5:25 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ನಂಜನಗೂಡು: ಅಂಧಕಾಸುರ ಸಂಹಾರ ಧಾರ್ಮಿಕ ಆಚರಣೆ ನಿರ್ವಿಘ್ನವಾಗಿ ಮುಕ್ತಾಯ

13/01/2025, 15:24

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ದಕ್ಷಿಣ ಕಾಶಿ ನಂಜನಗೂಡು ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನದ ವತಿಯಿಂದ ಪ್ರತಿ ವರ್ಷ ಆರಿದ್ರ ನಕ್ಷತ್ರದಲ್ಲಿ ಆಚರಿಸಿಕೊಂಡು ಬರುತ್ತಿರುವ ಅಂದಕಾಸುರ ವಧೆ ಆಚರಣೆ ನಡೆಯಿತು.
ಪಟ್ಟಣದ ರಾಕ್ಷಸಮಂಟಪ ವೃತ್ತದಲ್ಲಿ ಕಾರ್ಯಕ್ರಮ
ಆಯೋಜನೆ ಮಾಡಲಾಗಿತ್ತು.


ಅಂಧಕಾಸುರ ರಾಕ್ಷಸನನ್ನು ಹೋಲುವ ರಂಗೋಲಿ ಬಿಡಿಸಿ ಅದಕ್ಕೆ ದೇವಾಲಯದ ಪ್ರಧಾನ ಅರ್ಚಕರಾದ ನಾಗಚಂದ್ರ ದೀಕ್ಷಿತ್ ರಿಂದ ಹಲವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಕಳಶ ಪೂಜೆ ಮಾಡಿ ಜೀವಕಳೆ ತುಂಬಿ ದಿಗ್ಬಂಧನ ಹಾಕಲಾಗುತ್ತದೆ.
ನಂತರ ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನದಿಂದ ತಾಂಡವೇಶ್ವರ ಹಾಗೂ ಪಾರ್ವತಿದೇವಿ ಉತ್ಸವ ಮೂರ್ತಿಗಳ ಆಗಮನವಾಗುತ್ತದೆ.
ಉತ್ಸವ ಮೂರ್ತಿ ಹೊತ್ತು ತಂದ ಅರ್ಚಕರಿಂದ ಅಂಧಕಾಸುರನ ರಂಗೋಲಿ ಅಳಿಸಿ ಹಾಕುವ ಕಾರ್ಯ ನಡೆಯುತ್ತದೆ
ಇದಾದ ಬಳಿಕ ಬಂದ ಪಾರ್ವತಿದೇವಿ ಉತ್ಸವ ಮೂರ್ತಿಯಿಂದ ಸಮಾಧಾನ ಪಡಿಸವ ಆಚರಣೆ ಮಾಡಲಾಗುತ್ತದೆ. ಅಲ್ಲಿಂದ ಉತ್ಸವ ಮೂರ್ತಿ ತೆರಳಿದ ನಂತರ ಆವರಣಕ್ಕೆ ನುಗ್ಗಿ ರಂಗೋಲಿ ಅಳಿಸಿ ಹಾಕಿದ ಯುವಕರ ತಂಡ.
ಅಂಧಕಾಸುರನ ರಂಗೋಲಿ ತುಳಿಯುತ್ತಾ ಕುಣಿದು ಕುಪ್ಪಳಿಸಿದ ಯುವಕರು ಹಾಗೂ ಶ್ರೀ ನಂಜುಂಡಪ್ಪನ ಭಕ್ತರು.
ಅಂತಿಮವಾಗಿ ಯಾವುದೇ ತೊಂದರೆ ಇಲ್ಲದೇ ಮುಕ್ತಾಯಗೊಂಡ ಅಂಧಕಾಸುರ ಸಂಹಾರ ಧಾರ್ಮಿಕ ಆಚರಣೆ.
ಕಳೆದ ವರ್ಷ ಮಹಿಷಾಸುರನ ಭಾವಚಿತ್ರ ಬಿಡಿಸಿ ನಡೆಯುತ್ತಿದ್ದ ಆಚರಣೆಯಲ್ಲಿ ಕೆಲವು ದಲಿತ ಸಂಘಟನೆಗಳು ಅಡ್ಡಿಪಡಿಸಿ ಸಂಘರ್ಷಕ್ಕೆ ಕಾರಣವಾಗಿತ್ತು
ಹಾಗಾಗಿ ಈ ಬಾರಿ ಎಚ್ಚರಿಕೆಯಿಂದ ಅಂಧಕಾಸುರನ ಚಿತ್ರವನ್ನೇ ಬಿಡಿಸಿ ಆಚರಣೆ ಮಾಡಿದ ಹಿನ್ನೆಲೆಯಲ್ಲಿ ಯಾವುದೇ ಅಡೆತಡೆ ಇಲ್ಲದೆ ನಿರ್ವಿಘ್ನವಾಗಿ ನಡೆಯಿತು. ಕಳೆದ ವರ್ಷದ ಕಹಿ ಘಟನೆಯಿಂದಾಗಿ ಈ ಬಾರಿ ಯಾವುದೇ ಆಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವಹಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು