2:27 PM Thursday14 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ನಂಜನಗೂಡು: ಅಂಧಕಾಸುರ ಸಂಹಾರ ಧಾರ್ಮಿಕ ಆಚರಣೆ ನಿರ್ವಿಘ್ನವಾಗಿ ಮುಕ್ತಾಯ

13/01/2025, 15:24

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ದಕ್ಷಿಣ ಕಾಶಿ ನಂಜನಗೂಡು ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನದ ವತಿಯಿಂದ ಪ್ರತಿ ವರ್ಷ ಆರಿದ್ರ ನಕ್ಷತ್ರದಲ್ಲಿ ಆಚರಿಸಿಕೊಂಡು ಬರುತ್ತಿರುವ ಅಂದಕಾಸುರ ವಧೆ ಆಚರಣೆ ನಡೆಯಿತು.
ಪಟ್ಟಣದ ರಾಕ್ಷಸಮಂಟಪ ವೃತ್ತದಲ್ಲಿ ಕಾರ್ಯಕ್ರಮ
ಆಯೋಜನೆ ಮಾಡಲಾಗಿತ್ತು.


ಅಂಧಕಾಸುರ ರಾಕ್ಷಸನನ್ನು ಹೋಲುವ ರಂಗೋಲಿ ಬಿಡಿಸಿ ಅದಕ್ಕೆ ದೇವಾಲಯದ ಪ್ರಧಾನ ಅರ್ಚಕರಾದ ನಾಗಚಂದ್ರ ದೀಕ್ಷಿತ್ ರಿಂದ ಹಲವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಕಳಶ ಪೂಜೆ ಮಾಡಿ ಜೀವಕಳೆ ತುಂಬಿ ದಿಗ್ಬಂಧನ ಹಾಕಲಾಗುತ್ತದೆ.
ನಂತರ ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನದಿಂದ ತಾಂಡವೇಶ್ವರ ಹಾಗೂ ಪಾರ್ವತಿದೇವಿ ಉತ್ಸವ ಮೂರ್ತಿಗಳ ಆಗಮನವಾಗುತ್ತದೆ.
ಉತ್ಸವ ಮೂರ್ತಿ ಹೊತ್ತು ತಂದ ಅರ್ಚಕರಿಂದ ಅಂಧಕಾಸುರನ ರಂಗೋಲಿ ಅಳಿಸಿ ಹಾಕುವ ಕಾರ್ಯ ನಡೆಯುತ್ತದೆ
ಇದಾದ ಬಳಿಕ ಬಂದ ಪಾರ್ವತಿದೇವಿ ಉತ್ಸವ ಮೂರ್ತಿಯಿಂದ ಸಮಾಧಾನ ಪಡಿಸವ ಆಚರಣೆ ಮಾಡಲಾಗುತ್ತದೆ. ಅಲ್ಲಿಂದ ಉತ್ಸವ ಮೂರ್ತಿ ತೆರಳಿದ ನಂತರ ಆವರಣಕ್ಕೆ ನುಗ್ಗಿ ರಂಗೋಲಿ ಅಳಿಸಿ ಹಾಕಿದ ಯುವಕರ ತಂಡ.
ಅಂಧಕಾಸುರನ ರಂಗೋಲಿ ತುಳಿಯುತ್ತಾ ಕುಣಿದು ಕುಪ್ಪಳಿಸಿದ ಯುವಕರು ಹಾಗೂ ಶ್ರೀ ನಂಜುಂಡಪ್ಪನ ಭಕ್ತರು.
ಅಂತಿಮವಾಗಿ ಯಾವುದೇ ತೊಂದರೆ ಇಲ್ಲದೇ ಮುಕ್ತಾಯಗೊಂಡ ಅಂಧಕಾಸುರ ಸಂಹಾರ ಧಾರ್ಮಿಕ ಆಚರಣೆ.
ಕಳೆದ ವರ್ಷ ಮಹಿಷಾಸುರನ ಭಾವಚಿತ್ರ ಬಿಡಿಸಿ ನಡೆಯುತ್ತಿದ್ದ ಆಚರಣೆಯಲ್ಲಿ ಕೆಲವು ದಲಿತ ಸಂಘಟನೆಗಳು ಅಡ್ಡಿಪಡಿಸಿ ಸಂಘರ್ಷಕ್ಕೆ ಕಾರಣವಾಗಿತ್ತು
ಹಾಗಾಗಿ ಈ ಬಾರಿ ಎಚ್ಚರಿಕೆಯಿಂದ ಅಂಧಕಾಸುರನ ಚಿತ್ರವನ್ನೇ ಬಿಡಿಸಿ ಆಚರಣೆ ಮಾಡಿದ ಹಿನ್ನೆಲೆಯಲ್ಲಿ ಯಾವುದೇ ಅಡೆತಡೆ ಇಲ್ಲದೆ ನಿರ್ವಿಘ್ನವಾಗಿ ನಡೆಯಿತು. ಕಳೆದ ವರ್ಷದ ಕಹಿ ಘಟನೆಯಿಂದಾಗಿ ಈ ಬಾರಿ ಯಾವುದೇ ಆಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವಹಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು