8:30 PM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ನಂಜನಗೂಡು: ಅಸ್ಪೃಶ್ಯತೆ ಅಳಿಯಲಿ ಮನುಷ್ಯತ್ವ ಉಳಿಯಲಿ: ಮಾರ್ಚ್ 10 ರಂದು ಮೈಸೂರಿನಲ್ಲಿ ವಿಚಾರ ಸಂಕಿರಣ

09/03/2024, 14:39

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಜಾತಿ ವಿನಾಶ ಮತ್ತು ಸರ್ವ ಧರ್ಮ ಸಮನ್ವಯತೆ ಸಾರಿದ ಮಹಾನ್ ಮಾನವತಾವಾದಿಗಳಾದ ವಿಶ್ವಗುರು ಕ್ರಾಂತಿಕಾರಿ ಬಸವಣ್ಣ, ಸಂವಿಧಾನ ಶಿಲ್ಪಿ ಮಾನವತಾವಾದಿ ಡಾ ಬಿ ಆರ್ ಅಂಬೇಡ್ಕರ್, ವಿಶ್ವಮಾನವ ಕುವೆಂಪು ಅವರ ಆಶಯಗಳನ್ನೊಳಗೊಂಡ ಅಸ್ಪೃಶ್ಯತೆ ಅಳಿಯಲಿ ಮನುಷ್ಯತ್ವ ಉಳಿಯಲಿ ಕುರಿತು ವಿಚಾರ ಸಂಕಿರಣವನ್ನು ಮಾರ್ಚ್ 10ರಂದು ಬೆಳಿಗ್ಗೆ 11 ಗಂಟೆಗೆ ಮೈಸೂರು ನಗರದ ಟೌನ್ ಹಾಲಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ದಸಂಸ ತಾಲೂಕು ಸಂಘಟನಾ ಸಂಯೋಜಕರಾದ ಕೃಷ್ಣಮೂರ್ತಿ ಕಂದೇಗಾಲ ಹಾಗೂ ಪುಟ್ಟಬುದ್ದಿ ಮಲ್ಕುಂಡಿ ತಿಳಿಸಿದರು.
ತಾಲೂಕು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.


ದಲಿತ ಸಂಘರ್ಷ ಸಮಿತಿ ಮೈಸೂರು ಜಿಲ್ಲಾ ಶಾಖೆ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದ ಉದ್ಘಾಟನೆಯನ್ನು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಆದ ಎಚ್ ಸಿ ಮಹದೇವಪ್ಪನವರು ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳು ಹಾಗೂ ಆಶಯ ಭಾಷಣಕಾರರಾಗಿ ಅಂಬೇಡ್ಕರ್ ವಾದಿಗಳು ಹಾಗೂ ಅಹಿಂದ ನಾಯಕರು ಆದ ಸಚಿವ ಸತೀಶ್ ಜಾರಕಿಹೊಳಿ ಅವರು ಹಾಗೂ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಡಿ. ತಿಮ್ಮಯ್ಯ, ಮಾಜಿ ಶಾಸಕರಾದ ಯತೀಂದ್ರ ಸಿದ್ದರಾಮಯ್ಯ, ರಾಜ್ಯ ವಾಲ್ಮೀಕಿ ನಿಗಮದ ಮಾಜಿ ಅಧ್ಯಕ್ಷ ಎಸ್. ಸಿ. ಬಸವರಾಜ್ , ಬಸವಣ್ಣ ಸೇರಿದಂತೆ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.
ರಾಜ್ಯ ದಸಂಸ ಮುಖಂಡರಾದ ದೇವಗಳ್ಳಿ ಸೋಮಶೇಖರ್ ರವರು ಪ್ರಾಸ್ತಾವಿಕ ನುಡಿಗಳನ್ನಾಡಿದರೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಸಂಸ ರಾಜ್ಯ ಸಂಸ್ಥಾಪಕ ಸಂಯೋಜಕರಾದ ವಿ ನಾಗರಾಜರವರು ವಹಿಸಲಿದ್ದಾರೆ ಎಂದು ಕಾರ್ಯಕ್ರಮದ ಬಗ್ಗೆ ವಿವರಿಸಿ ಅಂದಿನ ಕಾರ್ಯಕ್ರಮಕ್ಕೆ ನಂಜನಗೂಡು ತಾಲೂಕಿನಿಂದ ನೂರಾರು ಕಾರ್ಯಕರ್ತ ಮುಖಂಡರು ಭಾಗವಹಿಸಲಿದ್ದಾರೆ ಎಂದು ಇದೇ ಸಂದರ್ಭ ತಿಳಿಸಿದರು.
ಗೋಷ್ಠಿಯಲ್ಲಿ ದಸಂಸ ತಾಲೂಕು ಸಂಯೋಜಕರಾದ ಕುಮಾರ್ ಕಳಲೆ, ಸೋಮಣ್ಣ ಬಿಳಿಗೆರೆ, ದಿವಾಕರ್ ಕಂದೇಗಾಲ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು