋತ್ಸಾಹ: ಸಚಿವ ಚಲುವರಾಯಸ್ವಾಮಿ Davanagere | ದಾವಣಗೆರೆ: 1350 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ Bangalore | ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ: ಮಾಜಿ ಪ್ರಧಾನಿ…

ಇತ್ತೀಚಿನ ಸುದ್ದಿ

ನಂಜನಗೂಡು: ಅಂಧಕಾಸುರ ಸಂಹಾರ ಧಾರ್ಮಿಕ ಆಚರಣೆ ನಿರ್ವಿಘ್ನವಾಗಿ ಮುಕ್ತಾಯ

13/01/2025, 15:24

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ದಕ್ಷಿಣ ಕಾಶಿ ನಂಜನಗೂಡು ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನದ ವತಿಯಿಂದ ಪ್ರತಿ ವರ್ಷ ಆರಿದ್ರ ನಕ್ಷತ್ರದಲ್ಲಿ ಆಚರಿಸಿಕೊಂಡು ಬರುತ್ತಿರುವ ಅಂದಕಾಸುರ ವಧೆ ಆಚರಣೆ ನಡೆಯಿತು.
ಪಟ್ಟಣದ ರಾಕ್ಷಸಮಂಟಪ ವೃತ್ತದಲ್ಲಿ ಕಾರ್ಯಕ್ರಮ
ಆಯೋಜನೆ ಮಾಡಲಾಗಿತ್ತು.


ಅಂಧಕಾಸುರ ರಾಕ್ಷಸನನ್ನು ಹೋಲುವ ರಂಗೋಲಿ ಬಿಡಿಸಿ ಅದಕ್ಕೆ ದೇವಾಲಯದ ಪ್ರಧಾನ ಅರ್ಚಕರಾದ ನಾಗಚಂದ್ರ ದೀಕ್ಷಿತ್ ರಿಂದ ಹಲವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಕಳಶ ಪೂಜೆ ಮಾಡಿ ಜೀವಕಳೆ ತುಂಬಿ ದಿಗ್ಬಂಧನ ಹಾಕಲಾಗುತ್ತದೆ.
ನಂತರ ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನದಿಂದ ತಾಂಡವೇಶ್ವರ ಹಾಗೂ ಪಾರ್ವತಿದೇವಿ ಉತ್ಸವ ಮೂರ್ತಿಗಳ ಆಗಮನವಾಗುತ್ತದೆ.
ಉತ್ಸವ ಮೂರ್ತಿ ಹೊತ್ತು ತಂದ ಅರ್ಚಕರಿಂದ ಅಂಧಕಾಸುರನ ರಂಗೋಲಿ ಅಳಿಸಿ ಹಾಕುವ ಕಾರ್ಯ ನಡೆಯುತ್ತದೆ
ಇದಾದ ಬಳಿಕ ಬಂದ ಪಾರ್ವತಿದೇವಿ ಉತ್ಸವ ಮೂರ್ತಿಯಿಂದ ಸಮಾಧಾನ ಪಡಿಸವ ಆಚರಣೆ ಮಾಡಲಾಗುತ್ತದೆ. ಅಲ್ಲಿಂದ ಉತ್ಸವ ಮೂರ್ತಿ ತೆರಳಿದ ನಂತರ ಆವರಣಕ್ಕೆ ನುಗ್ಗಿ ರಂಗೋಲಿ ಅಳಿಸಿ ಹಾಕಿದ ಯುವಕರ ತಂಡ.
ಅಂಧಕಾಸುರನ ರಂಗೋಲಿ ತುಳಿಯುತ್ತಾ ಕುಣಿದು ಕುಪ್ಪಳಿಸಿದ ಯುವಕರು ಹಾಗೂ ಶ್ರೀ ನಂಜುಂಡಪ್ಪನ ಭಕ್ತರು.
ಅಂತಿಮವಾಗಿ ಯಾವುದೇ ತೊಂದರೆ ಇಲ್ಲದೇ ಮುಕ್ತಾಯಗೊಂಡ ಅಂಧಕಾಸುರ ಸಂಹಾರ ಧಾರ್ಮಿಕ ಆಚರಣೆ.
ಕಳೆದ ವರ್ಷ ಮಹಿಷಾಸುರನ ಭಾವಚಿತ್ರ ಬಿಡಿಸಿ ನಡೆಯುತ್ತಿದ್ದ ಆಚರಣೆಯಲ್ಲಿ ಕೆಲವು ದಲಿತ ಸಂಘಟನೆಗಳು ಅಡ್ಡಿಪಡಿಸಿ ಸಂಘರ್ಷಕ್ಕೆ ಕಾರಣವಾಗಿತ್ತು
ಹಾಗಾಗಿ ಈ ಬಾರಿ ಎಚ್ಚರಿಕೆಯಿಂದ ಅಂಧಕಾಸುರನ ಚಿತ್ರವನ್ನೇ ಬಿಡಿಸಿ ಆಚರಣೆ ಮಾಡಿದ ಹಿನ್ನೆಲೆಯಲ್ಲಿ ಯಾವುದೇ ಅಡೆತಡೆ ಇಲ್ಲದೆ ನಿರ್ವಿಘ್ನವಾಗಿ ನಡೆಯಿತು. ಕಳೆದ ವರ್ಷದ ಕಹಿ ಘಟನೆಯಿಂದಾಗಿ ಈ ಬಾರಿ ಯಾವುದೇ ಆಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವಹಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು